- ಏ.27-28ರಂದು ಕಲಬುರಗಿ ಜಿಲ್ಲೆಗೆ ರಾಹುಲ್ ಭೇಟಿ
- ಮುಖಂಡರು, ಕಾರ್ಯಕರ್ತರೊಂದಿಗೆ ರಾಹುಲ್ ಸಭೆ
ಎಐಸಿಸಿ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಚುನಾವಣಾ ಪ್ರಚಾರಕ್ಕಾಗಿ ಕಲಬುರಗಿ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ತುರ್ತು ಪತ್ರಿಕಾಗೋಷ್ಠಿ ನಡೆಸಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಲಬುರಗಿ ವಿಭಾಗದ ಉಸ್ತುವಾರಿ ಎಐಸಿಸಿ ಕಾರ್ಯದರ್ಶಿಗಳು, ಮಾಜಿ ಸಚಿವ ಶ್ರೀಧರ್ ಬಾಬು, “ದೇಶದ ಎಲ್ಲರನ್ನು ಜೊತೆಗೂಡಿಸುವ ಸಲುವಾಗಿ ಪ್ರೀತಿ ಹಂಚುತ್ತಾ, ಸೌಹಾರ್ದತೆ ಹೆಚ್ಚಿಸುವ ಉದ್ದೇಶದಿಂದ 40 ಸಾವಿರ ಕಿ.ಮೀ ನಡೆದು ಭಾರತ್ ಜೋಡೋ ಯಾತ್ರೆ ಮಾಡಿದ ಜನಪ್ರಿಯ ನಾಯಕ ರಾಹುಲ್ ಗಾಂಧಿ ನಾಳೆ (27.4.2023) ರಾತ್ರಿ ಕಲಬುರಗಿ ಆಗಮಿಸಲಿದ್ದಾರೆ” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? : ತುಮಕೂರು | ಕಾಂಗ್ರೆಸ್ಗೆ ಮತ ಹಾಕಲ್ಲ ಎಂದಿದ್ದಕ್ಕೆ ಮತದಾರನ ಮೇಲೆ ಹಲ್ಲೆ
“28ರ ಬೆಳಗ್ಗೆ ಜೇವರ್ಗಿ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡಲಿದ್ದು, ಈ ವೇಳೆ ಜಿಲ್ಲೆಯ ಹಾಲಿ ಮತ್ತು ಮಾಜಿ ಶಾಸಕರು, ಸಚಿವರು, ಮಾಜಿ ವಿಧಾನ ಪರಿಷತ್ ಸದ್ಯಸರು, ಕಾಂಗ್ರೆಸ್ ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರು ಇರಬೇಕು” ಎಂದು ಮನವಿ ಮಾಡಿದರು.