ಕಲಬುರಗಿ | ಅಂಬೇಡ್ಕರ್ ಜಯಂತಿ : ಕಚೇರಿಗಳಲ್ಲಿ ಜಿಪಿಎಸ್ ಫೋಟೋ ಅಳವಡಿಕೆಗೆ ದಸಂಸ ಆಗ್ರಹ

Date:

Advertisements

ಏ.14ರಂದು ನಡೆಯುವ ಡಾ. ಬಿ.ಆರ್.ಅಂಬೇಡ್ಕರ್ ಅವರ ಜಯಂತೋತ್ಸವದಲ್ಲಿ ಕಾರ್ಯಕ್ರಮದಲ್ಲಿ ಜೇವರ್ಗಿ ತಾಲೂಕಿನ ಎಲ್ಲಾ ಕಿರಿಯ, ಹಿರಿಯ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಎಲ್ಲಾ ಶಿಕ್ಷಕರು, ಸಿಪಾಯಿಗಳು ಕಡ್ಡಾಯವಾಗಿ ಭಾಗವಹಿಸಿಬೇಕು. ಅಂಬೇಡ್ಕರ್ ಜಯಂತಿ ಆಚರಣೆಯ ಜಿಪಿಎಸ್ ಪೋಟೋ ತೆಗೆದು ಕಚೇರಿಗಳಲ್ಲಿ ಅಳವಡಿಸುವಂತೆ ದಲಿತ ಸಂಘರ್ಷ ಸಮಿತಿ ಜಂಟಿ ಸಮಿತಿ ಆಗ್ರಹಿಸಿದೆ.

ಅಂಬೇಡ್ಕರ್‌ ಜಯಂತಿ ಆಚರಣೆಯ ಜಿಪಿಎಸ್‌ ಫೋಟೊಗಳನ್ನು ದಸಂಸ ಸಂಘಟನೆಗಳ ಗಮನಕ್ಕೆ ತರುವಂತೆ ಆದೇಶಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ (ಮಾವಳ್ಳಿ ಶಂಕರ ಹಾಗೂ ಗುರುಪ್ರಸಾದ ಕೆರೆಗೂಡು) ತಾಲೂಕಾ ಜಂಟಿ ಸಮಿತಿ ವತಿಯಿಂದ ಜೇವರ್ಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ತಾಲೂಕು ಸಂಚಾಲಕ ಸಿದ್ರಾಮ್ ಕಟ್ಟಿ ಮಾತನಾಡಿ, ʼಏಪ್ರಿಲ್ 10 ರಂದು ಶಾಲಾ ಶೈಕ್ಷಣಿಕ ವರ್ಷ ಮುಕ್ತಾಯಗೊಳ್ಳುತ್ತಿದ್ದು. ಏಪ್ರಿಲ್ 14 ರಂದು ಅಂಬೇಡ್ಕರ್ ಅವರ ಜನ್ಮದಿನೋತ್ಸವ ಅಂಗವಾಗಿ ಸರಕಾರದ ಆದೇಶದಂತೆ ಜೇವರ್ಗಿ ಹಾಗೂ ಯಡ್ರಾಮಿ ತಾಲೂಕಿನ ಎಲ್ಲಾ ಕಿರಿಯ, ಹಿರಿಯ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಶಿಕ್ಷಕರು ಹಾಗೂ ಸಿಪಾಯಿಗಳು ಕಡ್ಡಾಯವಾಗಿ ಹಾಜರಿರಬೇಕು.

Advertisements

ಜಿಪಿಎಸ್ ಫೋಟೋ ತೆಗೆಯುವ ಮುಖಾಂತರ ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮದಿನೋತ್ಸವವನ್ನು ಆಚರಿಸುವಂತೆ ಆದೇಶಿಸಿ, ಜಿಪಿಎಸ್ ಫೋಟೋ ಕ್ಷೇತ್ರ ಶಿಕ್ಷಣಾಧಿಕಾರಿ ಇಲಾಖೆಗೆ ಹಾಗೂ ನಮ್ಮ ಸಂಘಟನೆಗೆ ಸಲ್ಲಿಸುವಂತೆ ಆಗ್ರಹಿಸಿದರು.

ಇದನ್ನೂ ಓದಿ: ಕಲಬುರಗಿ | ಅಪ್ರಾಪ್ತರಿಗೆ ಬೈಕ್ : ಪೋಷಕರಿಗೆ ₹75 ದಂಡ

ಸಂಘಟನೆಯ ಪ್ರಮುಖರಾದ ಸಿದ್ದು ಕೆರೂರ್, ಶ್ರೀಹರಿ ಕರಕಳ್ಳಿ, ಜೈಭೀಮ್ ನರಿಬೊಳ, ಶರಣು ಲಖಣಾಪುರ, ಶಿವಕುಮಾರ್ ಹೆಗಡೆ, ಸಂಗಣ್ಣ ಹೊಸಮನಿ, ರೇವಣಸಿದ್ದ ಬಿರಾಳ, ಯಶ್ವವಂತ ಬಡಗೇರ, ಶ್ರೀಮಂತ ಕೀಲೆದಾರ, ಭೀರಲಿಂಗ ಕಲ್ಲೂರ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X