ಕಲಬುರಗಿ | ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ಕಾರ್ಯಕರ್ತನ ಶವ ಪತ್ತೆ

Date:

ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ಕಾರ್ಯಕರ್ತನ ಶವ ಪತ್ತೆಯಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಸಲಗರ ಬಸಂತಪುರ ಗ್ರಾಮದ ಬಿಜೆಪಿ ಕಾರ್ಯಕರ್ತ ರಾಮು ರಾಠೋಡ್‌(45) ಮೃತ ದುರ್ದೈವಿ. ಅವರು ಮೇ 10ರಂದು ನಡೆದ ಚುನಾವಣೆಯಲ್ಲಿ ಬೂತ್‌ ಏಜೆಂಟ್‌ ಆಗಿ ಕಾರ್ಯ ನಿರ್ವಹಿಸಿದ್ದರು. ಬುಧವಾರ ರಾತ್ರಿ ಮನೆಗೆ ಬಂದಿರಲಿಲ್ಲ ಎನ್ನಲಾಗಿದೆ.

ಮೇ 11ರ ಬೆಳಿಗ್ಗೆ ಗ್ರಾಮದ ಹೊರವಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಇದು ಕೊಲೆಯೇ, ಆತ್ಮಹತ್ಯೆಯೇ ಎಂಬ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಮಾಜಿ ಶಾಸಕನ ಸಹೋದರನ ಮೇಲೆ ಬಿಜೆಪಿ ಕಾರ್ಯಕರ್ತರಿಂದ ಹಲ್ಲೆ

“ರಾಮು ಅವರನ್ನು ಯಾರೋ ಹತ್ಯೆಮಾಡಿ ನೇಣು ಬಿಗಿದಿದ್ದಾರೆ” ಎಂದು ಮೃತನ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಚಿಂಚೋಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಮತದಾನ ಮಾಡಲು ವಿಕಲಚೇತನರು, ಹಿರಿಯ ನಾಗರಿಕರಿಗೆ ಸೌಲಭ್ಯ

ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಈ...

ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿರುವ ಬಹುತೇಕ ನೌಕರರಿಗೆ ಸಿಗದ ಅಂಚೆ ಮತದಾನ

ಲೋಕಸಭಾ ಚುನಾವಣೆಯ ಕರ್ತವ್ಯಕ್ಕೆ ತೆರಳುವ ಬಹುತೇಕ ಸೇವಾ ಸಿಬ್ಬಂದಿಗಳು ಈ ಬಾರಿ...

ಹಾಸನ ಪೆನ್‌ಡ್ರೈವ್‌ ಪ್ರಕರಣ: ನಾಲ್ವರು ಸಂತ್ರಸ್ತೆಯರು ಆತ್ಮಹತ್ಯೆಗೆ ಯತ್ನ

ಹಾಸನದ ಪೆನ್‌ಡ್ರೈವ್‌ ಪ್ರಕರಣ ದಿನದಿಂದ ದಿನಕ್ಕೆ ಜಿಲ್ಲಾದ್ಯಂತ ಆತಂಕ ಹೆಚ್ಚಿಸ್ತಾ ಇದೆ....

ಬೆಂಗಳೂರು | ಲೋಕಸಭಾ ಚುನಾವಣೆ : ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾ ಚುನಾವಣಾಧಿಕಾರಿ

2024ರ ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆ, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್...