ಕಲಬುರಗಿ | ಕಸದ ತೊಟ್ಟಿಯಾದ ಬಾಪುನಗರ ಬಡಾವಣೆ

Date:

Advertisements

ಕಲಬುರಗಿ ನಗರದ ದಕ್ಷಿಣ ಕ್ಷೇತ್ರದ ಬಡಾವಣೆ ಬಾಪುನಗರದಲ್ಲಿ ಎಲ್ಲಿ ನೋಡಿದರಲ್ಲಿ ಕಸದ ರಾಶಿ ಕಂಡುಬರುತ್ತವೆ. ಆದರೂ, ಮಹಾನಗರ ಪಾಲಿಕೆ ಯಾವುದೇ ಕ್ರಮ ಕೈಗೊಂಡಿಲ್ಲ. ಕಸ ಸಂಗ್ರಹಕ್ಕಾಗಿ ಅಪರೂಪಕ್ಕೆ ಪಾಲಿಕೆಯ ವಾಹ ಬರುತ್ತದೆ. ಬಡಾವಣೆಯಲ್ಲಿ ಒಳಚರಂಡಿ ಕಸ ತೆಗೆದು ರಸ್ತೆ ಬದಿಯಲ್ಲಿ ರಾಶಿ ಹಾಕಿ ಸುಮಾರು ದಿನಗಳೇ ಕಳೆದಿವೆ. ಆದರೂ, ಪಾಲಿಕೆ ಸಿಬ್ಬಂದಿಯಾಗಲೀ, ವಾಹನವಾಗಲೀ ಇತ್ತ ಸುಳಿದಿಲ್ಲ. ಕಸ ಕೊಂಡೊಯ್ದಿಲ್ಲ ಎಂದು ಸ್ಥಳೀಯರು ಕಿಡಿಕಾರುತ್ತಿದ್ದಾರೆ.

ಸಮಸ್ಯೆಯ ಬಗ್ಗೆ ಈದಿನ.ಕಾಮ್ ಜೊತೆ ಮಾತನಾಡಿದ ಸ್ಥಳೀಯರಾದ ಮುರಳಿಧರ್ ಉಪಾಧ್ಯಯ, “ಬಡಾವಣೆಯಲ್ಲಿ ಕಸದ ಸಮಸ್ಯೆ ಹೆಚ್ಚಾಗಿದೆ. ಪದೇ-ಪದೇ ದೂರು ನೀಡಿದರೂ ಪಾಲಿಕೆ ಅವರು ಇತ್ತ ಸುಳಿಯುತ್ತಿಲ್ಲ. ಚರಂಡಿ ತುಂಬಿ, ಕೊಳಚೆ ನೀರು ರಸ್ತೆ ಮೇಲೆ ಹರಿಯುತ್ತದೆ. ಗಬ್ಬು ನಾರುತ್ತದೆ. ಮನೆ ಒಳಗೂ ಕುಳಿತು ಊಟ ಮಾಡಲು ಆಗುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಪುಟ್ಟ ಮಕ್ಕಳಿದ್ದಾರೆ. ಕೊಳಚೆ ನೀರಿನಿಂದ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಆ ಸೊಳ್ಳೆಗಳಿಂದ ಮಕ್ಕಳು ಅನಾರೋಗ್ಯಕ್ಕೆ ತುತ್ತಾಗುವ ಭಯವಿದೆ. ಮಲೆರಿಯಾ, ಡೆಂಘಿಯಂತಹ ರೋಗಗಳು ಹರಿಡಿದರೆ ಹೊಣೆಯಾರು” ಎಂದು ಆಂತಕ ವ್ಯಕ್ತಪಡಿಸಿದ್ದಾರೆ.

Advertisements

ಬಾಪುನಗರ1

“ಬಾಪುನಗರದಲ್ಲಿ ಹಿಂದುಳಿದ ವರ್ಗದವರೇ ಜಾಸ್ತಿ ವಾಸವಾಗಿದ್ದಾರೆ. ನಮ್ಮ ಬಗ್ಗೆ ಜನಪ್ರತಿನಿಧಿ, ಅಧಿಕಾರಿಗಳು ಬೇಜವಾಬ್ದಾರಿ ತೋರಿಸುತ್ತಾರೆ” ಎಂದು ಆರೋಪಿಸಿದ್ದಾರೆ.

ಬಾಪುನಗರ ನಿವಾಸಿ ಅನುರಾಧ ಮಾತನಾಡಿ, “ಹತ್ತು ಇಪ್ಪತ್ತು ದಿನಗಳು ಕಳೆದರು ಕಸ ತೆಗೆದುಕೊಂಡು ಹೋಗುವುದಕ್ಕೆ ಪಾಲಿಕೆ ಸಿಬ್ಬಂದಿ ಬರುವುದಿಲ್ಲ. ನಾವು ಕಲಬುರಗಿ ನಗರದಲ್ಲಿಯೇ ಇದ್ದರೂ, ನಮಗೆ ಕುಡಿಯುವ ನೀರಿನ ಪೂರೈಕೆ ಇಲ್ಲ. ಜಿಲ್ಲಾಸ್ಪತ್ರೆಯಿಂದ ಪೈಪ್‌ ಹಾಕಿಕೊಂಡು ನೀರು ಪಡೆಯುತ್ತೇವೆ. ಕೆಲವೊಮ್ಮೆ ಅಲ್ಲಿಯೂ ನೀರು ಸಿಗುವುದಿಲ್ಲ” ಎಂದು ತಮ್ಮ ಅಳಲನ್ನು ತೋಡಿಕೊಂಡರು.

ನಿವಾಸಿ ಕರಣ್ ಮಾತನಾಡಿ, “ಬಡಾವಣೆಯಲ್ಲಿರುವ ಸರ್ಕಾರಿ ಶಾಲೆಯ ಸುತ್ತಲೂ ಕೂಡ ಸ್ವಚ್ಛತ್ತೆ ಇಲ್ಲ. ಶಾಲೆಗೆ ಮಕ್ಕಳು ಹೋಗುವುದೇ ಕಷ್ಟವಾಗಿದೆ. ಮಳೆ ಬಂದರೆ ಚರಂಡಿ ತುಂಬಿ ಮನೆ ಅಂಗಳಕ್ಕೆ ನೀರು ನುಗ್ಗುತ್ತದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಗೀತಾ ಹೊಸಮನಿ
ಗೀತಾ ಹೊಸಮನಿ
ಯಾದಗಿರಿ, ಕಲಬುರಗಿ ಜಿಲ್ಲಾ ಸಂಯೋಜಕರು, NCCಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ(NRAI ಫೈರಿಂಗ್ ವಿಭಾಗ) ವಿಜೇತೆ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X