ಔಷಧೀಯ ಹಾಗೂ ಆಯುರ್ವೇದಿಕ ಗಿಡಮೂಲಿಕೆಗಳ ಮಹತ್ವ, ಸಾಂಪ್ರದಾಯಿಕ ಬಳಕೆ ಮತ್ತು ಆರೋಗ್ಯದ ದೃಷ್ಟಿಯಿಂದ ಅವುಗಳ ಉಪಯೋಗಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮ ಖಣದಾಳ ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧವಾರ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಆಯುರ್ವೇದ ಉಪನ್ಯಾಸಕ ರಮೇಶ ಮಹೇಂದ್ರಕರ್ ಇಜೇರಿ ಅವರು ಶಂಕಪುಷ್ಪ, ಅಶ್ವಗಂಧ, ಕಾಗೆ ಗಿಡ, ಅಲೋವೆರಾ, ನೆಲನೆಲ್ಲಿ, ಕರಿಬೇವು ಸೇರಿದಂತೆ 12 ಬಗೆಯ ಔಷಧೀಯ ಸಸ್ಯಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿದರು. ಗಿಡಮೂಲಿಕೆಗಳ ಸಾಂಪ್ರದಾಯಿಕ ಬಳಕೆ, ಅವುಗಳ ಆರೋಗ್ಯಕಾರಿ ಗುಣಗಳು ಹಾಗೂ ಪರಿಸರ ಸಂರಕ್ಷಣೆಯಲ್ಲಿ ಸಸ್ಯಗಳ ಮಹತ್ವದ ಕುರಿತು ಮಾಹಿತಿ ನೀಡಿದರು.
ನಂದಿಕೂರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪವನಕುಮಾರ್ ವಳಕೇರಿ ಮಾತನಾಡಿ, ‘ಆರೋಗ್ಯಕರ ಜೀವನಕ್ಕಾಗಿ ಉತ್ತಮ ಆಹಾರ ಪದ್ಧತಿ ರೂಢಿಸಿಕೊಳ್ಳುವುದರ ಜತೆಗೆ ಪರಿಸರ ಸಂರಕ್ಷಣೆಯತ್ತಲೂ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಗಿಡಗಳನ್ನು ನೆಟ್ಟು ಬೆಳೆಸುವ ಮೂಲಕ ಹಸಿರು ಪರಿಸರ ನಿರ್ಮಾಣಕ್ಕೆ ಕೈಜೋಡಿಸಬೇಕು. ವಿದ್ಯಾರ್ಥಿಗಳು ಸಸ್ಯಗಳ ಮಹತ್ವ ಅರಿತು ಪರಿಸರ ಕಾಳಜಿಯನ್ನು ಬೆಳೆಸಿಕೊಳ್ಳಬೇಕು’ ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಕಲಬುರಗಿ ಮಾಜಿ ಉಪಾಧ್ಯಕ್ಷೆ ಅನಿತಾ ಪವನಕುಮಾರ್ ವಳಕೇರಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ಅಂಗವಾಗಿ ಶಾಲಾ ಆವರಣದಲ್ಲಿ ವಿವಿಧ ಔಷಧೀಯ ಸಸಿಗಳನ್ನು ನೆಡಲಾಯಿತು.
This video cannot be played in your browser. Open the video directly

ಇದನ್ನು ಓದಿದ್ದೀರಾ? ಕಲಬುರಗಿ | ₹13.43 ಕೋಟಿ ವೆಚ್ಚದ ಅಪ್ಪನ ಕೆರೆ ಅಭಿವೃದ್ಧಿ ಕಾಮಗಾರಿ ಲೋಕಾರ್ಪಣೆ: ಸಿಎಂ ಡಿ.ಕೆ. ಶಿವಕುಮಾರ್
ರವೀಂದ್ರ ವಿಭೂತಿ, ಸುರೇಶ್ ಬಡಿಗೇರ, ಗಣಪತಿ ಬಬಲಾದ, ರಮೇಶ ಮಹೇಂದ್ರಕರ್ ಇಜೇರಿ, ರಾಚಣಗೌಡ ಪಾಟೀಲ್, ಅಬರೀಶ್ ಗುತ್ತೇದಾರ್, ರಾಮ್ಯ ಕುಲಕರ್ಣಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ಗುರುರಾಜ್ ಕುಲಕರ್ಣಿ ಕಾರ್ಯಕ್ರಮ ನಿರೂಪಿಸಿದರು.





