ಕಲಬುರಗಿ | ಮುಳುವಾದ ವಾಟ್ಸಪ್‌ ಸಂದೇಶ: ಮೇಲ್ವಿಚಾರಕಿಯ ನಿಂದನೆಗೆ ಮೂರ್ಛೆ ಹೋದ ಅಂಗನವಾಡಿ ಕಾರ್ಯಕರ್ತೆ!

Date:

Advertisements

ಕಲಬುರಗಿ ಜಿಲ್ಲೆಯ ಶಹಾಬಾದ್ ಪಟ್ಟಣದ ಅಶೋಕ ನಗರ ಅಂಗನವಾಡಿ ಕೇಂದ್ರದ ಸಂಖ್ಯೆ ಎರಡರ ಕಾರ್ಯಕರ್ತೆಯೋರ್ವರು ಮೇಲ್ವಿಚಾರಕಿಯ ನಿಂದನೆ, ಒತ್ತಡ ತಾಳಲಾರದೆ ಮೂರ್ಛೆ ಹೋದ ಘಟನೆ ಗುರುವಾರ ಸಂಜೆ ನಡೆದಿದೆ.

ಅಂಗನವಾಡಿ ಕೇಂದ್ರದಲ್ಲಿ ನಡೆದ ಸಭೆಯಲ್ಲಿ ವಾಟ್ಸಪ್‌ ಸಂದೇಶದ ವಿಚಾರವಾಗಿ ಮೇಲ್ವಿಚಾರಕಿ ಸಂಗಮ್ಮಾ ಪಾಟೀಲ, ಅಂಗನವಾಡಿ ಕಾರ್ಯಕರ್ತೆ ಗುಜಮ್ಮಾ ಕುರಿ ಅವರಿಗೆ ಬೈದು, ನಿಂದಿಸಿದ್ದರಿಂದ ಹೆದರಿದ ಕಾರ್ಯಕರ್ತೆ, ಸ್ಥಳದಲ್ಲಿಯೇ ಮೂರ್ಛೆ ಹೋಗಿದ್ದಾರೆ ಎನ್ನಲಾಗಿದೆ.

ಕೂಡಲೇ ಸ್ಥಳದಲ್ಲಿದ್ದ ಸಹೋದ್ಯೋಗಿಗಳು ಅವರನ್ನು ಆಟೋ ಮೂಲಕ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಥಮಿಕ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಿರುವುದಾಗಿ ತಿಳಿದು ಬಂದಿದೆ.

Advertisements

ಮಾಧ್ಯಮಗಳ ಜೊತೆ ಮಾತನಾಡಿದ ಅಂಗನವಾಡಿ ಕಾರ್ಯಕರ್ತೆ ಗುಜಮ್ಮಾ ಕುರಿ, “ವಾಟ್ಸ್‌ಅಪ್‌ ಸ್ಟೇಟಸ್ ತಪ್ಪಾಗಿ ವಾಟ್ಸಪ್ ಗ್ರೂಪ್‌ಗೆ ಪೋಸ್ಟ್‌ ಮಾಡಿದ್ದನ್ನೇ ನೆಪವಾಗಿ‌ಟ್ಟುಕೊಂಡು ಮೇಲ್ವಿಚಾರಕಿ ಸಂಗಮ್ಮಾ ಪಾಟೀಲ ನಿಂದಿಸಿದ್ದಾರೆ” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ರಾಯಚೂರು | ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ ನೀಡಲು ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ

“ಅಂಗನವಾಡಿ ಕಾರ್ಯಕರ್ತೆರಿಗೆ ಕವಡೆಕಾಸಿನ ಕಿಮ್ಮತ್ತು ನೀಡದೆ, ಅವಮಾನ ಮಾಡಿ ಅಸಭ್ಯವಾಗಿ ವರ್ತಿಸುತ್ತಾರೆ” ಎಂದು ಗುಜಮ್ಮಾ ಕುರಿ ದೂರಿದರು.

ಈ ಮುಂಚೆ ಸಂಗಮ್ಮ ಪಾಟೀಲರವರು ಕಾರ್ಯನಿರ್ವಹಿಸಿದ ನಾಲವಾರ, ಭಂಕೂರನಲ್ಲಿಯೂ ಕೂಡ ಇದೇ ರೀತಿ ಅಂಗನವಾಡಿ ಕಾರ್ಯಕರ್ತೆಯರಿಗೆ ಜಾತಿ ನಿಂದನೆ, ತಾರತಮ್ಯ ಮತ್ತು ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೂಡ ಇದೇ ವೇಳೆ ಕೇಳಿಬಂದಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X