ಕಲಬುರಗಿ | ಈರುಳ್ಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸುವಂತೆ ಆಗ್ರಹಿಸಿ ಎಐಕೆಎಸ್ ಪ್ರತಿಭಟನೆ

Date:

Advertisements

ಈರುಳ್ಳಿ ಬೆಳೆಗಾರರಿಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸುವಂತೆ ಆಗ್ರಹಿಸಿ ಅಖಿಲ ಭಾರತ ಕಿಸಾನ ಸಭಾ (ಎಐಕೆಎಸ್‌) ಕಲಬುರಗಿ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿತು.

ಪ್ರಸ್ತುತ ದೇಶದಲ್ಲಿ ಕೆಲವು ಕಡೆ ಅಕಾಲಿಕ ಮಳೆಯಿಂದಾಗಿ ಹಾಗೂ ಕೆಲವು ಕಡೆ ಬರಗಾಲದ ಕಾರಣಕ್ಕಾಗಿ ಈರುಳ್ಳಿ ಉತ್ಪಾದನೆ ಕಡಿಮೆಯಾಗಿದೆ. ಜನ ಸಾಮಾನ್ಯರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಈರುಳ್ಳಿ ರಫ್ತನ್ನು ನಿಷೇಧಿಸಿದೆ. ಆದರೆ, ಇದೇ ಸಂದರ್ಭದಲ್ಲಿ ರೈತರಿಗೆ ಬೆಲೆ ಹೆಚ್ಚಳದ ಲಾಭ ಸಿಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ರೈತರು ಬೆಳೆದ ಈರುಳ್ಳಿ ಮಾರುಕಟ್ಟೆಗೆ ಬರುವ ಸಮಯದಲ್ಲಿಯೇ ರಫ್ತು ನಿಷೇಧಿಸಿದ್ದರಿಂದ ರೈತರಿಗೆ ಸಗಟು ಮಾರುಕಟ್ಟೆಯಲ್ಲಿ ಸಿಗುತ್ತಿರುವ ಉತ್ತಮ ಬೆಲೆ ಕೂಡ ಸಿಗದೇ, ಉತ್ತಮ ಬೆಲೆಯ ನಿರೀಕ್ಷೆಯಲ್ಲಿದ್ದ ಈರುಳ್ಳಿ ಬೆಳೆದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರ ಸಹಾಯಕ್ಕಾಗಿ ವೈಜ್ಞಾನಿಕ ರೀತಿಯಲ್ಲಿ ಕೇಂದ್ರ ಸರ್ಕಾರ ಬೆಂಬಲ ಬೆಲೆ ಘೋಷಿಸಬೇಕೆಂದು ಅಖಿಲ ಭಾರತ ಕಿಸಾನ ಸಭಾ ಆಗ್ರಹಿಸಿದೆ.

Advertisements

ಸಗಟು ಮಾರುಕಟ್ಟೆಯಲ್ಲಿ ದೇಶದ ಕೆಲವೇ ಕೆಲವು ಮಾಲ್‌ಗಳ ಮಾಲೀಕರು ಈರುಳ್ಳಿಯನ್ನು ಬೆಳೆದ ರೈತರಿಂದ ಕಡಿಮೆ ಬೆಲೆಗೆ ಖರೀದಿಸಿ ಮುಕ್ತ ಮಾರುಕಟ್ಟೆಗೆ ಬಿಡದೇ ದಾಸ್ತಾನು ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆಯೂ ಹೆಚ್ಚಾಗಿದ್ದು ಜನಸಾಮಾನ್ಯರ ಹಿತದೃಷ್ಟಿಯಿಂದ ರಫ್ತು ನಿಷೇಧ ಮಾಡಿದ ಉದ್ದೇಶ ಈಡೇರದೇ ಮಾಲ್‌ಗಳ ಮಾಲೀಕರಿಗೆ ಮಾತ್ರ ಲಾಭವಾಗುತ್ತಿದ್ದು, ಅಕ್ರಮವಾಗಿ ಈರುಳ್ಳಿ ದಾಸ್ತಾನು ಮಾಡಿಕೊಳ್ಳುತ್ತಿರುವವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಡಾ. ಸ್ವಾಮಿನಾಥನ್ ವರದಿಯ ಆಧಾರದ ಮೇಲೆ ಕನಿಷ್ಠ ಬೆಂಬಲ ಬೆಲೆ ಘೋಸಿಸಬೇಕೆಂದು ಆಗ್ರಹಿದ್ದಾರೆ.

ಈ ವೇಳೆ ರಾಜ್ಯ ಕಾರ್ಯಾಧ್ಯಕ್ಷ ಮೌಲಾ ಮುಲ್ಲಾ, ಮೈಲಾರಿ ಜೋಗೆ, ಮಹಮ್ಮದ್ ರಫಿ, ರುದ್ರವಾಡಿ, ಭೀಮಾಶಂಕರ ಮಾಡಿಯಾಳ, ಸಾಜಿದ ಅಹ್ಮದ ದಿಗ್ಗಾಂವಕರ, ಹಣಮಂತ ಪಡೆರ, ಪದ್ಮಾಕರ ಜಾನಿಬ, ಕಲ್ಯಾಣಿ ಅವಟೆ, ಗಣಜಲಖೇಡ್ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X