ಕಲಬುರಗಿ | ಸಾಲದ ಹಣ ತಡವಾಗಿ ನೀಡಿದಕ್ಕೆ ಹಲ್ಲೆ‌ : ಆರು ಜನರಿಗೆ 2 ವರ್ಷ ಜೈಲು ಶಿಕ್ಷೆ

Date:

Advertisements

ಸಾಲವನ್ನು ತಡವಾಗಿ ವಾಪಸ್ ಕೊಟ್ಟಿದ್ದನ್ನು ಆಕ್ಷೇಪಿಸಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಳಂದ ತಾಲ್ಲೂಕಿನ ಸಾವಳಗಿ (ಕೆ) ಗ್ರಾಮದ ಆರು ಜನರಿಗೆ ಮೂರನೇ ಹೆಚ್ಚುವರಿ ಮತ್ತು ಸೆಷನ್ಸ್ ನ್ಯಾಯಾಲಯವು 2 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ತಲಾ ₹10 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದೆ.

ಶ್ರೀಮಂತರಾಯ ಸಿದ್ರಾಮಪ್ಪ ಮೂಲಗೆ, ಸಿದ್ದರಾಮ ಸಿದ್ರಾಮಪ್ಪ ಮೂಲಗೆ, ಅಂಬರಾಯ ಸಿದ್ರಾಮಪ್ಪ ಮೂಲಗೆ, ಶಿವಕುಮಾರ ಸಿದ್ರಾಮಪ್ಪ, ನಾಗೇಂದ್ರ ಗಣಪತಿ ಮೂಲಗೆ ಹಾಗೂ ಮಹಾದೇವ ನಾಗೇಂದ್ರಪ್ಪ ಮೂಲಗೆ ಶಿಕ್ಷೆಗೊಳಗಾದ ಅಪರಾಧಿಗಳು.

ಯಶವಂತ್ರಾಯ ಅಂಬಾಜಿ ಕಾಳೆ 12 ವರ್ಷಗಳ ಹಿಂದೆ ₹1 ಲಕ್ಷ ಹಣವನ್ನು ಶ್ರೀಮಂತರಾಯ ಎಂಬುವವರಿಂದ ಪಡೆದಿದ್ದರು. ಕೊಡುವುದು ತಡವಾಗಿದ್ದರಿಂದ ಆಗಾಗ್ಗೆ ವಾಗ್ವಾದಗಳು ನಡೆಯುತ್ತಿದ್ದವು. ಕೈಗಡ ಹಣ ವಾಪಸ್ ನೀಡಿದ ಬಳಿಕವೂ ತಕರಾರು ನಡೆಯುತ್ತಲೇ ಇತ್ತು. 2018ರ ನವೆಂಬರ್ 17ರಂದು ಸಾವಳಗಿ (ಕೆ) ಗ್ರಾಮದಿಂದ ಕರಹರಿ ಗ್ರಾಮದ ಮರೆಗಮ್ಮ ಗುಡಿಯ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ಯಶವಂತ್ರಾಯ ಕಾಳೆ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ನಂತರ ಹಲ್ಲೆ ನಡೆಸಿದರು.

Advertisements

ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದ ‍ಪಿಎಸ್‌ಐ ಶರಣಬಸಪ್ಪ ಕೆ. ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಶಿಕ್ಷಕರಿಗೆ ಕಿರುಕುಳ ಆರೋಪ : ಬಿಇಒ ಟಿ.ಆರ್.ದೊಡ್ಡೆ ಅಮಾನತು

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಮಹ್ಮದ್ ಮುಜೀರ್ ಉಲ್ಲಾ ಅವರು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದರು. ದಂಡದ ಹಣದಲ್ಲಿ ₹30 ಸಾವಿರ ಯಶವಂತ್ರಾಯ ಕಾಳೆ ಹಾಗೂ ₹15 ಸಾವಿರವನ್ನು ಇನ್ನೊಬ್ಬ ಗಾಯಾಳು ಅನಿಲಕುಮಾರ್ ಕಾಳೆ ಅವರಿಗೆ ನೀಡಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಎಸ್.ಆರ್.ನರಸಿಂಹಲು ವಾದ ಮಂಡಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X