ಕನಕದಾಸ ಜಯಂತಿ ಕಾರ್ಯಕ್ರಮದ ವೇಳೆ ಇಬ್ಬರು ಯುವಕರ ನಡುವೆ ಗಲಾಟೆ ನಡೆದಿದೆ. ಜಗಳದ ಕಾರಣ ಗುಂಪುಗೂಡಿದ್ದವರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಗುರುವಾರ, ಕಲಬುರಗಿಯಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಪಂಚಾಯತಿ ಹಾಗೂ ಮಹಾನಗರ ಪಾಲಿಕೆ ಒಗ್ಗೂಡಿ ಕನಕದಾಸ ಜಯಂತಿ ಕಾರ್ಯಕ್ರಮ ಆಯೋಜಿಸಿದ್ದವು. ಕಾರ್ಯಕ್ರಮಕ್ಕೂ ಮುನ್ನ ಮೆರವಣಿಗೆ ನಡೆಸಲಾಗಿತ್ತು.
ಮರವಣಿಗೆ ವೇಳೆ, ಕ್ಷುಲ್ಲಕ ಕಾರಣಕ್ಕೆ ಇಬ್ಬರು ಯುವಕರು ಜಗಳ ಮಾಡಿಕೊಂಡು, ಹೊಡೆದಾಡಿಕೊಂಡಿದ್ದಾರೆ. ಅವರನ್ನು ಸಮಾಧಾನಿಸಿ ವೇದಿಕೆ ಕಾರ್ಯಕ್ರಮದ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ, ಸಮುದಾಯದ ಮುಖಂಡರು ಯುವಕರನ್ನು ವಿಚಾರಿಸಿದ್ದಾರೆ. ಈ ವೇಳೆ, ಗಾಯಗೊಂಡಿದ್ದ ಯುವಕನ ಮೇಲೆ ಮತ್ತೆ ಹಲ್ಲೆ ನಡೆದಿದೆ.
ಗಲಾಟೆಯಿಂದಾಗಿ ಜನರು ಗುಂಪುಗೂಡಿದ್ದಾರೆ. ಯುವಕರನ್ನು ಹೊರ ಕರೆದೊಯ್ದ ಪೊಲೀಸರು, ಗುಂಪನ್ನು ಚದುರಿಸಲು ಲಾಠ ಪ್ರಹಾರ ನಡೆಸಿದ್ದಾರೆ ಎಂದು ವರದಿಯಾಗಿದೆ.