ಕಲಬುರಗಿ | ಕಾಂಗ್ರೆಸ್ ಸಾಮಾಜಿಕ‌ ನ್ಯಾಯದ ಪರವಾಗಿದೆ: ಸಚಿವ ಪ್ರಿಯಾಂಕ್ ಖರ್ಗೆ

Date:

Advertisements

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲ ಸಾಮಾಜಿಕ ಆರ್ಥಿಕ ಹಾಗೂ ಸಾಮಾಜಿಕ ನ್ಯಾಯವನ್ನು ಸಮಾಜದ‌ ಕಟ್ಟಕಡೆಯ ವ್ಯಕ್ತಿಗೆ ತಲುಪಿಸಿದ್ದೇವೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಕಲಬುರಗಿ ನಗರದ ಪೂಜ್ಯ ಬಸವರಾಜಪ್ಪ ಅಪ್ಪಾ ಸ್ಮರಣಾರ್ಥ ಭವನದಲ್ಲಿ ನಡೆದ 935 ಪಾಲಿಕೆಯ ಪೌರಕಾರ್ಮಿಕರ ಗುತ್ತಿಗೆ ಪದ್ಧತಿಯನ್ನು ರದ್ದುಪಡಿಸಿ ಪಾಲಿಕೆಯಿಂದ ನೇರ ವೇತನ ಪಾವತಿ ಆದೇಶ ಪತ್ರ ವಿತರಣೆ, ಗ್ರಾಮ ಆಡಳಿತ ಅಧಿಕಾರಿಗಳಿಗೆ ನೇಮಕಾತಿ ಪತ್ರ ಹಾಗೂ ಕ್ರೋಮ್ ಬುಕ್ ವಿತರಣೆ, ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸಚಿವರು ಸಾಂಕೇತಿಕವಾಗಿ ನೇಮಕಾತಿ ಪತ್ರ ವಿತರಿಸಿದರು. ಜೊತೆಗೆ ಹೊಲಿಗೆ ಯಂತ್ರ ಹಾಗೂ ತ್ರಿಚಕ್ರ ವಾಹನಗಳ ವಿತರಣೆ ಮಾಡಿದರು.

Advertisements
WhatsApp Image 2025 06 24 at 6.22.47 PM

“ಕಾಂಗ್ರೆಸ್ ಪಕ್ಷದ ಸಿದ್ದಾಂತ ಹಾಗೂ ಸರ್ಕಾರ ಬದ್ಧತೆಯಿಂದಾಗಿ ನಾವು ಇಂದು ನಿಮಗೆಲ್ಲ ನೇಮಕಾತಿ ಆದೇಶ ವಿತರಿಸಿ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ. ಇಲ್ಲಿಂದ ನೀವೆಲ್ಲ ಮಹಾನಗರ ಪಾಲಿಕೆಯ ನೌಕರರಾಗಿರುತ್ತೀರಿ.‌ ಇದು ಅತ್ಯಂತ ಸಂತೋಷದ ಕ್ಷಣವಾಗಿದೆ” ಎಂದು ಸಚಿವರು ಹೇಳಿದರು.

“ಪೌರ ಕಾರ್ಮಿಕರು ಇದ್ದರೆ ನಗರವೆಲ್ಲ ಸ್ವಚ್ಛತೆಯಿಂದ ಇರಲು ಸಾಧ್ಯವಾಗುತ್ತದೆ. ನಿಮ್ಮೆಲ್ಲ ಕಷ್ಟಗಳ ನಡುವೆ ನಗರವನ್ನು ಸ್ವಚ್ಛವಾಗಿಡಲು ಕೆಲಸ ಮಾಡುತ್ತಿದ್ದೀರಿ. ನಿಮಗೆಲ್ಲ ಧನ್ಯವಾದಗಳು” ಎಂದು ಕೊಂಡಾಡಿದ ಸಚಿವರು, “64 ಗ್ರಾಮ ಸೇವಕರ ನೇಮಕಾತಿ ಮಾಡಿ ಗ್ರಾಮ ಸೇವಕರಿಗೆ ತಂತ್ರಾಂಶ ದಾಖಲಿಸಲು ಅನುಕೂಲವಾಗಲೆಂದು 154 ಕ್ರೊಮ್ ಬುಕ್‌ ವಿತರಣೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಇದೇ ಮೊದಲಬಾರಿಗೆ ಇಂತಹ ಸೌಲಭ್ಯ ಒದಗಿಸಲಾಗಿದೆ” ಎಂದರು.

ಪೌರ ಕಾರ್ಮಿಕರಿಗೆ ಭವನ ನಿರ್ಮಾಣ ಮಾಡುವಂತೆ ಇದಕ್ಕೂ ಮುನ್ನ ಮಾತನಾಡಿದ್ದ ವಿಧಾನ ಪರಿಷತ್ ಸದಸ್ಯ ಕಮಕನೂರು ಮಾಡಿದ ಮನವಿಗೆ ಸ್ಪಂದಿಸಿದ ಸಚಿವರು, ನಗರದಲ್ಲಿ ಸಿಎ ಸೈಟ್ ಒದಗಿಸಿದರೆ ತಾವು ಅನುದಾನ ನೀಡುವುದಾಗಿ ಎಂದು ಘೋಷಿಸಿದ ಪ್ರಿಯಾಂಕ್ ಖರ್ಗೆ, ಶಾಸಕರು ಹಾಗೂ ಸಂಸದರು ಕೂಡಾ ಅನುದಾನ ಒದಗಿಸಲಿ ಎಂದು ಮನವಿ ಮಾಡಿದರು.

ಕೇಂದ್ರ ಸರ್ಕಾರ ಕಲಬುರಗಿಯನ್ನು ಸ್ಮಾರ್ಟ್ ಸಿಟಿ ಮಾಡಲು ನಿರಾಕರಿಸಿತು. ಆದರೆ ರಾಜ್ಯ ಸರಕಾರ ಕಲಬುರಗಿಯನ್ನು ಮುಂದಿನ 25 ವರ್ಷಕ್ಕೆ ಹೇಗಿರಬೇಕೋ ಹಾಗೆ ಸುಂದರ ನಗರವನ್ನಾಗಿ ಮಾಡಲು IIHS ( Indian Institute for Human Settlements) ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಂಡು ಈಗಾಗಲೇ ನೀಲನಕ್ಷೆ ತಯಾರಿಸಲಾಗಿದ್ದು. ಮುಂದಿನ ಮೂರು ವರ್ಷದಲ್ಲಿ ನವ ಕಲಬುರಗಿ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು.

ಇದರ ಜೊತೆಗೆ 23 ಸರ್ಕಲ್‌ಗಳ ಮರು ನಿರ್ಮಾಣ, 31 ಉದ್ಯಾನವನ ಅಭಿವೃದ್ದಿ ಹಾಗೂ 4 ಕೆರೆಗಳನ್ನು ಅಭಿವೃದ್ದಿಪಡಿಸಲಾಗುವುದು. ನಗರದ ಎಲ್ಲ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಲಾಗಿದ್ದು ಕಲಬುರಗಿಯಲ್ಲಿ ಬೇಕಾಗುವ ಅಗತ್ಯ ಮೂಲಭೂತ ಸೌಲಭ್ಯ ಸೇರಿದಂತೆ ಇತರೆ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಕ್ರಮವಹಿಸಲಾಗುತ್ತಿದೆ ಎಂದರು.

ನಗರದ ವಾಜಪೇಯಿ ಬಡಾವಣೆಯಲ್ಲಿ “ನೈಸ್” ( NICE- Nagavi Institute of Competitive Exams) ತರಬೇತಿ ಕೇಂದ್ರವನ್ನು ಸ್ಥಾಪಿಸಲಾಗುತ್ತಿದ್ದು ಮುಂದಿನ ಜುಲೈ ಕೊನೆಯ ವಾರದಲ್ಲಿ ಉದ್ಘಾಟನೆ ಮಾಡಲಾಗುವುದು. ಮೊದಲಿಗೆ 500 ಜನ ಐಎಎಸ್, ಕೆ ಎ ಎಸ್ ಸೇರಿದಂತೆ ಇತರೆ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುವ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುವುದು. ಮುಂದೆ 2000 ಅಭ್ಯರ್ಥಿಗಳಿಗೆ ತರಬೇತಿ‌ ನೀಡುವ ಗುರಿ ಹೊಂದಲಾಗಿದೆ ಎಂದರು.

ಬಿಜೆಪಿ ನಾಯಕರು ನನ್ನನ್ನು ಟೀಕಿಸಲು ಕಲಬುರಗಿಗೆ ನಾಲ್ಕು ಸಲ ಬಂದಿದ್ದಾರೆ. ನಮ್ಮ ಸರ್ಕಾರದಿಂದ ಆಗಬೇಕಾದ ಅಭಿವೃದ್ದಿ ಕೆಲಸಗಳ ಬಗ್ಗೆ ಅವರು ಚರ್ಚಿಸುವ ಬದಲು ನನ್ನ ಮೇಲೆ ವೈಯಕ್ತಿಕ ಟೀಕೆ ಮಾಡುತ್ತಿದ್ದಾರೆ. ತಮ್ಮ ಉದ್ದೇಶಿತ ಅಮೇರಿಕಾ ಪ್ರವಾಸಕ್ಕೆ ಕೇಂದ್ರ ಅನುಮತಿ ನಿರಾಕರಿಸಿದ ವಿಚಾರವನ್ನು ಪ್ರಸ್ತಾಪಿಸಿದ ಸಚಿವರು, ಕೇಂದ್ರ ವೈಯಕ್ತಿಕವಾಗಿ ತಮಗೆ ಅವಕಾಶ ನಿರಾಕರಿಸಿಲ್ಲ, ರಾಜ್ಯದ ಸಚಿವರಿಗೆ ನಿರಾಕರಿಸಿದ್ದಾರೆ. ಇದರಿಂದ ರಾಜ್ಯಕ್ಕೆ ನಿರೀಕ್ಷಿತ ಬಂಡವಾಳ ಬರುವುದು ನಿಂತುಹೋಗಿದೆ. ಬಿಜೆಪಿವರಿಗೆ ನನ್ನ ಮೇಲೆ ಯಾಕೋ ಪ್ರೀತಿ ಜಾಸ್ತಿಯಾಗಿದೆ ಅದಕ್ಕಾಗಿ ಹೀಗೆ ಮಾಡಿರಬಹುದು ಎಂದರು.

ಎಂ ಎಲ್ ಸಿ ತಿಪ್ಪಣ್ಣಪ್ಪ ಕಮಕನೂರು ಮಾತನಾಡಿ, “ಜಿಲ್ಲಾ ಉಸ್ತುವಾರಿ ಸಚಿವರ ವಿಶೇಷ ಕಾಳಜಿಯಿಂದಾಗಿ ಪೌರ ಕಾರ್ಮಿಕರು ಗುತ್ತಿಗೆ ಪದ್ದತಿಯಿಂದ ಪಾಲಿಕೆಯ ನೌಕರರಂತೆ ನೇರ ನೇಮಕಾತಿ ಹೊಂದಿ ಸಂಬಳ ತೆಗೆದುಕೊಳ್ಳುತ್ತಾರೆ” ಎಂದರು.

ಕಲಬುರಗಿ ನಗರದಲ್ಲಿ ಪೌರಕಾರ್ಮಿಕರಿಗಾಗಿ ಭವನ ನಿರ್ಮಾಣಕ್ಕಾಗಿ ಅಗತ್ಯ ಅನುದಾನ ಒದಗಿಸುವಂತೆ ಸಚಿವರಿಗೆ ಒತ್ತಾಯಿಸಿದ ಕಮಕನೂರು ಅವರು ಎಂ ಪಿ ರಾಧಾಕೃಷ್ಣ ದೊಡ್ಡಮನಿ ಅವರು ಕಬ್ಬಲಿಗ ಸಮಾಜವನ್ನು ಎಸ್ ಟಿ ಪಟ್ಟಿಗೆ ಸೇರಿಸುವಂತೆ ಕೇಂದ್ರವನ್ನು ಸಂಸತ್ತಿನಲ್ಲಿ ಒತ್ತಾಯಿಸುವಂತೆ ಮನವಿ ಮಾಡಿದರು.

ಇದನ್ನು ಓದಿದ್ದೀರಾ? ಮಂಗಳೂರು | ವಿದ್ಯಾರ್ಥಿಗಳಿಗೆ ತುಳು ನಾಟಕದ ಅಭಿರುಚಿ ಮೂಡಿಸುವುದು ಅಗತ್ಯ : ನಿರ್ದೇಶಕ ತಮ್ಮ ಲಕ್ಷ್ಮಣ

ವೇದಿಕೆಯ ಮೇಲೆ ಪೂಜ್ಯ ಮಹಾಪೌರ ಯಲ್ಲಪ್ಪ ನಾಯಕೋಡಿ, ಲೋಕಸಭಾ ಸದಸ್ಯರಾದ ರಾಧಾಕೃಷ್ಣ ದೊಡ್ಡಮನಿ, ಶಾಸಕರಾದ ಅಲ್ಲಮಪ್ರಭು ಪಾಟೀಲ, ಕನೀಝ್ ಫಾತಿಮಾ, ತಿಪ್ಪಣ್ಣಪ್ಪ ಕಮಕನೂರು, ಬಾಬುರಾವ್ ಚಿಂಚನಸೂರು, ಕುಡಾ ಅಧ್ಯಕ್ಷ ಮಜರ್ ಆಲಂ‌ಖಾನ್, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಜಿಪಂ ಸಿಇಒ ಭಂವರ್ ಸಿಂಗ್ ಮೀನಾ, ಮಹಾನಗರ ಪಾಲಿಕೆ ಕಮಿಷನರ್ ಅವಿನಾಶ್ ಶಿಂಧೆ, ಸಚಿನ್ ಶಿರವಾಳ ಸೇರಿದಂತೆ ಹಲವರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X