ಕಲಬುರಗಿ | ಸಿಮೆಂಟ್ ಕಾರ್ಖಾನೆಯ 5ನೇ ಘಟಕ ಸ್ಥಾಪನೆಗೆ ಬಹುಜನ ಸಮಾಜ ಪಕ್ಷದ ವಿರೋಧ

Date:

Advertisements

ಅಲ್ಟ್ರಾಟೆಕ್ ಸಿಮೆಂಟ್ ಆದಿತ್ಯ ನಗರ ರಾಜಶ್ರೀ ಸಿಮೆಂಟ್ ಕಾರ್ಖಾನೆಯವರು 5ನೇ ಘಟಕವನ್ನು ಪ್ರಾರಂಭ ಮಾಡುವುದನ್ನು ರದ್ದುಗೊಳಿಸಲು ಒತ್ತಾಯಿಸಿ ಬಹುಜನ ಸಮಾಜ ಪಕ್ಷ, ಸೇಡಂನ ಉಪ ವಿಭಾಗ ಕಾರ್ಯಾಲಯದ ಸಹಾಯಕ ಆಯುಕ್ತರ ಮುಖಾಂತರ ಕಲಬುರಗಿ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.

ಅಲ್ಟ್ರಾಟೆಕ್ ಸಿಮೆಂಟ್ ಕಾರ್ಖಾನೆಯವರು ವಿಷಪೂರಿತ ರಸಾಯನಿಕ ಅನಿಲವನ್ನು ನೇರವಾಗಿ ಕಾಗಿಣಾ ನದಿಗೆ ಬಿಡುತ್ತಿರುವುದರಿಂದ, ಮಳಖೇಡ ಸುತ್ತ-ಮುತ್ತಲಿನ ಗ್ರಾಮಗಳಲ್ಲಿ ಪರಿಸರ ಮಾಲಿನ್ಯವನ್ನು ಹಾಳು ಮಾಡುತ್ತಿದ್ದು ಮತ್ತು ಫಲವತ್ತಾದ ಜಮೀನಿನ ಬೆಳೆಗಳ ಮೇಲೆ ಬ್ಲಾಸ್ಟಿಂಗ್ ದಿಂದ ಧೂಳು ಬೆಳೆಗಳ ಮೇಲೆ ಬಿದ್ದು, ಬೆಳೆ ಹಾಳಾಗುತ್ತಿದೆ. ಗ್ರಾಮಸ್ಥರು ಹಾಗೂ ರೈತರು ಕಾರ್ಖಾನೆಯವರು ಬಿಟ್ಟ ವಿಷಪೂರಿತ ನೀರನ್ನು ಕುಡಿದು ರೋಗ ರುಜಿನಗಳಿಗೆ ತುತ್ತಾಗುತ್ತಿದ್ದಾರೆ. ಪ್ರಾಣಿಗಳು ಕೂಡಾ ವಿಷಪೂರಿತ ನೀರಿಗೆ ಬಲಿಯಾಗುತ್ತಿವೆ.

ಆದರೂ ಸಿಮೆಂಟ್ ಕಾರ್ಖಾನೆಯವರು ಪುನಃ 5ನೇ ಘಟಕವನ್ನು ಸ್ಥಾಪನೆ ಮಾಡುವ ವಿಷಯ ತಿಳಿದು ಬಂದಿರುತ್ತದೆ. ಪರಿಸರ ಮಾಲಿನ್ಯದಿಂದ ಉಂಟಾಗುತ್ತಿರುವ ಜೀವ ಹಾನಿ ಹಾಗೂ ಪ್ರಾಣ ಹಾನಿ ತಡೆಗಟ್ಟುವ ನಿಟ್ಟಿನಲ್ಲಿ ಸಿಮೆಂಟ್ ಕಾರ್ಖಾನೆಯ 5ನೇ ಘಟಕವನ್ನು ಪ್ರಾರಂಭಿಸಲು ಬಹುಜನ ಸಮಾಜ ಪಕ್ಷ ಸೇಡಂ ಘಟಕಖಂಡಿಸುತ್ತದೆ. ಆದಕಾರಣ ಅದನ್ನು ರದ್ದುಪಡಿಸಿ, ಇದರ ಬಗ್ಗೆ ಸೂಕ್ತವಾದ ಕ್ರಮ ಕೈಗೊಳ್ಳದಿದ್ದರ ಮುಂದಿನ ದಿನಗಳಲ್ಲಿ ಕಾರ್ಖಾನೆ ವಿರುದ್ಧ ಮುಷ್ಕರ ಕೈಗೊಳ್ಳಲಾಗುವುದು ಎಂದು ರೇವಣಸಿದ್ದಪ್ಪ, ಎಸ್.ಸಿಂಧೆ, ಬಿಎಸ್‌ಪಿ ಅಧ್ಯಕ್ಷರು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ನನ್ನ ಬಂಧನ ರಾಜಕೀಯ ಪಿತೂರಿಯ ಭಾಗ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಧಾರವಾಡ | ಮಕ್ಕಳ ಸಮಗ್ರ ಅಭಿವೃದ್ಧಿಗೆ ಪೂರಕ ವಾತಾವರಣ ನಿರ್ಮಿಸುವುದು ಎಲ್ಲರ ಕರ್ತವ್ಯ: ಕೆ. ನಾಗಣ್ಣಗೌಡ

ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ....

ಹುಬ್ಬಳ್ಳಿ | ಕುರುಬ ಸಮಾಜದ ಕುಲಶಾಸ್ತ್ರ ಅಧ್ಯಯನವನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲು ಒತ್ತಾಯ

ರಾಜ್ಯ ಸರ್ಕಾರ ಪಶುಪಾಲಕರ ಹಾಗೂ ಕುರಿಗಾರರ ದೌರ್ಜನ್ಯ ಕಾಯ್ದೆ ಜಾರಿಗೆ ತಂದಿರುವ...

Download Eedina App Android / iOS

X