‌ಕಲಬುರಗಿ | ಅಂಬೇಡ್ಕರ್ ವಿಚಾರಗಳು ನಮಗೆ ಸ್ಪೂರ್ತಿ ನೀಡುತ್ತವೆ: ತಹಶೀಲ್ದಾರ್ ಜಮಖಂಡಿ

Date:

Advertisements

ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್‌ ಅವರ ವಿಚಾರಗಳನ್ನು ನಾವು ಪ್ರತಿನಿತ್ಯ ಮೆಲುಕು ಹಾಕುತ್ತಿದ್ದರೆ ನಮಗೆ ಗೊತ್ತಿಲ್ಲದಂತೆ ನಮ್ಮೊಳಗೊಂದು ಶಕ್ತಿ ತಯಾರಾಗುತ್ತದೆ ಎಂದು ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕು ದಂಡಾಧಿಕಾರಿ ಸುಬ್ಬಣ್ಣ ಜಮಖಂಡಿ ತಿಳಿಸಿದರು.

ಚಿಂಚೋಳಿ ಪಟ್ಟಣದ ಬಿಸಿಎಂ ಕಾಲೇಜು ವಸತಿ ನಿಲಯದಲ್ಲಿ ವಿದ್ಯಾರ್ಥಿ ಸಂಘಟನೆಗಳ ಮಹಾ ಒಕ್ಕೂಟ ಹಾಗೂ ರಾಷ್ಟ್ರೀಯ ಮೂಲನಿವಾಸಿ ಕೂಲಿ ಕಬ್ಬಲಿಗ ಯುವ ಸಂಘಟನೆ ವತಿಯಿಂದ
ಡಾ.ಬಿ.ಆರ್ ಅಂಬೇಡ್ಕರ್ ಅವರ 67ನೇ ಪರಿನಿರ್ವಾಣ ದಿನದ ಅಂಗವಾಗಿ ಅಂಬೇಡ್ಕರ್ ದೃಷ್ಟಿಯಲ್ಲಿ ವಿದ್ಯಾರ್ಥಿಗಳ ಪಾತ್ರ ಕುರಿತು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“ವಿದ್ಯಾರ್ಥಿಗಳು ತಮ್ಮ ಅಧ್ಯಯನದ ಜೊತೆ ಜೊತೆಗೆ ಮಹಾತ್ಮರ, ಶರಣರ, ಸಂತರ ವಿಚಾರಗಳನ್ನು ಅರಿತು ನಡೆದರೆ ಬಾಳು ಸಾರ್ಥಕವಾಗುತ್ತದೆ” ಎಂದರು.

Advertisements

ಮುಖ್ಯ ಅತಿಥಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗುರುಪ್ರಸಾದ್ ಮಾತನಾಡಿ, “ಭಾರತ ರಾಷ್ಟ್ರವಲ್ಲದೆ ಬಹುತೇಕ ರಾಷ್ಟ್ರಗಳು ತಮ್ಮ ರಾಷ್ಟ್ರದ ಧ್ವಜವನ್ನು ಅರ್ಧಕ್ಕೆ ಇಳಿಸಿ ಬಾಬಾ ಸಾಹೇಬ್ ಅಂಬೇಡ್ಕರ್‌ ಅವರಿಗೆ ಗೌರವ ನಮನ ಸಲ್ಲಿಸುವುದನ್ನು ನೋಡಿದರೆ ಅಂಬೇಡ್ಕರ್ ಅವರಲ್ಲಿರುವ ಪಾಂಡಿತ್ಯ ಎಂತಹದ್ದೆಂದು ನಾವು ತಿಳಿದುಕೊಳ್ಳಬೇಕಾಗಿದೆ” ಎಂದರು.

ಸರ್ಕಾರಿ ಪದವಿ ಪೂರ್ವ ಕಾಲೇಜು ಕಾಳಗಿಯ ಹಿರಿಯ ಉಪನ್ಯಾಸಕ ಪ್ರೊ ಸುಭಾಷ್ ಶೀಲವಂತ ಅವರು ಸುದೀರ್ಘವಾಗಿ ಉಪನ್ಯಾಸ ನೀಡಿದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | 5 ವರ್ಷದಲ್ಲಿ ವಸತಿ ಶಾಲೆಗಳ 92 ಮಂದಿ ವಿದ್ಯಾರ್ಥಿಗಳ ಆತ್ಮಹತ್ಯೆ

ಮುಖ್ಯ ಅತಿಥಿ ಈಡಿಗ ಸಮಾಜದ ಅಧ್ಯಕ್ಷ ಚಂದ್ರಶೇಖರ ಗುತ್ತೆದಾರ, ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಸಂಜೀವಕುಮಾರ್‌ ಪಾಟೀಲ್, ಕೂಲಿ ಸಮಾಜದ ಮುಖಂಡ ಶರಣು ನಾಟಿಕಾರ, ಅನುಸೂಯ ಚೌವ್ಹಾಣ್, ಮಾರುತಿ ಗಂಜಗಿರಿ, ಗೋಪಾಲ ಗಾರಂಪಳ್ಳಿ, ಮೋಹನ ಐನಾಪೂರ, ಹರ್ಷವರ್ಧನ, ದೀಪಾ, ವಿಜಯಲಕ್ಷ್ಮಿ, ಸಾಗರ, ವಿಜಯ ಸೇರಿದಂತೆ ಇತರರು ಇದ್ದರು.

ವರದಿ: ಸಿಟಿಜ಼ನ್ ಜರ್ನಲಿಸ್ಟ್ ಮಾರುತಿ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X