ಕಲಬುರಗಿ | ಆಸ್ತಿ ವರ್ಗಾವಣೆ ಕಡತಕ್ಕೆ ಲಂಚ: ಲೋಕಾಯುಕ್ತ ಬಲೆಗೆ ಬಿದ್ದ ಗ್ರಾ.ಪಂ ಕಾರ್ಯದರ್ಶಿ

Date:

ಆಸ್ತಿ ವರ್ಗಾವಣೆ ಕಡತ ವಿಲೇವಾರಿಗೆ ಲಂಚಕ್ಕೆ ಬೇಡಿಕೆ ಇಟ್ಟು ಹಣ ಸ್ವೀಕರಿಸುತ್ತಿದ್ದ ಕಲಬುರಗಿ ಜಿಲ್ಲೆಯ ಹಾಗರಗಾ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ ವೇದಾಂಗ್ ಅವರನ್ನು ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಸೋಮವಾರ ಬಲೆ ಬೀಸಿ ಬಂಧಿಸಿದ್ದಾರೆ.

- Advertisement -

ಆಸ್ತಿ ವರ್ಗಾವಣೆ ಸಂಬಂಧದ ಕಡತವನ್ನು ಅನುಮೋದಿಸಿ ದಾಖಲೆಗಳನ್ನು ಪೂರ್ಣಗೊಳಿಸಲು ಕಾರ್ಯದರ್ಶಿ ವೇದಾಂಗ್ ಅವರು ₹9,950 ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ದೂರುದಾರರು ಈ ಬಗ್ಗೆ ಕರ್ನಾಟಕ ಲೋಕಾಯುಕ್ತಕ್ಕೆ ದೂರು ನೀಡಿದ ಹಿನ್ನೆಲೆಯಲ್ಲಿ ಅಧಿಕಾರಿಗಳು ಬಲೆ ಬೀಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಕರ್ನಾಟಕ ಲೋಕಾಯುಕ್ತ ಕಲಬುರಗಿ ಪೊಲೀಸ್ ಅಧೀಕ್ಷಕ ಸಿದ್ಧರಾಜು ಸಿ. ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ, ಕಾರ್ಯದರ್ಶಿ ವೇದಾಂಗ್ ಅವರು ದೂರುದಾರರಿಂದ ₹9,950 ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ರೆಡ್‌ಹ್ಯಾಂಡ್‌ ಆಗಿ ಬಂಧಿಸಿದರು. ಬಳಿಕ ಲಂಚದ ಹಣವನ್ನು ವಶಪಡಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆದರು.

ಲೋಕಾಯುಕ್ತಕ್ಕೆ ಸಲ್ಲಿಸಿದ ದೂರಿನ ಪ್ರಕಾರ, ದೂರುದಾರ ಸಂಜೀವ್ ಅವರ ಮಾವ ಕಿಶನ್ ಪವಾರ್ ಮೃತಪಟ್ಟಿದ್ದು, ಅವರ ಹೆಸರಿನಲ್ಲಿದ್ದ ಹಾಗರಗಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಜಾದಪುರ ಗ್ರಾಮದ ಸರ್ವೆ ನಂ.111/1ರ ಖುಲ್ಲಾ ನಿವೇಶನ ಸಂಖ್ಯೆ–12ನ್ನು ತಮ್ಮ ಹೆಸರಿಗೆ ವರ್ಗಾವಣೆ ಮಾಡಿಕೊಡುವಂತೆ ಗ್ರಾಮ ಪಂಚಾಯಿತಿಗೆ ಅರ್ಜಿ ಸಲ್ಲಿಸಲಾಗಿತ್ತು. ಈ ಸಂಬಂಧ ಮರಣ ಪ್ರಮಾಣಪತ್ರ, ಅಗತ್ಯ ಸ್ಟಾಂಪ್ ದಾಖಲೆಗಳು ಹಾಗೂ ಇತರೆ ದಾಖಲೆಗಳನ್ನು ಗ್ರಾಮ ಪಂಚಾಯಿತಿಗೆ ಸಲ್ಲಿಸಿದ್ದರೂ, ಕಡತವನ್ನು ವಿಲೇವಾರಿ ಮಾಡಲು ಕಾರ್ಯದರ್ಶಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ದೂರಿನ ಸತ್ಯಾಸತ್ಯತೆ ಪರಿಶೀಲಿಸಿದ ಲೋಕಾಯುಕ್ತ ಅಧಿಕಾರಿಗಳು ದೂರುದಾರರಿಗೆ ರಾಸಾಯನಿಕ ಲೇಪಿತ ನೋಟುಗಳನ್ನು ನೀಡಿ ಕಾರ್ಯಾಚರಣೆ ನಡೆಸಿದರು. ಕಾರ್ಯದರ್ಶಿ ವೇದಾಂಗ್ ಅವರು ನಿಗದಿತ ಮೊತ್ತವನ್ನು ಸ್ವೀಕರಿಸಿದ ತಕ್ಷಣ ದಾಳಿ ನಡೆಸಿದ ಅಧಿಕಾರಿಗಳು ಅವರನ್ನು ರೆಡ್‌ಹ್ಯಾಂಡ್‌ ಆಗಿ ಬಂಧಿಸಿದರು. ಬಳಿಕ ಸ್ಥಳದಲ್ಲೇ ಮಹಜರು ನಡೆಸಿ ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಿದರು.

ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್ ರವಿ ಪವಾರ್ ನೇತೃತ್ವದ ತಂಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಕಲಬುರಗಿ | ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಎಸ್‌ಕೆಎಂ ಆಗ್ರಹ

ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಕಚೇರಿಗಳಲ್ಲಿ ಲಂಚ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಗ್ರಾಮ ಪಂಚಾಯಿತಿ ಕಾರ್ಯದರ್ಶಿಯ ಬಂಧನ ಮತ್ತೊಮ್ಮೆ ಆಡಳಿತ ವ್ಯವಸ್ಥೆಯಲ್ಲಿನ ಭ್ರಷ್ಟಾಚಾರದ ಬಗ್ಗೆ ಚರ್ಚೆಗೆ ಕಾರಣವಾಗಿದೆ. ಲೋಕಾಯುಕ್ತ ಅಧಿಕಾರಿಗಳು ಸಾರ್ವಜನಿಕರು ಯಾವುದೇ ಸರ್ಕಾರಿ ಸೇವೆಗೆ ಲಂಚ ಕೇಳಿದರೆ ಕೂಡಲೇ ಮಾಹಿತಿ ನೀಡಿ ದೂರು ಸಲ್ಲಿಸುವಂತೆ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಸಿಎಂ ಭೇಟಿ ಹಿನ್ನೆಲೆ: ಸಂಚಾರ ಮಾರ್ಗ ಬದಲಾವಣೆ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು ಹೋಬಳಿಗೆ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾ‌ರ್...

ಕೋಲಾರ | ಕ್ರಷರ್ ಘಟಕದಿಂದ ಸೀತಿ ಬೆಟ್ಟದ ದೇವಾಲಯಕ್ಕೆ ಹಾನಿ: ಸ್ಥಗಿತಕ್ಕೆ ಗ್ರಾಮಸ್ಥರ ಪ್ರತಿಭಟನೆ

ತಾಲ್ಲೂಕಿನ ವೇಮಗಲ್ ಹೋಬಳಿ ಸೀತಿ ಗ್ರಾಮದ ಬಳಿ ಗೋಮಾಳ ಜಮೀನಿನಲ್ಲಿ ನಿಯಮ...

ಕೋಲಾರ | ಕೆ.ಎಸ್. ಗಣೇಶ್ ನೇತೃತ್ವದಲ್ಲಿ ಬೆಳೆದ ಸಂಘದಿಂದ ಎರಡು ಜಿಲ್ಲೆಗಳ ಪತ್ರಕರ್ತರಿಗೆ ಆರ್ಥಿಕ, ಆರೋಗ್ಯ ಹಾಗೂ ಸಾಮಾಜಿಕ ನೆರವು

ಪತ್ರಕರ್ತರ ಆರ್ಥಿಕ ಹಾಗೂ ಸಾಮಾಜಿಕ ಅಗತ್ಯಗಳಿಗೆ ಸ್ಪಂದಿಸುವ ಉದ್ದೇಶದಿಂದ ಆರಂಭಗೊಂಡಿರುವ ಕೋಲಾರ...

ಚಿಕ್ಕಮಗಳೂರು | ಸಿಎಂ ಭೇಟಿ: ಕಾಂಗ್ರೆಸ್ ಸರ್ಕಾರ ಜನಪರ ಕಾಳಜಿಗೆ ಸಾಕ್ಷಿಯಾಗಿದೆ; ಹೆಚ್.ಪಿ ಮಂಜೇಗೌಡ

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ ಮಾತನಾಡಿ,"ಕಸ್ತೂರಿ ರಂಗನ್...