ಕಲಬುರಗಿ | ಸ್ವಚ್ಛತಾ ಭಾಗ್ಯ ಕಾಣದ ಅಂಕಲಗಾ ಗ್ರಾಮ

Date:

Advertisements

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಅಂಕಲಗಾ ಗ್ರಾಮ ಪಂಚಾಯತಿ ಇರುವ ಗ್ರಾಮವೇ ಮೂಲಸೌಕರ್ಯ ಕೊರತೆಯಿಂದ ನಲುಗಿತ್ತಿದೆ.

ಗ್ರಾಮದ ನಡು ರಸ್ತೆಯಲ್ಲೇ ಚರಂಡಿ ನೀರು ಕೆರೆಯಂತೆ ನಿಂತಿದ್ದರೂ ಈವರೆಗೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮದ ಸದಸ್ಯರು ತಿರುಗಿ ನೋಡಿತ್ತಿಲ್ಲವೆಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ರೈತ ಮುಖಂಡ ಕರೆಪ್ಪ ಕರಗೊಂಡ್ ಈ ದಿನ.ಕಾನೊಂದಿಗೆ ಮಾತನಾಡಿ, “ವರ್ಷ ತುಂಬುವುದರೊಳಗಾಗಿ ₹21 ಲಕ್ಷಕ್ಕೂ ಹೆಚ್ಚು ಹಣ ಖರ್ಚು ಮಾಡಿದ ಅಂಕಲಗಾ ಗ್ರಾಮ ಪಂಚಾಯಿತಿ ಅಧಿಕಾರಿ ಅಂಕಲಗಾ ಗ್ರಾಮಕ್ಕೆ ಮೂಲಸೌಕರ್ಯಗಳನ್ನು ಒದಗಿಸುವಲ್ಲಿ ಮುಂದಾಗದೇ ಇರುವುದರಿಂದ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ” ಎಂದರು.

Advertisements

“ಚರಂಡಿಯ ನೀರು ರಸ್ತೆಯಲ್ಲಿ ಸಂಗ್ರಹವಾಗಿರುವುದರಿಂದ ಸೊಳ್ಳೆಗಳ ಕಾಟದಿಂದ ಮಲೇರಿಯಾ, ಡೆಂಘಿಯಂತಹ ರೋಗಗಳು ಹರಡುತ್ತಿದ್ದು, ಸುರಕ್ಷತಾ ಕ್ರಮವಾಗಿ ಯಾವುದೇ ಕ್ರಮ ಜರುಗಿಸುತ್ತಿಲ್ಲ” ಎಂದು ಅಂಕಲಗಿ ಗ್ರಾಮಸ್ಥರು ತಮ್ಮ ಅಳಲು ಹೇಳಿಕೊಂಡಿದ್ದಾರೆ.

ಈ ಸುದ್ದಿಓದಿದ್ದೀರಾ? ವಿಜಯಪುರ | ಕುಡಿಯುವ ನೀರು ಒದಗಿಸುವ ಡಿಬಿಒಟಿ ಯೋಜನೆ-1ಯಡಿ ಪೈಪಲೈನ್‌ ಆಳವಡಿಕೆಗೆ ಸೂಚನೆ

“ಗ್ರಾಮದಲ್ಲಿ ಪ್ರತಿ ವಠಾರದಲ್ಲಿ ಚರಂಡಿಗಳು ಸ್ವಚ್ಛತೆಯಿಲ್ಲದೆ ಗಬ್ಬೆದ್ದು ನಾರುತ್ತಿವೆ. ಎಲ್ಲಿಯೂ ಬ್ಲೀಚಿಂಗ ಪೌಡರ್ ಸಿಂಪಡಣೆಯಾಗಿಲ್ಲ. ಪ್ರತಿ ಶನಿವಾರ ಅಂಕಲಗಾ ಗ್ರಾಮದಲ್ಲಿ ಸಂತೆ ನಡೆಯುತ್ತದೆ. ಆದರೂ ಮೂಲ ಸೌಕರ್ಯಗಳು ಕಣ್ಮರೆಯಾಗಿವೆ” ಎಂದು ರೈತ ಮುಖಂಡ ಕರೆಪ್ಪ ಕರಗೊಂಡ್ ಕಳವಳ ವ್ಯಕ್ತಪಡಿಸಿದರು.

WhatsApp Image 2024 11 08 at 12.18.37 667ed234 e1731048718511
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X