ಕಲಬುರಗಿ | ಸಮಗ್ರ ಶಿಶು ಅಭಿವೃದ್ಧಿಗೆ ಹಣಕಾಸು ಮೀಸಲಿಡುವಂತೆ ಅಂಗನವಾಡಿ ನೌಕರರ ಸಂಘ ಆಗ್ರಹ

Date:

Advertisements

ಸಮಗ್ರ ಶಿಶು ಅಭಿವೃದ್ಧಿಗಾಗಿ ಹಣಕಾಸು ಮೀಸಲಿಡುವಂತೆ ಹಾಗೂ ಇನ್ನಿತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಚಿತ್ತಾಪುರ ತಾಲೂಕು ಸಮಿತಿಯಿಂದ ತಹಶೀಲ್ದಾರ್ ಮೂಲಕ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸಿತಾರಾಮನ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

“2024-25ರ ಬಜೆಟ್‌ನಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆಗೆ ಸಾಕಷ್ಟು ಹಣಕಾಸು ಹಂಚಿಕೆ ಮೀಸಲಿಡಲು ಅಂಗನವಾಡಿಗಳನ್ನು ಬಲಪಡಿಸಲು ಮತ್ತು ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಶಾಸನಬದ್ಧ ಸೌಲಭ್ಯಗಳನ್ನು ಒದಗಿಸಬೇಕು” ಎಂದು ಆ ಹಾಗೂ ಇನ್ನಿತರ ಬೇಡಿಕೆಗಳನ್ನು ಈಡೇರಿಸಬೇಕು” ಎಂದು ಒತ್ತಾಯಿಸಿ

ಚಿತ್ತಾಪುರ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆಗೆ ಸಾಕಷ್ಟು ಹಣ ಮೀಸಲಿಡಬೇಕು. ಅಲ್ಲದೆ ಇತರ ಬೇಡಿಕೆಗಳಾದ, ಮುಂಬರುವ ಬಜೆಟ್‌ನಲ್ಲಿ ಐಸಿಡಿಎಸ್‌ಗೆ ಬಜೆಟ್ ಹಂಚಿಕೆ ಹೆಚ್ಚಿಸಬೇಕು. ಸಂಪೂರ್ಣವಾಗಿ ಮೂಲ ಸೌಕರ್ಯ ಮತ್ತು ಉತ್ತಮ ಗುಣಮಟ್ಟದ ಆಹಾರದೊಂದಿಗೆ ಐಸಿಡಿಸಿ ಯೋಜನೆಯನ್ನು ಬಲಪಡಿಸಬೇಕು” ಎಂದು ಆಗ್ರಹಿಸಿದರು.

Advertisements

ಸಮಗ್ರ ಶಿಶು ಅಭಿವೃದ್ಧಿಗೆ ಆಗ್ರಹ

“ಸಾಕಷ್ಟು ಸಂಪನ್ಮೂಲಗಳೊಂದಿಗೆ ಅಂಗನವಾಡಿ ಕೇಂದ್ರಗಳನ್ನು ಪೂರ್ಣ ಸಮಯದ ಅಂಗನವಾಡಿಗಳಾಗಿ ಜೊತೆಜೊತೆಗೆ ಪಾಲನಾ ಕೇಂದ್ರ ಆಗಿ ಅಭಿವೃದ್ಧಿಪಡಿಸಬೇಕು. ಅಂಗನವಾಡಿಗಳಲ್ಲಿಯೇ ಆರಂಭಿಕ ಬಾಲ್ಯದ ಆರೈಕೆ ಮತ್ತು ಶಿಕ್ಷಣ(ಇಸಿಸಿಇ)/ ಶಾಲಾಪೂರ್ವ ಶಿಕ್ಷಣ ಘಟಕಾಂಶಗಳನ್ನು ಬಲಪಡಿಸಬೇಕು. ಶಾಲಾಪೂರ್ವ ಶಿಕ್ಷಣವು ಔಪಚಾರಿಕ ಶಿಕ್ಷಣ ವ್ಯವಸ್ಥೆಯ ಭಾಗವಾಗಿರಲೇಬಾರದು. ಅಂಗನವಾಡಿ ಕೇಂದ್ರಗಳನ್ನು ನೋಡಲ್ ಏಜೆನ್ಸಿಗಳಾಗಿ ಜಾರಿಗೊಳಿಸುವುದರ ಜತೆಗೆ ಇಸಿಸಿಇ ಹಕ್ಕಾಗಬೇಕು” ಎಂದು ಒತ್ತಾಯಿಸಿದರು.

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರನ್ನು ಸರ್ಕಾರಿ ನೌಕರರಂತೆ ಖಾಯಂ ಮಾಡಬೇಕು. ಖಾಯಮಾತಿ ವಿಷಯ, 45ನೇ ಐಎಲ್‌ಸಿ ಶಿಫಾರಸಿನ ಪ್ರಕಾರ ತಿಂಗಳಿಗೆ ಕನಿಷ್ಟವೇತನ ₹26000, ಮಾಸಿಕ ಪಿಂಚಣಿ ₹10000, ಪಿಎಫ್, ಇಎಸ್‌ಐ ಇತ್ಯಾದಿ ಭದ್ರತೆ ನೀಡಲು ಕೂಡಲೇ ತೀರ್ಮಾನಿಸಿ ಜಾರಿ ಮಾಡಬೇಕು” ಎಂದು ಆಗ್ರಹಿಸಿದರು.

“ದೇಶಾದ್ಯಂತ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಏಕರೂಪದ ಸೇವಾ ಷರತ್ತುಗಳನ್ನು ಜಾರಿಗೆ ತರಬೇಕು. ಎಲ್ಲ ಯೋಜನೆಗಳು ಕಾರ್ಮಿಕರಿಗೆ ಅನ್ವಯವಾಗುವಂತೆ ಕೂಡಲೇ ವೇತನ ಆಯೋಗ ರಚನೆ ಮಾಡಬೇಕು. ಗ್ರಾಚ್ಯುಟಿ ಕುರಿತು ಸುಪ್ರೀಂ ಕೋರ್ಟ್ ಆದೇಶವನ್ನು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ತಕ್ಷಣವೇ ಜಾರಿಗೊಳಿಸಬೇಕು” ಎಂದು ಒತ್ತಾಯಿಸಿದರು.

“ಅಂಗನವಾಡಿ ನೌಕರರು ಮತ್ತು ಸಹಾಯಕಿಯರ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಮತ್ತು ಕಾರ್ಮಿಕ ಸಂಘಟನೆ ಕಟ್ಟಿಕೊಳ್ಳುವ ಹಕ್ಕುಗಳನ್ನು ಗುರುತಿಸಿ ಎಲ್ಲಾ ಹಂತಗಳಲ್ಲಿ ದ್ವಿಪಕ್ಷೀಯ ಕಾರ್ಯವಿಧಾನವನ್ನು ಅಭಿವೃದ್ಧಿಪಡಿಸಬೇಕು. ಯಾವುದೇ ರೂಪದಲ್ಲಿ ಐಸಿಡಿಸಿಯನ್ನು ಖಾಸಗೀಕರಣಗೊಳಿಸಬಾರದು. ಸಾರ್ವಜನಿಕ ವಲಯದ ಉದ್ಯಮಗಳು ಮತ್ತು ಸೇವೆಗಳನ್ನೂ ಕೂಡ ಖಾಸಗೀಕರಣ ಮಾಡಬಾರದು. ಶ್ರಮಿಕರಿಗೆ ಮಾರಕವಾಗಿರುವ ಕಾರ್ಮಿಕ ಸಂಹಿತೆಗಳನ್ನು ತೆಗೆಯಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಗಿರೀಶ್ ರಂಜೋಳಕರ್ ಅಮಾನತಿಗೆ ಆಗ್ರಹ

ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ತಾಲೂಕು ಅಧ್ಯಕ್ಷೆ ದೇವಮ್ಮ ಅನ್ನದಾನಿ, ಕಾರ್ಯದರ್ಶಿ ರಾಧಾ ಲಕ್ಕನೋರ್, ಸಂಘದ ಪದಾಧಾಕಾರಿಗಳಾದ ಅಕ್ಕಮಹಾದೇವಿ ಬೃಂಗಿಮಠ್, ರಾಧಾಬಾಯಿ ದಂಡೋತಿ, ಶಾಂತಾ, ಕಾಶಮ್ಮ, ನಿರ್ಮಲಾ, ದೀಪಿಕಾ, ಸುಮಿತ್ರಾ, ಭಾಗಮ್ಮ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರಾದ ಶಾಂತಾಬಾಯಿ ನಾಟಿಕರ್, ಲಕ್ಷ್ಮೀ ನಾಟಿಕಾರ್, ವಿದ್ಯಾನಿಧಿ ಕವಡೆ, ದೇವಿಂದ್ರಮ್ಮ, ವಿಜಯಲಕ್ಮಿ ಸೇರಿದಂತೆ ಬಹುತೇಕರು ಇದ್ದರು.

ವರದಿ: ವಾಲೆಂಟಿಯರ್ ಅನಂತ್ ದೇಶಪಾಂಡೆ

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

Download Eedina App Android / iOS

X