ಕಲಬುರಗಿ | ಅಂಗನವಾಡಿ ಶಾಲೆಗಳು ಯಾವುದೇ ಕಾನ್ವೆಂಟ್ ಶಾಲೆಗಳಿಗೂ ಕಮ್ಮಿ ಇಲ್ಲ

Date:

Advertisements

ಕಲಬುರಗಿ ಜಲ್ಲೆಯ ಚಿತ್ತಾಪುರ ತಾಲೂಕಿನಲ್ಲಿರುವ ಅಂಗನವಾಡಿ ಶಾಲೆಗಳು ಯಾವುದೇ ಕಾನ್ವೆಂಟ್ ಶಾಲೆಗಳಿಗೂ ಕಮ್ಮಿ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ನವೀನ್ ಕುಮಾರ್ ಹೇಳಿದರು.

ತಾಲೂಕಿನ ದಂಡೋತಿ ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಹಾಗೂ ಅಜೀಮ್ ಪ್ರೇಮ್ ಜೀ ಫೌಂಡೇಶನ್ ಜಿಲ್ಲಾ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ನಡೆದ ಬಾಲ ಮೇಳ, ಚಿಣ್ಣರ ಚಿಲಿಪಿಲಿ ಅಂಗನವಾಡಿ ಮಕ್ಕಳ ಹಬ್ಬ ಕಾರ್ಯಕ್ರಮದ ಭಾಗವಾಗಿದ್ದ ಅವರು ಮಾತನಾಡಿದರು.

ತಾಲೂಕಿನ ಅಂಗನವಾಡಿ ಶಾಲೆಗಳಲ್ಲಿನ ವ್ಯವಸ್ಥೆ ಮತ್ತು ಕಾರ್ಯಕರ್ತೆಯರು ಮಕ್ಕಳಿಗೆ ಕಲಿಸುವ ಪಾಠ ಹಾಗೂ ಮಕ್ಕಳೊಂದಿಗೆ ಮಕ್ಕಳಾಗಿ, ಮಕ್ಕಳಿಂದ ಮಾಡಿಸುವ ವಿವಿಧ ಚಟುವಟಿಕೆಗಳನ್ನು ನೋಡಿದರೆ ಸಾವಿರಾರು ರೂಪಾಯಿ ಖರ್ಚು ಮಾಡಿ ನಮ್ಮ ಮಕ್ಕಳನ್ನು ಸೇರಿಸುವ ಕಾನ್ವೆಂಟ್ ಶಾಲೆಗಳಿಗಿಂತ ನಮ್ಮ ಅಂಗನವಾಡಿ ಕೇಂದ್ರಗಳು ಮೇಲಾಗಿವೆ. ಮಕ್ಕಳ ಸಮಗ್ರ ಅಭಿವೃದ್ಧಿಗಾಗಿ ವಲಯ ಅಂಗನವಾಡಿ ಮೇಲ್ವಿಚಾರಕಿಯರು, ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಪಡುತ್ತಿರುವ ಶ್ರಮ ನಿಜಕ್ಕೂ ಶ್ಲಾಘನೀಯ ಎಂದು ಹೇಳಿದರು.

Advertisements

ದಂಡೋತಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹೇಬೂಬ್ ಪಟೇಲ್ ಮಾತನಾಡಿ, ಬೇರೆ ಕಡೆಗಳಲ್ಲಿ ಇಲಾಖೆಯ ಅಧಿಕಾರಿಗಳು, ಗ್ರಾಮ ಪಂಚಾಯತಿಗಳಿಂದ ಅಂಗನವಾಡಿ ಶಾಲೆಗಳಿಗೆ ಅದೇಷ್ಟೋ ಅನುದಾನ ನೀಡಿದರು ಸಹ, ಮಕ್ಕಳಿಗೆ ಕಲಿಸುವ ಉತ್ಸಾಹ ಇರುವುದಿಲ್ಲ. ಅಥಹದರಲ್ಲಿ ದಂಡೋತಿ ವಲಯದಲ್ಲಿ ಬರುವ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ. ಇಂತಹ ಉತ್ತಮ ಕಾರ್ಯಕರ್ತೆಯರಿಂದಲೇ ನಮ್ಮ ಗ್ರಾಮಕ್ಕೆ ಗಾಂಧಿ ಗ್ರಾಮ ಪುರಸ್ಕಾರ ದೊರಕಿದೆ ಎಂದರು.

ಅಜೀಮ್ ಪ್ರೇಮ್ ಜೀ ಫೌಂಡೇಶನ್ನಿನ ಶೃತಿ, ರವಿಚಂದ್ರ, ರೇಣುಕಾ, ತರುಣ ಅವರು ಮಕ್ಕಳಿಗೆ ಮತ್ತು ಮಕ್ಕಳ ಪಾಲಕರಿಗೆ ವಿವಿಧ ಚಟುವಟಿಕೆಗಳನ್ನು ಮಾಡಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಿವಲೀಲಾ ಪಾಳೇದಕರ್, ಉಪಾಧ್ಯಕ್ಷೆ ಶರಣಬಸ್ಸಮ್ಮ ಕವಡೆ, ಶಾಲೆಯ ಸಹ ಶಿಕ್ಷಕರಾದ ಮಲ್ಲಣ್ಣ, ಶಿವಲೀಲಾ, ಸಷಿಯುನ್ನಿಸಾ, ಮೌನೇಶ್ ವಿಶ್ವಕರ್ಮ ಸೇಡಂ, ವೈದ್ಯರಾದ ರಜಿವುಲ್ ಖಾದ್ರಿ, ಮೇಲ್ವಿಚಾರಕಿಯರಾದ ಶೀಲಾ ದೇವಿ, ಕವಿತಾ ಪಾಟೀಲ್, ಶೋಭಾ, ಸುನಿತಾ, ಗೀತಾ ಯಡ್ರಾಮಿ, ಗ್ರಾಮದ ಮುಖಂಡರಾದ ದಾವೂದ್ ಪಟೇಲ್, ರಷೀದ್ ಪಠಾಣ್, ರಮೇಶ್ ಕವಡೆ, ಅಂಗನವಾಡಿ ಶಿಕ್ಷಕಿಯರಾದ ವಿದ್ಯಾನಿಧಿ ಕವಡೆ, ಅಕ್ಕಮಹಾದೇವಿ ಬೃಂಗಿಮಠ, ಸರಸ್ವತಿ, ರಾಧಾಬಾಯಿ, ಬಸಮ್ಮ, ಆಲಿಯಾ, ರೇಖಾ, ದೇವಿಂದ್ರಮ್ಮಾ ಪಾಟೀಲ್, ಸುಮಲತಾ ಬಟಿಗೇರಿ ಸೇರಿದಂತೆ ಗ್ರಾಮ ಪಂಚಾಯಿತಿ ಸದಸ್ಯರು, ಆಶಾ ಕಾರ್ಯಕರ್ತೆಯರು ಗ್ರಾಮದ ಮುಖಂಡರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X