ಕಲಬುರಗಿ | ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಮೀಕ್ಷೆ ಕುರಿತು ಜಾಗೃತಿ ಕಾರ್ಯಾಗಾರ

Date:

Advertisements

ಕರ್ನಾಟಕ ರಾಜ್ಯ ಬಲಗೈ ಹೊಲೆಯ ಸಂಬಂಧಿತ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿಯಿಂದ ಕಲಬುರಗಿಯ ಐವಾನ್ ಶಾಹಿ ಪ್ರವಾಸಿ ಮಂದಿರದಲ್ಲಿ ಭಾನುವಾರ ಸಂಜೆ ಒಳಮೀಸಲಾತಿ ಕುರಿತು ಮಾಹಿತಿ ಒದುಗಿಸುವ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು.

ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿಗೆ ಸೇರಿದ 101 ಉಪಜಾತಿಗಳ ಪೈಕಿ ಹೊಲೆಯ ಸಂಬಂಧಿಸಿದ ಉಪಜಾತಿಗೆ ಒಳಮೀಸಲಾತಿ ಕುರಿತು ನಾಯ್ಯಮೂರ್ತಿ ಡಾ.ಹೆಚ್.ಎನ್.ನಾಗಮೋಹನ್ ದಾಸ ಏಕ ಸದಸ್ಯ ವಿಚಾರಣೆ ಆಯೋಗ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಕುರಿತು ಜಾಗೃತಿ ಕಾರ್ಯಗಾರ ನಡೆಸಲಾಯಿತು.

ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಡಿ.ಜಿ.ಸಾಗರ್ ಮಾತನಾಡಿ, ʼಮೇ5 ರಿಂದ ನಡೆಯುತ್ತಿರುವ ಸಮೀಕ್ಷೆಯಲ್ಲಿ ನಮ್ಮ ಮೂಲ ಬಲಗೈಗೆ ಸೇರಿದ ಸುಮಾರು 29 ಜಾತಿಗಳ ಪಟ್ಟಿ ಮಾಡಿದ್ದು, ಆಯಾ ಪ್ರದೇಶಗಳಿಗೆ ಅನುಗುಣವಾಗಿ ಕರೆಯಲ್ಪಡುವ ಮೂಲ ಜಾತಿ, ಉಪ ಜಾತಿ ಕಾಲಂನಲ್ಲಿ ʼಹೊಲೆಯʼ ಎಂದೇ ಗಣತಿಯಲ್ಲಿ ಬರಿಸಬೇಕುʼ ಎಂದು ತಿಳಿಸಿದರು.

Advertisements

ಗಣತಿ ಮೂರು ಹಂತಗಳಲ್ಲಿ ನಡೆಯುತ್ತದೆ.

ಮೊದಲೇ ಹಂತ: ಮೇ 5 ರಿಂದ ಮೇ 17ರ ವರೆಗೆ ಗಣತಿದಾರರ ಮನೆ-ಮನೆ ಭೇಟಿ ನೀಡಿ ಸಮೀಕ್ಷೆ ನಡೆಸುತ್ತಾರೆ.

ಎರಡನೇ ಹಂತ: ಮೇ 19 ರಿಂದ ಮೇ 21‌ವರೆಗೆ ಮತಗಟ್ಟೆ ಪ್ರದೇಶವಾರು ವಿಶೇಷ ಶಿಬಿರಗಳಲ್ಲಿ ಸಮಿಕ್ಷೆ ಕೈಗೊಳ್ಳುವುದು.

ಮೂರನೇ ಹಂತ: ಮೇ 19 ರಿಂದ ಮೇ 23ರವರೆಗೆ ಸ್ವಯಂ ಘೋಷಣೆ ಆನ್‌ಲೈನ್ ಮೂಲಕ ಜನಗಣತಿ ಮಾಡಿಸಬಹುದಾಗಿದೆ ಎಂದು ತಿಳಿಸಿದರು.

ಸಮೀಕ್ಷೆ ಬೇಕಾದ ದಾಖಲೆಗಳು :
ರೇಷನ್‌ ಕಾರ್ಡ್, ಆಧಾರ್ ಚೀಟಿ, ಜಾತಿ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ.

ಈ ಸಂದರ್ಭದಲ್ಲಿ ಹೆಚ್ ಶಂಕರ್, ಹಣಮಂತರಾಯ, ದೊಡ್ಡಮನಿ, ಸಿದ್ದಪ್ಪ ಪಿ. ಸುಳ್ಳದ್, ಸುರೇಶ್ ಹಾದಿಮನಿ, ಅಂಬಣ್ಣ ಜಿವಣಗಿ, ಬಿ‌.ಸಿ.ವಾಲಿ, ಮಹಾದೇವ ದನ್ನಿ, ಶಾಂತಪ್ಪ ಸಂಗಾವಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

Download Eedina App Android / iOS

X