ಕಲಬುರಗಿ | ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಗೈರು ಆರೋಪ: ಕರ್ತವ್ಯಲೋಪದ ವಿರುದ್ಧ ಕ್ರಮಕ್ಕೆ ಆಗ್ರಹ

Date:

ಅಫಜಲಪುರ ತಾಲೂಕಿನ ಸ್ಟೇಷನ್ ಗಾಣಗಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತುರ್ತು ಸಂದರ್ಭದಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಲಭ್ಯವಿರದೆ ಗಾಯಾಳುವಿಗೆ ಚಿಕಿತ್ಸೆ ದೊರೆಯದ ಆರೋಪ ಕೇಳಿಬಂದಿದ್ದು, ಕರ್ತವ್ಯಲೋಪವೆಸಗಿದ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪ್ರಬುದ್ಧ ಭಾರತ ಸಂಘರ್ಷ ಸಮಿತಿ ಆಗ್ರಹಿಸಿದೆ.

- Advertisement -

ಈ ಕುರಿತು ಗುರುವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಸಂಸ್ಥಾಪಕ ಸಂಚಾಲಕಿ ಅಶ್ವಿನಿ ಮದನಕರ, ‘ಸಂಘಟನೆಯ ಮುಖಂಡರು, ಸೆ.16ರಂದು ಸಂಜೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ದತ್ತಾತ್ರೇಯ ತಂದೆ ಶರಣಬಸಪ್ಪ ಬಬಲಾದ ಅವರನ್ನು ಸಂಜೆ ಸುಮಾರು 6.10ಕ್ಕೆ ಸ್ಟೇಷನ್ ಗಾಣಗಾಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರಲಾಗಿತ್ತು. ಆದರೆ ಆ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ಯಾವುದೇ ಸಿಬ್ಬಂದಿ ಇರಲಿಲ್ಲ’ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

‘ಗಾಯಾಳುವಿಗೆ ಅಂಬ್ಯುಲೆನ್ಸ್‌ ನೆರವು ಕೋರಿದಾಗ ಚಾಲಕ ಮದ್ಯಪಾನ ಮಾಡಿದ್ದ ಕಾರಣ ಸೇವೆ ಪಡೆಯಲು ಸಾಧ್ಯವಾಗಲಿಲ್ಲ. ಬಳಿಕ ಸಾರ್ವಜನಿಕರು ನಿಂಬರ್ಗಾದಿಂದ ಅಂಬ್ಯುಲೆನ್ಸ್‌ ತರಿಸಿ ಗಾಯಾಳುವನ್ನು ಕಲಬುರಗಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು’ ಎಂದು ತಿಳಿಸಿದರು.

‘ಸೆಪ್ಟೆಂಬರ್ 17ರಂದು ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ, ಆಸ್ಪತ್ರೆಯಲ್ಲಿ ಅಗತ್ಯ ಮೂಲಸೌಕರ್ಯಗಳ ಕೊರತೆ ಕಂಡುಬಂದಿದೆ. ಹಿಂದಿನ ದಿನ ಗಾಯಾಳುವಿಗೆ ಚಿಕಿತ್ಸೆ ನೀಡಲು ಸಿಬ್ಬಂದಿ ಇರಲಿಲ್ಲ ಎಂಬುದನ್ನು ಆರೋಗ್ಯ ಕೇಂದ್ರದ ವೈದ್ಯರೂ ಒಪ್ಪಿಕೊಂಡಿದ್ದಾರೆ’ ಎಂದು ಆರೋಪಿಸಿದರು.

‘ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಕುರಿತು ಹಲವು ಗಂಭೀರ ಆರೋಪಗಳನ್ನು ಮಾಡಿರುವ ಅವರು, ತುರ್ತು ಸಂದರ್ಭದಲ್ಲಿ ರೋಗಿಗಳಿಗೆ ಚಿಕಿತ್ಸೆ ದೊರೆಯದ ಪರಿಸ್ಥಿತಿಗೆ ಕಾರಣರಾದ ಸಿಬ್ಬಂದಿ ವಿರುದ್ಧ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

‘ಆರೋಗ್ಯ ಕೇಂದ್ರದ ಸಭಾಂಗಣದ ಧೂಳು ತುಂಬಿದ ಮೂಲೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಬಸವಣ್ಣನವರ ಭಾವಚಿತ್ರಗಳನ್ನು ಇರಿಸಿ, ಅವುಗಳ ಮೇಲೆ ಹಳೆಯ ನೀರಿನ ಬಾಟಲಿಗಳನ್ನು ಇಟ್ಟಿರುವುದು ಹಾಗೂ ಪಕ್ಕದಲ್ಲಿ ಹಳೆಯ ಚಪ್ಪಲಿ ಇಟ್ಟಿರುವುದು ಕಂಡುಬಂದಿದೆ ಎಂದು ಆರೋಪಿಸಿದರು. ಈ ಕುರಿತು ವೈದ್ಯಾಧಿಕಾರಿಯನ್ನು ಪ್ರಶ್ನಿಸಿದಾಗ, ಯಾರೋ ಉದ್ದೇಶಪೂರ್ವಕವಾಗಿ ಮಾಡಿದ್ದಾರೆ ಹಾಗೂ ಆಸ್ಪತ್ರೆಯ ಒಳಗೆ ನಡೆಯುವ ಪ್ರತಿಯೊಂದು ವಿಚಾರವನ್ನು ಗಮನಿಸಲು ಸಾಧ್ಯವಿಲ್ಲ ಎಂದು ಉತ್ತರಿಸಿದ್ದಾರೆ’ ಎಂದು ತಿಳಿಸಿದರು.

3160284

‘ಹೆರಿಗೆ ಕೊಠಡಿ ಸ್ವಚ್ಛತೆಯ ಕೊರತೆಯಿಂದ ಧೂಳು ತುಂಬಿದ್ದು, ಸೂಕ್ತ ವ್ಯವಸ್ಥೆಗಳಿಲ್ಲ. ರೋಗಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆಯೂ ಇಲ್ಲ. ಆಸ್ಪತ್ರೆಗೆ ಬರುವ ರೋಗಿಗಳಿಂದ ಹಣಕ್ಕೆ ಬೇಡಿಕೆ ಇಡಲಾಗುತ್ತಿದೆ ಎಂಬ ದೂರುಗಳಿದ್ದು, ಈ ಬಗ್ಗೆ ತನಿಖೆ ನಡೆಸಬೇಕು’ ಎಂದು ಆಗ್ರಹಿಸಿದರು.

‘ಆಸ್ಪತ್ರೆ ಆವರಣದಲ್ಲಿರುವ ಸಿಬ್ಬಂದಿ ವಸತಿಗೃಹಗಳಲ್ಲಿ ಯಾರೂ ವಾಸವಿಲ್ಲದ ಕಾರಣ ತುರ್ತು ಸಂದರ್ಭದಲ್ಲಿ ವೈದ್ಯಕೀಯ ಸಿಬ್ಬಂದಿ ತಕ್ಷಣ ಲಭ್ಯವಾಗುವ ಸಾಧ್ಯತೆ ಕಡಿಮೆಯಾಗಿದೆ. ಸರ್ಕಾರಿ ಕಟ್ಟಡ ಹಾಗೂ ಬೆಲೆಬಾಳುವ ವೈದ್ಯಕೀಯ ಉಪಕರಣಗಳು ಸಮರ್ಪಕ ನಿರ್ವಹಣೆಯಿಲ್ಲದೆ ದುಸ್ಥಿತಿಗೆ ತಲುಪಿವೆ’ ಎಂದು ಆರೋಪಿಸಿದರು.

ಇದಲ್ಲದೆ, ‘ಕೆಲ ಸಿಬ್ಬಂದಿ ಆಸ್ಪತ್ರೆಗೆ ಬಂದು ಹಾಜರಾತಿ ದಾಖಲಿಸಿ ಬಳಿಕ ಮನೆಗೆ ತೆರಳುತ್ತಾರೆ. ಇದರಿಂದ ಆಸ್ಪತ್ರೆಗೆ ಬರುವ ರೋಗಿಗಳಿಗೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ದೊರೆಯುತ್ತಿಲ್ಲ’ ಎಂದು ದೂರಿದರು.

‘ಆರೋಗ್ಯ ಕೇಂದ್ರದ ಅವ್ಯವಸ್ಥೆ ಹಾಗೂ ಕರ್ತವ್ಯಲೋಪದ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರೆಂದು ಸಾಬೀತಾದ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿ ವಿರುದ್ಧ ಶಿಸ್ತು ಮತ್ತು ಕಾನೂನು ಕ್ರಮ ಕೈಗೊಳ್ಳಬೇಕು. ಆಸ್ಪತ್ರೆಯಲ್ಲಿ ಅಗತ್ಯ ವೈದ್ಯಕೀಯ ಸಿಬ್ಬಂದಿ, ಮೂಲಸೌಕರ್ಯ, ಕುಡಿಯುವ ನೀರು ಹಾಗೂ ತುರ್ತು ಚಿಕಿತ್ಸಾ ಸೌಲಭ್ಯಗಳನ್ನು ಕೂಡಲೇ ಕಲ್ಪಿಸಬೇಕು’ ಎಂದು ಅವರು ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಚಾಕುವಿನಿಂದ ಇರಿದು ಯುವಕನ ಬರ್ಬರ ಕೊಲೆ

ಪತ್ರಿಕಾ ಗೋಷ್ಠಿಯಲ್ಲಿ ರಾಜ್ಯ ಸಂಚಾಲಕಿ ಭಾಗ್ಯಲಕ್ಷ್ಮೀ ಮೋತರಾಜ, ಲಕ್ಷ್ಮೀಕಾಂತ ಬಬಲಾದ, ಪ್ರಬುದ್ಧ ಭಾರತ ಸಂಘರ್ಷ ಸಮಿತಿ ಸಂಚಾಲಕರಾದ ದಿಲೀಪ ಕಾಯನಕರ ಹಾಗೂ ಭವಾನಿ ಪ್ರಸಾದ ಶಿವಕೇರಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಸಿಎಂ ಭೇಟಿ: ಕಾಂಗ್ರೆಸ್ ಸರ್ಕಾರ ಜನಪರ ಕಾಳಜಿಗೆ ಸಾಕ್ಷಿಯಾಗಿದೆ; ಹೆಚ್.ಪಿ ಮಂಜೇಗೌಡ

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ ಮಾತನಾಡಿ,"ಕಸ್ತೂರಿ ರಂಗನ್...

‌ಮೈಸೂರು ವಿವಿ ಸಂಜೆ ಕಾಲೇಜು: ಸಾಂಸ್ಕೃತಿಕ ಹಾಗೂ NSS ಚಟುವಟಿಕೆಗಳಿಗೆ ಚಾಲನೆ

ಮೈಸೂರು ವಿವಿ ಸಂಜೆ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಸಮಿತಿಯಿಂದ 2026-27ನೇ ಶೈಕ್ಷಣಿಕ...

ಚಿಕ್ಕಮಗಳೂರು | ಮಲೆನಾಡಿನ ಕರಾಳ ಅರಣ್ಯ ಕಾಯ್ದೆ ರದ್ದಾಗಬೇಕು; ಹಕ್ಕು ವಂಚಿತರಿಗೆ ಹಕ್ಕು ಸಿಗಬೇಕು; ಕೆ.ಎಲ್ ಅಶೋಕ್ 

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಜನಶಕ್ತಿ ರಾಜ್ಯ ಕಾರ್ಯದರ್ಶಿ ಕೆ. ಎಲ್...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10 ದಿನಗಳಲ್ಲಿ ಘೋಷಣೆ – ಶಾಸಕ ಅಶೋಕ ಪಟ್ಟಣ

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ...