ಕಲಬುರಗಿ | ‘ಇಷ್ಟು ದಿನ ಎಲ್ಲಿಗೆ ಹೋಗಿದ್ರಿ’ ಎಂದು ಬಿಜೆಪಿ ಸಂಸದರಿಗೆ ಅವರ ಕಾರ್ಯಕರ್ತರಿಂದಲೇ ತರಾಟೆ

Date:

Advertisements

ಸಂಸದರಾದ ಮೇಲೆ ಇಷ್ಟು ದಿನ ಎಲ್ಲಿಗೆ ಹೋಗಿದ್ರಿ. ವಿಧಾನಸಭಾ ಚುನಾವಣೆಯ ಸಮಯದಲ್ಲೂ ಕ್ಷೇತ್ರಕ್ಕೆ ಬರಲಿಲ್ಲ. ಈಗ ಬಂದಿದ್ದೀರಾ ಎಂದು ಸಂಸದ ಡಾ. ಉಮೇಶ್‌ ಜಾಧವ್ ಅವರನ್ನು ಬಿಜೆಪಿ ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.

ನಗರದಲ್ಲಿ ಶನಿವಾರ ನಡೆದ ಬಿಜೆಪಿ ಜಿಲ್ಲಾ ಪ್ರಬುದ್ಧರ ಸಭೆಯಲ್ಲಿ ಉಮೇಶ್‌ ಜಾಧವ್‌ ಅವರನ್ನು ಬಿಜೆಪಿ ಕಾರ್ಯಕರ್ತರೇ ತರಾಟೆಗೆ ತೆಗೆದುಕೊಂಡಿದ್ದಾರೆ. ವೇದಿಕೆಯಲ್ಲಿದ್ದ ಇತರರನ್ನು ಕಾರ್ಯಕರ್ತರನ್ನು ತಡೆದು, ಸಮಾಧಾನ ಮಾಡಿದ್ದಾರೆ.

ಸಭೆಯಲ್ಲಿ ಮಾತಾಡಿದ ಜಾಧವ್, “ನನ್ನ ಗೆಲುವಿಗೆ ಎಂಎಲ್‌ಸಿ ಎನ್‌ ರವಿಕುಮಾರ್‌ ಅವರ ಶ್ರಮ ಕಾರಣ. ಕಳೆದ ಚುನಾವಣೆಯಲ್ಲಿ ನನ್ನ ಗೆಲುವಿಗಾಗಿ ಹಗಲು-ರಾತ್ರಿ ದುಡಿದಿದ್ದಾರೆ” ಎಂದು ಹೇಳಿದ್ದಾರೆ.

Advertisements

ಅವರ ಮಾತಿನಿಂದ ಸಿಡಿಮಿಡಿಗೊಂಡ ಪಕ್ಷದ ಹಿರಿಯ ಕಾರ್ಯಕರ್ತರು, “ನಾವ್ಯಾರು ನಿಮ್ಮ ಪರವಾಗಿ ಕೆಲಸ ಮಾಡಿಲ್ವಾ? ಮತ ಹಾಕಿಲ್ವಾ? ಒಬ್ಬರನ್ನು ಓಲೈಕೆ ಮಾಡಲು ಬಂದಿದ್ದೀರಾ? ಇಷ್ಟು ದಿನ ಎಲ್ಲಿಗೆ ಹೋಗಿದ್ರಿ?” ಎಂದು ಗಲಾಟೆ ಮಾಡಿದ್ದಾರೆ.

ಗಲಾಟೆ ವೇಳೆ ಮಧ್ಯಪ್ರವೇಶಿಸಿದ ಪಕ್ಷದ ಮುಖಂಡರು ಕಾರ್ಯಕರ್ತರನ್ನು ಸಮಾಧಾನ ಪಡಿಸಿದ್ದು, “ಸಂಸದರ ಭಾಷಣದ ವೇಳೆ ಹೀಗೆ ವರ್ತಿಸಬಾರದು. ಬಿಜೆಪಿಯ ಶಿಸ್ತನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು” ಎಂದು ಹೇಳಿದ್ದಾರೆ.

ಗದ್ದಲ ನಿಂತ ಬಳಿಕ ಮಾತನಾಡಿದ ಎಂಎಲ್‌ಸಿ ರವಿಕುಮಾರ್, “ಸಂಸದರ ಗೆಲುವಿಗೆ ಎಲ್ಲ ಕಾರ್ಯಕರ್ತರ ಶ್ರಮವಿದೆ. ಅವರ ಗೆಲುವು ಎಲ್ಲ ಕಾರ್ಯಕರ್ತರ ಗೆಲುವು” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

Download Eedina App Android / iOS

X