ಕಲಬುರಗಿ | ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಶವ ಬಾವಿಗೆ ಎಸೆದಿದ್ದ ಅಪರಾಧಿಗೆ ಗಲ್ಲು ಶಿಕ್ಷೆ

Date:

Advertisements

ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ಶವವನ್ನು ಬಾವಿಗೆ ಎಸೆದಿದ್ದ ಅಪರಾಧಿಯೋರ್ವನಿಗೆ ಕಲಬುರಗಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ (ವಿಶೇಷ ಪೋಕ್ಸೊ) ನ್ಯಾಯಾಲಯವು ಗಲ್ಲು ಶಿಕ್ಷೆ ಹಾಗೂ ₹1 ಲಕ್ಷ ದಂಡ ವಿಧಿಸಿ ತೀರ್ಪು ನೀಡಿದೆ. ಆಳಂದ ತಾಲೂಕಿನ ದೇವಂತಗಿ ಗ್ರಾಮದ ಗುಂಡೇರಾವ ಚೋಪಡೆ (28) ಎಂಬಾತ ಗಲ್ಲು ಶಿಕ್ಷೆಗೊಳಗಾದ ಅಪರಾಧಿ.

2023ರ ಜುಲೈನಲ್ಲಿ ಪುಸ್ತಕ ತರಲು ನಡೆದುಕೊಂಡು ಹೋಗುತ್ತಿದ್ದ 11 ವರ್ಷದ ಬಾಲಕಿಯನ್ನು ಕೃಷಿ ಕೆಲಸ ಮಾಡುತ್ತಿದ್ದ ಗುಂಡೇರಾವ ಬಲವಂತವಾಗಿ ಕಬ್ಬಿನ ಗದ್ದೆಗೆ ಎಳೆದೊಯ್ದು ಅತ್ಯಾಚಾರ ಎಸಗಿದ್ದ. ನಂತರ ಉಸಿರುಗಟ್ಟಿಸಿ ಸಾಯಿಸಿ ಶವವನ್ನು ಬಾವಿಗೆ ಎಸೆದಿದ್ದ. ಈ ಕುರಿತು ಆಳಂದ ತಾಲೂಕಿನ ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ನಿಂಬರ್ಗಾ ಠಾಣೆ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಇದೀಗ ಘನ ನ್ಯಾಯಾಲಯ ಅಪರಾಧಿಗೆ ಪೋಕ್ಸೊ ಕಾಯ್ದೆಯಡಿ ಗಲ್ಲು ಶಿಕ್ಷೆ ಹಾಗೂ ₹1 ಲಕ್ಷ ದಂಡ ವಿಧಿಸಿದೆ. ಕಾನೂನು ಪ್ರಾಧಿಕಾರದಿಂದ ಮೃತ ಬಾಲಕಿಯ ತಾಯಿಗೆ ₹4 ಲಕ್ಷ ಪರಿಹಾರ ನೀಡಬೇಕು ಎಂದು ಆದೇಶ ದಲ್ಲಿ ತಿಳಿಸಿದೆ. ಪೋಕ್ಸೊ ಪ್ರಕರಣವೊಂದರಲ್ಲಿ ಜಿಲ್ಲೆಯಲ್ಲಿ ಅಪರಾಧಿಗೆ ಗಲ್ಲು ಶಿಕ್ಷೆಯಾಗಿದ್ದು ಇದೇ ಮೊದಲ ಪ್ರಕರಣ ಎನ್ನಲಾಗಿದೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಶಾಂತವೀರ ಬಿ. ತುಪ್ಪದ ವಾದ ಮಂಡಿಸಿದ್ದರು.

Advertisements

ಇದನ್ನೂ ಓದಿ: ಕಲಬುರಗಿ | ಪಿಡಿಒ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X