ಕಲಬುರಗಿ | ಅಮಾನವೀಯವಾಗಿ ಕಾರ್ಮಿಕನ ಮೃತ ದೇಹ ಎಳೆದೊಯ್ದ ಪ್ರಕರಣ; ಸಿಪಿಐಎಂ ಖಂಡನೆ

Date:

ಕಲಬುರಗಿಯ ಸೇಡಂ ತಾಲೂಕಿನ ಕೋಡ್ಲಾ ಗ್ರಾಮದ ಬಳಿ ಸಿಮೆಂಟ್‌ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ಕಾರ್ಮಿಕನ ಮೃತ ದೇಹವನ್ನು ಪ್ರಾಣಿಯ ರೀತಿ ಅಮಾನವೀಯವಾಗಿ ಎಳೆದೊಯ್ದಿರುವುದು ಅತ್ಯಂತ ಖಂಡನೀಯ ಎಂದು ಭಾರತ ಕಮ್ಯುನಿಸ್ಟ್‌ ಪಕ್ಷ ಮಾರ್ಕ್ಸ್‌ವಾದಿ (ಸಿಪಿಐಎಂ) ಜಿಲ್ಲಾ ಕಾರ್ಯದರ್ಶಿ ಕೆ ನೀಲಾ ಅಭಿಪ್ರಾಯಪಟ್ಟರು.

- Advertisement -

ಪತ್ರಿಕಾ ಹೇಳಿಕೆ ನೀಡಿರುವ ಅವರು, “ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿರುವಾಗಲೇ ಅನಾರೋಗ್ಯದಿಂದ ಬಳಲುತ್ತಿದ್ದ ಚಂದನಸಿಂಗ್ (34) ಎಂಬ ಕಾರ್ಮಿಕ ಲೋ ಬಿಪಿಯಾಗಿ ಹೃದಯಾಘಾತದಿಂದ ಮೃತಪಟ್ಟಿಟ್ಟಿದ್ದ. ಅವನ ದೇಹವನ್ನು ರಸ್ತೆಯ ಮೇಲಿನಿಂದ ಪ್ರಾಣಿಗಳ ದೇಹದಂತೆ ಎಳೆದೊಯ್ಯಲಾಗಿದೆ. ಮೃತ ದೇಹವನ್ನು ಗೌರವಯುತವಾಗಿ ಸಾಗಿಸಬೇಕಾದ ವ್ಯವಸ್ಥೆ ಮಾಡಬೇಕಾಗಿರುವುದು ಆಡಳಿತ ಮಂಡಳಿಯ ಜವಾಬ್ದಾರಿಯಾಗಿದೆ. ತನ್ನ ಜವಾಬ್ದಾರಿ ನಿಭಾಯಿಸದ ಆಡಳಿತ ಮಂಡಳಿಯು ಇಂತಹ ಅಮಾನವೀಯತೆಗೆ ಕಾರಣವಾಗಿದೆ. ಸಿಪಿಐಎಂ ಪಕ್ಷ ಈ ಅಮಾನವೀಯತೆಯನ್ನು ತೀವ್ರವಾಗಿ ಖಂಡಿಸುತ್ತದೆ. ಸಿಮೆಂಟ್ ಕಾರ್ಖಾನೆಯ ಮಾಲಿಕರ ಕಾರ್ಮಿಕ ವಿರೋಧಿ ನಡೆ ಕ್ರೌರ್ಯದ ಧೋರಣೆಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಈ ಸುದ್ದಿ ಓದಿದ್ದೀರಾ?: ಕಲಬುರಗಿ | ಕಾರ್ಮಿಕನ ಮೃತದೇಹವನ್ನು ಪ್ರಾಣಿ ರೀತಿ ಎಳೆದೊಯ್ದು ವಿಕೃತಿ ಮೆರೆದ ಸಿಮೆಂಟ್ ಕಂಪನಿ

ಕಾರ್ಮಿಕ ನೀತಿ ವಿರುದ್ಧವಾಗಿ ನಡೆದುಕೊಂಡಿರುವ ಶ್ರೀ ಸಿಮೆಂಟ್‌ ಕಾರ್ಖಾನೆಯ ಮಾಲಿಕರನ್ನು ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳಬೇಕು. ಹಾಗೂ ಮೃತ ಕಾರ್ಮಿಕನ ಕುಟುಂಬಕ್ಕೆ ರೂ.50 ಲಕ್ಷ ಪರಿಹಾರಧನ ಒದಗಿಸಬೇಕು. ಇಂತಹ ಪ್ರಕರಣಗಳು ಮರುಕಳಿಸದಂತೆ ಜಿಲ್ಲಾ ಆಡಳಿತ ಮತ್ತು ಕಾರ್ಮಿಕ ಇಲಾಖೆಯು ಕ್ರಮವಹಿಸಬೇಕು” ಎಂದು ಆಗ್ರಹಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​ಚಿಂತಾಮಣಿ | ಮಳೆ ಮುನ್ಸೂಚನೆ, ಕಲ್ಯಾಣ ಮಂಟಪದ ಅಭಾವ:ಸೆ.18ರ ಜೆಡಿಎಸ್ ಬೃಹತ್ ಸಮಾವೇಶ ಚಿಂತಾಮಣಿಗೆ ಸ್ಥಳಾಂತರ

ನಗರದ ಹೊರವಲಯದ ಜೆ.ಕೆ.ಭವನದಲ್ಲಿ ಇಂದು ತುರ್ತು ಪತ್ರಿಕಾಗೋಷ್ಠಿಯನ್ನು ಆಯೋಜಿಸಲಾಗಿತ್ತು. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ...

ಉಡುಪಿ | ಕಸ್ತೂರಿರಂಗನ್ ವರದಿ: ಸೆ.18ರಂದು ಹೆಬ್ರಿಯಲ್ಲಿ ಗ್ರಾಮಸ್ಥರೊಂದಿಗೆ ಸಿಎಂ ಡಿಕೆಶಿ ಸಂವಾದ

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಕುರಿತು ಜಿಲ್ಲೆಯ ಗ್ರಾಮಸ್ಥರ ಅಭಿಪ್ರಾಯ ಹಾಗೂ...

ರಾಯಚೂರು | ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ: ಪಿಜೆ ಜೇಮ್ಸ್

ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ ಸ್ವರೂಪ ಹೊಂದಿದ್ದು, ಮುಸ್ಲಿಂ ವಿರೋಧಿ...

ಉಡುಪಿ | ಆಲೂರು ಕೊರಗರ ಭೂಮಿ ಸಮಸ್ಯೆ ಬಗೆಹರಿಸಲು ಕ್ರಮ: ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ

ಕುಂದಾಪುರ ತಾಲೂಕಿನ ಆಲೂರು ಮತ್ತು ಹರ್ಕೂರು ಗ್ರಾಮದ ಕೊರಗ ಕುಟುಂಬಗಳ ಭೂಮಿ...