ಕಲಬುರಗಿ | ಒಳಮೀಸಲಾತಿ ವೈಜ್ಞಾನಿಕ ಸಮೀಕ್ಷೆ ತ್ವರಿತ ಮುಗಿಸಿ : ಕೆ.ನೀಲಾ

Date:

Advertisements

ಒಳಮೀಸಲಾತಿಗೆ ಅಗತ್ಯವಾದ ವೈಜ್ಞಾನಿಕ ಸಮೀಕ್ಷೆಯನ್ನು ನಿಗದಿತ ಗಡುವಿನಲ್ಲಿ ಪೂರ್ಣಗೊಳಿಸಬೇಕು ಮತ್ತು ಅಲ್ಲಿಯವರೆಗೆ ಪರಿಶಿಷ್ಟ ಜಾತಿಗಳಿಗೆ ಅನ್ಯಾಯವಾಗದಂತೆ ನೇಮಕಾತಿಗಳನ್ನು ತಡೆಹಿಡಿಯಬೇಕೆಂದು ಸಿಪಿಐ(ಎಂ) ಕಾರ್ಯದರ್ಶಿ ಮಂಡಳಿ ಸದಸ್ಯೆ ಮತ್ತು ಕಲಬುರಗಿ ಜಿಲ್ಲಾ ಕಾರ್ಯದರ್ಶಿ ಕೆ.ನೀಲಾ ಎಂದು ಆಗ್ರಹಿಸಿದ್ದಾರೆ.

ʼಪರಿಶಿಷ್ಟ ಜಾತಿಗಳ ವೈಜ್ಞಾನಿಕ ವರ್ಗೀಕರಣಕ್ಕೆ ಹೊಸ ಸಮೀಕ್ಷೆ ನಡೆಸಿ ದತ್ತಾಂಶ ಸಂಗ್ರಹಿಸಲು ಮಾಡಿರುವ ಶಿಫಾರಸ್ಸು ಮುಂದಿನ ದಿನಗಳಲ್ಲಿ ಒಳಮೀಸಲಾತಿಯ ವಿವಿಧ ಪ್ರಶ್ನೆಗಳ ಮೇಲೆ ಕೋರ್ಟ್‌ ಮೆಟ್ಟಿಲೇರುವುದನ್ನು ತಡೆಗಟ್ಟಲು ಅಗತ್ಯವಾಗಿದೆ. ಸುಪ್ರೀಂ ಕೋರ್ಟಿನ ತೀರ್ಪು ಬಹಳ ಮುಖ್ಯವಾಗಿ ಈ ಅಂಶವನ್ನು ಆಧರಿಸಿದೆ. ಆದ್ದರಿಂದ ಆಯೋಗವು ಅಭಿಪ್ರಾಯಪಟ್ಟಿರುವ ಹಾಗೆ ಆಧುನಿಕ ಸಾಧನಗಳನ್ನು ಬಳಸಿ, ಸರ್ಕಾರವು ನಿಗದಿಪಡಿಸಿದ 60 ದಿನಗಳೊಳಗೆ, ಸಮೀಕ್ಷೆ ಕಾರ್ಯವನ್ನು ಪೂರ್ಣಗೊಳಿಸಬೇಕಾಗಿದೆʼ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ʼಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಯ ಒಳ ಮೀಸಲಾತಿಗೆ ಸಂಬಂಧಿಸಿ ನಾಗಮೋಹನ ದಾಸ್‌ ಆಯೋಗವು ಮಧ್ಯಂತರ ವರದಿಯನ್ನು ನೀಡಿದೆ. ಸಮಿತಿಯು ಪ್ರಧಾನವಾಗಿ ನಾಲ್ಕು ಶಿಫಾರಸ್ಸುಗಳನ್ನು ನೀಡಿದೆ. ಈ ಶಿಫಾರಸ್ಸುಗಳನ್ನು ರಾಜ್ಯ ಸಚಿವ ಸಂಪುಟವು ಅಂಗೀಕರಿಸಿದೆ. ಆಯೋಗವು ಶಿಫಾರಸ್ಸು ಮಾಡಿರುವ ಹಾಗೇ ಮುಂದಿನ ನೇಮಕಾತಿಗಳಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಅನ್ಯಾಯವಾಗದ ಹಾಗೆ ಸರ್ಕಾರ ಸೂಕ್ತ ಕ್ರಮಕೈಗೊಳ್ಳಬೇಕು. ಅದಕ್ಕಾಗಿ ಎರಡು ತಿಂಗಳ ಅವಧಿಗೆ ಪರಿಶಿಷ್ಟ ಜಾತಿಗಳ ಮೀಸಲು ನೇಮಕಾತಿಯನ್ನು ಮುಂದೂಡುವುದು ಅಗತ್ಯವಾಗಿದೆʼ ಎಂದು ಅಭಿಪ್ರಾಯಪಟ್ಟರು.

Advertisements

ʼಒಳ ಮೀಸಲಾತಿ ವಿಚಾರವು ಪ್ರಮುಖ ಹಾಗೂ ಅತ್ಯಂತ ಸಂಕೀರ್ಣವಾದ ಪ್ರಶ್ನೆಯಾಗಿದೆ. ಒಮ್ಮೆ ಜಾರಿಗೊಳಿಸಿದ ನಂತರ, ಸೂಕ್ತ ದತ್ತಾಂಶಗಳ ಕೊರತೆ ಅಥವಾ ಅವೈಜ್ಞಾನಿಕ ಸಮೀಕ್ಷೆ ಇತ್ಯಾದಿ ಕಾರಣಗಳಿಗಾಗಿ ಕೋರ್ಟಿನಲ್ಲಿ ನಕಾರಾತ್ಮಕ ಪರಿಣಾಮ ಉಂಟಾಗದಂತೆ ನೋಡಿಕೊಳ್ಳುವುದು ಅಗತ್ಯವಾಗಿದೆ. ಎರಡು ತಿಂಗಳ ಸಮಯದಲ್ಲಿ, ಒಳ ಮೀಸಲಾತಿ ತೀರ್ಮಾನವು ಯಾವುದೇ ಕಾನೂನಿನ ತೊಡಕುಗಳಿಗೆ ಸಿಕ್ಕಿ ತೊಳಲಾಡದಂತೆ ಮಾಡುವ ದೃಷ್ಟಿಯಿಂದ, ವೈಜ್ಞಾನಿಕ ಸಮೀಕ್ಷೆ ಮೂಲಕ ದತ್ತಾಂಶ ಸಂಗ್ರಹ ಮಾಡಲು ಎಲ್ಲ ಶಕ್ತಿಗಳು ಸಹಕಾರ ನೀಡಬೇಕುʼ ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X