ಕಲಬುರಗಿ | ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಸೌಕರ್ಯ, ಸಿಬ್ಬಂದಿ ಹಾಜರಾತಿ ಸುಧಾರಣೆಗೆ ಒತ್ತಾಯಿಸಿ ಮನವಿ

Date:

ಸೇಡಂ ಪಟ್ಟಣದಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕಲ್ಯಾಣ ಜನಪರ ವೇದಿಕೆ ರಾಜ್ಯ ಘಟಕ ಹಾಗೂ ತಾಲೂಕು ಘಟಕದ ಪದಾಧಿಕಾರಿಗಳು ಮಂಗಳವಾರ ತಾಲೂಕು ಆರೋಗ್ಯಾಧಿಕಾರಿಗಳು ಮತ್ತು ಸರ್ಕಾರಿ ಆಸ್ಪತ್ರೆ ಆಡಳಿತಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

- Advertisement -

ಮನವಿಯಲ್ಲಿ, ಆಸ್ಪತ್ರೆ ಮುಂಭಾಗದಲ್ಲಿ ಸಾರ್ವಜನಿಕರ ವಾಹನಗಳನ್ನು ಅಸ್ತವ್ಯಸ್ತವಾಗಿ ನಿಲುಗಡೆ ಮಾಡದಂತೆ ಕ್ರಮ ಕೈಗೊಳ್ಳಬೇಕು. ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಬರುವ ಬಡ ಹಾಗೂ ಅನಾರೋಗ್ಯದಿಂದ ಬಳಲುತ್ತಿರುವ ರೋಗಿಗಳಿಗೆ ವೈದ್ಯರು, ನರ್ಸ್‌ಗಳು ಮತ್ತು ಸಿಬ್ಬಂದಿ ಆತ್ಮಸ್ಥೈರ್ಯ ತುಂಬುವ ರೀತಿಯಲ್ಲಿ ಸ್ಪಂದಿಸಿ ಗುಣಮಟ್ಟದ ಚಿಕಿತ್ಸೆ ನೀಡಬೇಕು ಎಂದು ಆಗ್ರಹಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಇದಲ್ಲದೆ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆರೋಗ್ಯ ಸೇವೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಒದಗಿಸಬೇಕು. ಕರ್ತವ್ಯದ ವೇಳೆಯಲ್ಲಿ ವೈದ್ಯರು, ನರ್ಸ್‌ಗಳು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಹಾಜರಿದ್ದು, ಸಾರ್ವಜನಿಕರಿಗೆ ಸಮಯೋಚಿತ ಚಿಕಿತ್ಸೆ ಸಿಗುವಂತೆ ನೋಡಿಕೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಇದನ್ನು ಓದಿದ್ದೀರಾ? ‌ಸುರಪುರ | ಸಮಾಧಿ ಗುಂಡಿ ತೋಡಲು ನಿರಾಕರಿಸಿದ ದಲಿತರಿಗೆ ಕೊಲೆ ಬೆದರಿಕೆ: 17 ಜನರ ವಿರುದ್ಧ ಪ್ರಕರಣ ದಾಖಲು, ತನಿಖೆ

ಈ ಸಂದರ್ಭದಲ್ಲಿ ಕಲ್ಯಾಣ ಜನಪರ ವೇದಿಕೆ ರಾಜ್ಯ ಉಪಾಧ್ಯಕ್ಷ ವರದಾ ಸ್ವಾಮಿ ಬಿ. ಹಿರೇಮಠ, ತಾಲೂಕು ಮುಖಂಡ ನಾಮದೇವ ರಾಥೋಡ್ ಮೇದಕ್, ತಾಲೂಕು ಯುವ ಘಟಕ ಅಧ್ಯಕ್ಷ ಮಹೇಶ್ ಜಕ್ಕನ್ ಬೋಯಿ, ತಾಲೂಕು ವಿದ್ಯಾರ್ಥಿ ಘಟಕ ಅಧ್ಯಕ್ಷ ಉಮೇಶ್ ದೇವರಹಳ್ಳಿ, ಸಂಘಟನೆಯ ಸದಸ್ಯ ಹನುಮಂತು ಪೂಜಾರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ರದ್ದು ಪಡಿಸಿದ ಎಂಟು ಕೊರ್ಸಗಳನ್ನು  ಮುಂದುವರೆಸುವಂತೆ ಅತಿಥಿ ಉಪನ್ಯಾಸಕರ ಧರಣಿಗೆ ಡಿವೈಎಫ್ಐ-ಎಸ್ಎಫ್ಐ ಬೆಂಬಲಿಸಿ ಪ್ರತಿಭಟನೆ

ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ರದ್ದುಪಡಿಸಿದ ಎಂಟು ಕೋರ್ಸ್ ಗಳು ಮುಚ್ಚದೇ ಮುಂದುವರೆಸುವಂತೆ...

ಯಾದಗಿರಿ | ಎರಡು ವರ್ಷವಾದರೂ ಪೂರ್ಣಗೊಳ್ಳದ ರಸ್ತೆ ಕಾಮಗಾರಿ: ರೈತ ಸಂಘ ಆಕ್ರೋಶ

ಸುರಪುರ ತಾಲೂಕಿನ ರುಕ್ಕಾಪೂರದಿಂದ ಬೇವಿನಾಳ ಎಸ್.ಎಚ್. ಗ್ರಾಮದವರೆಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯ...

ಕಲಬುರಗಿ | ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಗೈರು ಆರೋಪ: ಕರ್ತವ್ಯಲೋಪದ ವಿರುದ್ಧ ಕ್ರಮಕ್ಕೆ ಆಗ್ರಹ

ಅಫಜಲಪುರ ತಾಲೂಕಿನ ಸ್ಟೇಷನ್ ಗಾಣಗಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತುರ್ತು ಸಂದರ್ಭದಲ್ಲಿ...

ಉಡುಪಿ | ಡಿ.ಸಿ. ಮನ್ನಾ ಭೂಮಿ ನಿವೇಶನ ರಹಿತರಿಗೆ ನೀಡಿ: ಸಿಎಂಗೆ ದಸಂಸ ಅಂಬೇಡ್ಕರ್ ವಾದ ಮನವಿ

ಕಸ್ತೂರಿರಂಗನ್ ವರದಿ ಕುರಿತು ನೇರ ಸಂವಾದ ಸಭೆಗೆ ಹೆಬ್ರಿಗೆ ಆಗಮಿಸಿದ್ದ ಮುಖ್ಯಮಂತ್ರಿ...