ಕಲಬುರಗಿ | ಅಂಬಿಗರ ಚೌಡಯ್ಯ 904ನೇ ಜಯಂತೋತ್ಸವ; ಅದ್ದೂರಿ ಪುತ್ಥಳಿ ಮೆರವಣಿಗೆ

Date:

Advertisements

ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದಲ್ಲಿ ʼನಿಜಶರಣ ಅಂಬಿಗರ ಚೌಡಯ್ಯನವರ 904ನೇ ಜಯಂತೋತ್ಸವʼ ಕಾರ್ಯಕ್ರಮವನ್ನು ತಾಲೂಕ ಯುವ ಕೋಲಿ ಸಮಾಜ ಅದ್ದೂರಿಯಾಗಿ ಅಂಬಿಗರ ಚೌಡಯ್ಯನವರ ಭವ್ಯ ಪುತ್ಥಳಿಯ ಮೇರವಣಿಗೆ ಮಾಡಿದರು.

ಸಮಾಜದ ಹೆಣ್ಮು ಮಕ್ಕಳು ಕುಂಭ, ಕಳಸಹೊತ್ತು ಮೆರವಣಿಗೆಯಲ್ಲಿ ಭಾಗವಹಿಸಿದರೆ, ಪುಟ್ಟ ಮಕ್ಕಳು ಅಂಬಿಗರ ಚೌಡಯ್ಯನವರ ಹಾಡಿಗೆ ಕೋಲಾಟ ಆಡುವುದರ ಮೂಲಕ ಗಮನ ಸೆಳೆದರು.

ಪಟ್ಟಣದ ಅಂಬಿಗರ ಚೌಡಯ್ಯ ಕಲ್ಯಾಣ ಮಂಟಪದಿಂದ ಪ್ರಾರಂಭವಾದ ಮೆರವಣಿಗೆಯು ಸ್ಟೇಷನ್ ರಸ್ತೆ, ನಾಗಾವಿ ವೃತ್ತ, ಜನತಾ ವೃತ್ತ, ಭುವನೇಶ್ವರಿ ವೃತ್ತ, ಅಂಬೇಡ್ಕರ್ ವೃತ್ತ, ಬಸ್ ನಿಲ್ದಾಣ ರಸ್ತೆ, ಬಸವೇಶ್ವರ ವೃತ್ತದ ಮೂಲಕ ಲಾಡ್ಡಿಂಗ್ ಕ್ರಾಸ್ ಹತ್ತಿರ ಇರುವ ಅಂಬಿಗರ ಚೌಡಯ್ಯ ನವರ ವೃತ್ತದಲ್ಲಿ ಕೊನೆಗೊಂಡಿತ್ತು. ಮೆರವಣಿಗೆಯುದ್ದಕ್ಕೂ ಡಿಜೆ ಸೌಂಡ್‌ಗೆ ಯುವಕರು ಕುಣಿದು ಕುಪ್ಪಳಿಸಿದರು.

Advertisements

ಅದ್ಧೂರಿಯಾಗಿ ನಡೆದ ಅಂಬಿಗರ ಚೌಡಯ್ಯನವರ ಭವ್ಯ ಮೆರವಣಿಗೆಯಲ್ಲಿ ಸಮಾಜದ ಶ್ರೀಗಳಾದ ಮಹಲರೋಜಾ ಮಲ್ಲಿಕಾರ್ಜುನ ಮುತ್ಯಾ, ಹುಬ್ಬಳ್ಳಿಯ ರಾಜಗುರು ಸ್ವಾಮೀಜಿ, ಅಲ್ಲೂರಿನ ಮೌನೇಶ್ವರ ಮಹಾರಾಜ್ ಅವರು ಭಾಗವಹಿಸಿದ್ದರು.

ಈ ವೇಳೆ ಮಾತನಾಡಿದ ಯುವ ಕೋಲಿ ಸಮಾಜದ ತಾಲೂಕು ಗೌರವಾಧ್ಯಕ್ಷ ಶಿವಕುಮಾರ ಸುಣಗಾರ, ಸಮಾಜದ ಯುವ ಪೀಳಿಗೆಯು ದುಶ್ಚಟಗಳಿಗೆ ದಾಸನಾಗದೆ ಶೈಕ್ಷಣಿಕವಾಗಿ, ಆರ್ಥಿಕವಾಗಿ ಸಾಮಾಜಿಕವಾಗಿ ಸಮಾಜದ ಏಳಿಗೆಗಾಗಿ ಸಂಘಟಿತರಾಗುವ ಉದ್ದೇಶದಿಂದ ಮಾಡಲಾದ ಭವ್ಯ ಮೆರವಣಿಗೆಯಲ್ಲಿ ತಾಲೂಕಿನ ಎಲ್ಲಾ ಕೋಲಿ ಸಮಾಜದ ಯುವಕರು ಭಾಗವಹಿಸಿರುವುದನ್ನು ನೋಡಿದರೆ ಮುಂದೊಂದು ದಿನ ನಮ್ಮ ಸಮಾಜ ಸರ್ವಾಂಗೀಣ ಅಭಿವೃದ್ಧಿಯಾಗುವುದರಲ್ಲಿ ಅನುಮಾನವೇ ಇಲ್ಲ ಎಂದರು.

ಯುವ ಕೋಲಿ ಸಮಾಜದ ತಾಲೂಕಾಧ್ಯಕ್ಷ ಗುಂಡು ಐನಾಪೂರ ಮಾತನಾಡಿ, ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಅಂಬಿಗರ ಚೌಡಯ್ಯನವರ ಪುತ್ಥಳಿಯ ಭವ್ಯ ಮೆರವಣಿಗೆಯಲ್ಲಿ ಸಮಾಜದ ಯುವಕರು ಶಾಂತಿಯುತವಾಗಿ ಮತ್ತು ಆಸಕ್ತಿಯಿಂದ ಭಾಗವಹಿಸದ್ದಾಗಿ ಎಲ್ಲರಿಗೂ ತುಂಬು ಹೃದಯದ ಧನ್ಯವಾದಗಳು ಸಲ್ಲಿಸುತ್ತೆನೆ ಎಂದರು.

ಈ ಸಂದರ್ಭದಲ್ಲಿ ನಗರಾಧ್ಯಕ್ಷ ರಾಜೇಶ್ ಹೋಳಿಕಟ್ಟಿ, ಶಿವಕುಮಾರ ಸುಣಗಾರ, ಮಲ್ಲಿಕಾರ್ಜುನ ಎಮ್ಮೆನೋರ, ಕಾಶಪ್ಪ ಡೋಣಗಾಂವ, ಮೌನೇಶ ಭಂಕಲಗಿ, ಶಂಕರ ಐನಾಪೂರ, ಮಹೇಶ ಸಾತನೂರ, ಶರಣು ಡೋಣಗಾಂವ, ಅರುಣ ಯಾಗಾಪೂರ, ದೇವರಾಜ ತಳವಾರ, ದೇವು ದಿಗ್ಗಾಂವ, ಬಸ್ಸು ಮೈನಾಳಕ‌ರ್, ಸೋಮು ಐನಾಪೂರ, ಭೀಮಾಶಂಕರ ಹೋಳಿಕಟ್ಟಿ, ಗೂಳಿ ಡಿಗ್ರಿ ಸಂಗಮೇಶ ಯರಗಲ್, ಮಲ್ಲಿಕಾರ್ಜುನ ಅಲ್ಲೂರಕರ್, ಕೃಷ್ಣಾರಾವೂರ, ಆನಂದ ಯರಗಲ್, ಸೇರಿದಂತೆ ಅನೇಕರು ಭಾಗವಹಿಸಿದ್ದರು.ಈ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X