ಕಲಬುರಗಿ | ಮೂಲಸೌಲಭ್ಯ ಒದಗಿಸುವಂತೆ ಭೀಮ್‌ ಆರ್ಮಿ ಆಗ್ರಹ

Date:

ಮೂಲಸೌಲಭ್ಯ ಒದಗಿಸುವಂತೆ ಒತ್ತಾಯಿಸಿ ಭೀಮ್ ಆರ್ಮಿ ಕಲಬುರಗಿ ಜಿಲ್ಲಾ ಸಮಿತಿಯಿಂದ ಜೇವರ್ಗಿ ಪುರಸಭೆ ಕಾರ್ಯಾಲಯ ಮುಖ್ಯಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.

- Advertisement -

ಜಿಲ್ಲಾ ಸಂಚಾಲಕ ಅಬ್ದುಲ್ ಗನಿ ರಾವಣ್ ಮಾತನಾಡಿ, “ಜೇವರ್ಗಿ ಪಟ್ಟಣದ ಬುಗ್ಗಿ ಏರಿಯಾದ ಮಠದ ಭಾವಿಯ ಹತ್ತಿರ ಬಡಾವಣೆಯಲ್ಲಿ ಸಿ ಸಿ ರಸ್ತೆ, ಚರಂಡಿ, ಮಹಿಳೆಯರಿಗೆ ಶೌಚಾಲಯ, ಕುಡಿಯುವ ನೀರಿನ ಪೈಪಲೈನ್, ಬೀದಿ ದೀಪಗಳು ಸೇರಿದಂತೆ ಇತರ ಮೂಲಸೌಲಭ್ಯಗಳು ಇಲ್ಲದಿರುವುದರಿಂದ ಬಡಾವಣೆಯ ನಿವಾಸಿಗಳಿಗೆ ವಾಸಿಸಲು ತುಂಬಾ ತೊಂದರೆಯಾಗುತ್ತಿದೆ.
ಈ ಕುರಿತು ಈಗಾಗಲೇ ಪುರಸಭೆ ಇಲಾಖೆಗೆ ಹಲವಾರು ಬಾರಿ ಮನವಿ ಸಲ್ಲಿಸಿ ಮೌಖಿಕವಾಗಿ ಹೇಳಿದರೂ ಕೂಡ ಈವರೆಗೆ ಯಾವುದೇ ಪ್ರಯೋಜನವಾಗಿಲ್ಲ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು...

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ ಸಂಕೇತವಾಗಿದ್ದಾರೆ. ತಮ್ಮ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎಂಬ ದೃಢ ನಂಬಿಕೆಯೊಂದಿಗೆ, ಅವರು ರೈತರಿಗೆ ಮಾರ್ಗದರ್ಶನ ನೀಡುತ್ತಾ, ಪರಿಸರವನ್ನು ರಕ್ಷಿಸುತ್ತಾ, ಮುಂದಿನ...

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ಈ ಸುದ್ದಿ ಓದಿದ್ದೀರಾ? ಉಡುಪಿ | ಆರು ಸಾವಿರ ಪಡಿತರ ಚೀಟಿ ರದ್ದು; ಗೊಂದಲ ಸರಿಪಡಿಸಲು ಕುಂದಾಪುರ ಸಿಪಿಎಂ ಆಗ್ರಹ

“ತಾವಾದರೂ ನಮ್ಮ ಮನವಿಯನ್ನು ಗಂಭೀರವಾಗಿ ಪರಿಗಣಿಸಿ ಸದರಿ ಬಡಾವಣೆಗೆ ಮೂಲ ಸೌಲಭ್ಯಗಳನ್ನು ಒದಗಿಸಿ ಬಡಾವಣೆಯ ನಿವಾಸಿಗಳಿಗೆ ಅನುಕೂಲ ಮಾಡಿಕೊಡಬೇಕು” ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಯಮನೇಶ ಅಂಕಲಗಿ, ವಿಶ್ವಾರಾಧ್ಯ ಗೋಪಾಲಕರ, ರವಿಕುಮಾರ ಬಿ ಡ್ಯಾನ್ಸರ್, ಮೌಲಾಲಿ, ಮಹ್ಮದ್ ರಫೀಕ್, ಭಾಗೇಶ ಪೂಜಾರಿ, ಕುಶಾಲ ಕೊಂಬಿನ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಕರ್ತವ್ಯಲೋಪ ಆರೋಪದಡಿ ಡಿಎಚ್‌ಒ ಡಾ. ರಾಜಕುಮಾರ್ ಯರಗಲ್ ಅಮಾನತು

ಕರ್ತವ್ಯಲೋಪ, ಆಡಳಿತಾತ್ಮಕ ನಿರ್ಲಕ್ಷ್ಯ ಹಾಗೂ ಇಲಾಖೆಯ ಸೂಚನೆಗಳನ್ನು ಪಾಲಿಸದೆ ಕಾರ್ಯನಿರ್ವಹಿಸಿದ ಆರೋಪದ...

ಅ.15ರಿಂದ ಬಾಗಲಕೋಟೆ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ತರಗತಿ ಆರಂಭ

ಬಾಗಲಕೋಟೆ ಜಿಲ್ಲೆಯ ಬಹು ವರ್ಷಗಳ ಬೇಡಿಕೆಯ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ...

ರಾಯಚೂರು | ಅನಧಿಕೃತ ವಿದ್ಯುತ್ ಬಳಕೆ; ಜೆಸ್ಕಾಂನಿಂದ ₹18.95 ಲಕ್ಷ ದಂಡ

ಜೆಸ್ಕಾಂ ಇಲಾಖೆಯಿಂದ ಜಿಲ್ಲೆಯಲ್ಲಿ ಆಗಸ್ಟ್‌ನಲ್ಲಿ ಜೆಸ್ಕಾಂ ಅಧಿಕಾರಿಗಳು, ಜಾಗೃತದಳದವರು ದಾಳಿ ಮಾಡಿ...