ಕಲಬುರಗಿ | ರೈತರಿಗೆ ಬರ ಪರಿಹಾರ ನೀಡುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು ಮಾಜಿ ಪ್ರಧಾನಿಗೆ ಮನವಿ

Date:

Advertisements

ಕಲಬುರಗಿ ಜಿಲ್ಲೆಯ ರೈತರಿಗೆ ಬರ ಪರಿಹಾರ ನೀಡಲು ಸರ್ಕಾರದ ಮೇಲೆ ಒತ್ತಡ ಹೇರುವಂತೆ ಒತ್ತಾಯಿಸಿ ಸೇಡಂ  ಕ್ಷೇತ್ರದ ಜೆಡಿಎಸ್ ಮುಖಂಡ ಬಾಲರಾಜ್ ಗುತ್ತೇದಾರ ಅವರು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮತ್ತು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದರು.

ಮಾಜಿ ಪ್ರಧಾನ ಮಂತ್ರಿ ದೇವೆಗೌಡರ ಬೆಂಗಳೂರಿನ ನಿವಾಸದಲ್ಲಿ ಅವರನ್ನು ಭೇಟಿಯಾಗಿ ಮಾತನಾಡಿದ ಅವರು, “ಕಲಬುರಗಿ ಜಿಲ್ಲೆಯಲ್ಲಿ ಮುಂಗಾರು ಮಳೆ ವೈಫಲ್ಯದಿಂದ ಬೆಳೆ ಬಾರದೆ ರೈತರು ತೊಂದರೆ ಅನುಭವಿಸುವಂತಾಗಿದೆ. ಬರ ಘೋಷಣೆಯಾದರೂ ರಾಜ್ಯ ಸರ್ಕಾರ ರೈತರಿಗೆ ಪರಿಹಾರ ನೀಡಲು ಮುಂದೆ ಬರುತ್ತಿಲ್ಲ. ಹಾಗಾಗಿ ಸರ್ಕಾರದ ಮೇಲೆ ಒತ್ತಡ ಹೇರಬೇಕು” ಎಂದು ಒತ್ತಾಯಿಸಿದರು.

“ರಾಜ್ಯದಲ್ಲಿ ರೈತ ವಿರೋಧಿ ಸರ್ಕಾರ ಇದ್ದು, 195 ತಾಲೂಕುಗಳನ್ನು ಬರಪೀಡಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿ ಒಂದು ತಿಂಗಳು ಕಳೆದಿದೆ. ಬರಗಾಲ ಪೀಡಿತ ಪ್ರದೇಶಗಳಲ್ಲಿ ಕೇಂದ್ರದ ತಂಡ ಸಮೀಕ್ಷೆ ಮಾಡುತ್ತಿದೆ. ಆದರೆ ಇದು ವಿಳಂಬಕ್ಕೆ ಕಾರಣವಾಗಿದೆ. ಈಗಾಗಲೇ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ರೈತರಿಗೆ ರಾಜ್ಯ ಸರ್ಕಾರ ಕೂಡಲೇ ಪರಿಹಾರ ನೀಡಿದರೆ ನಮ್ಮ ಭಾಗದ ರೈತರಿಗೆ ಅನೂಕೂಲವಾಗಲಿದೆ” ಎಂದು ಹೇಳಿದರು.

Advertisements

“ಸರ್ಕಾರ ಈಗಾಗಲೇ ಜಿಲ್ಲಾಧಿಕಾರಿಗಳಿಂದ ವರದಿ ತರಿಸಿಕೊಂಡಿದ್ದು, ಕೃಷಿ ಸಚಿವರೂ ಕೂಡ ಜಿಲ್ಲೆಗೆ ಭೇಟಿ ನೀಡಿ ಅಧಿಕಾರಿಗಳ ಸಭೆ ನಡೆಸಿ ಜಿಲ್ಲೆಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಜತೆಗೆ ಸಚಿವರೂ ಕೂಡ ಬೆಳೆ ವೀಕ್ಷಿಸಿದ್ದಾರೆ. ಹೆಸರು, ಉದ್ದು, ಎಳ್ಳು, ಸೋಯಾಬೀನ್ ಮುಂತಾದ ಮುಂಗಾರು ಬೆಳೆಗಳು ಮಳೆ ಬಾರದೆ ಹಾಳಾಗಿವೆ” ಎಂದು ಬೇಸರ ವ್ಯಕ್ತಪಡಿಸಿದರು.

“ರೈತರು ಈವರೆಗೆ ಬೆಳೆಯಿಂದ ಒಂದು ರೂಪಾಯಿ ಕೂಡ ಕಂಡಿಲ್ಲ. ಸಾಲ ಮಾಡಿ ಬಿತ್ತನೆ ಬೀಜ ಮತ್ತು ಗೊಬ್ಬರ ಖರೀದಿಸಿದ್ದಾರೆ. ಸಾಲ ಮರುಪಾವತಿಗೆ ಹಣವಿಲ್ಲ. ಮಳೆ ಬಂದಿದ್ದರೆ ಈಗಾಗಲೇ ರೈತರ ಕೈಗೆ ಹಣ ಬರುತ್ತಿತ್ತು. ಪರಿಸ್ಥಿತಿ ಹೀಗಿರುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಚಿತ ಗ್ಯಾರಂಟಿ ಯೋಜನೆಗಳಿಗಾಗಿ ಸರ್ಕಾರದ ಖಜಾನೆ ಖಾಲಿ ಮಾಡುತ್ತಿದ್ದಾರೆ. ಆದರೆ ರೈತರ ಬಗ್ಗೆ ಕಿಂಚಿತ್ತೂ ಕಾಳಜಿ ತೋರುತ್ತಿಲ್ಲ” ಎಂದು ಆರೋಪಿಸಿದರು.

“ರೈತರು ಸಂಕಷ್ಟದಲ್ಲಿರುವ ಈ ಸಂದರ್ಭದಲ್ಲಿ ಬರ ಪರಿಹಾರ ನೀಡುವಂತೆ ತಾವು ಸರ್ಕಾರದ ಮೇಲೆ ಒತ್ತಡ ಹೇರಿ ರೈತರಿಗೆ ಅನೂಕುಲ ಮಾಡಿಕೊಡಬೇಕು” ಎಂದು ಅವರು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ವಿಜಯನಗರ | ರೈತನ ಮೇಲೆ ಕರಡಿಗಳ ದಾಳಿ; ಅರಣ್ಯ ಇಲಾಖೆಯೇ ಚಿಕಿತ್ಸೆ ವೆಚ್ಚ ಭರಿಸುವಂತೆ ಒತ್ತಾಯ

“ಕಲಬುರಗಿ ಜಿಲ್ಲೆ ಸೇರಿದಂತೆ ಸೇಡಂ ಮತಕ್ಷೇತ್ರದ ಬಹುತೇಕ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರಾತ್ರಿ ವೇಳೆ ವೈದ್ಯರು ಇರುವುದಿಲ್ಲ. ಇಂದರಿಂದ ರಾತ್ರಿಯ ತುರ್ತು ಪರಿಸ್ಥಿತಿ ವೇಳೆ ಚಿಕಿತ್ಸೆ ಸಿಗದೆ ಸಾವುಗಳಾಗುತ್ತಿವೆ. ಈ ಹಿನ್ನೆಲೆಯಲ್ಲಿ ವೈದ್ಯ ಹುದ್ದೆಗಳ ಭರ್ತಿಗೆ ಸರ್ಕಾರದ ಮೇಲೆ ಒತ್ತಡ ಹೇರಬೇಕು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X