ಕಲಬುರಗಿ | ಬೆಳೆ ಸಮೀಕ್ಷೆಗಾರರಿಗೆ ಸೇವಾ ಭದ್ರತೆ‌, ಜೀವವಿಮೆ ಒದಗಿಸುವಂತೆ ಆಗ್ರಹ

Date:

Advertisements

ಬೆಳೆ ಸಮೀಕ್ಷೆಗಾರರಿಗೆ ಸೇವಾ ಭದ್ರತೆ‌, ಜೀವವಿಮೆ ಮತ್ತು ಕಾಯಂಗೊಳಿಸುವಂತೆ ಆಗ್ರಹಿಸಿ ಬೆಳೆ ಸಮೀಕ್ಷೆಗಾರರು ಅಧಿಕಾರಿ ಮುಖಾಂತರ ಸೇಡಂ ಶಾಸಕ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲರಿಗೆ ಮನವಿ ಪತ್ರ ಸಲ್ಲಿಸಿದರು.

ಕಲಬುರಗಿ ಜಿಲ್ಲಾಧ್ಯಕ್ಷ ರಾಜು ಮೇತ್ರಿ ಮಾತನಾಡಿ, “ಸೇಡಂ ತಾಲೂಕಿನಲ್ಲಿ ನಾವು ಸುಮಾರು ನಾಲ್ಕೈದು ವರ್ಷಗಳಿಂದ ಬೆಳೆ ಸಮೀಕ್ಷೆಗಾರರಾಗಿ ಸೇವೆ ಸಲ್ಲಿಸುತ್ತ ಬಂದಿದ್ದೇವೆ. ನಾವು ಸೇವೆ ಸಲ್ಲಿಸುತ್ತಿರುವಾಗ ಹಾವು, ಚೇಳು ಸೇರಿದಂತೆ ಇತರೆ ವಿಷಪೂರಿತ ಕ್ರಿಮಿಗಳು ಹಾಗೂ ಕಾಡು ಹಂದಿ, ತೋಳಗಳ ದಾಳಿಯಿಂದ ಗಾಯಗೊಂಡಿದ್ದೇವೆ. ಹೆಜ್ಜೇನುಗಳ ದಾಳಿಗೆ ಒಳಪಟ್ಟಿದ್ದೇವೆ” ಎಂದು ಹೇಳಿದರು.

“ಈ ಹಿಂದೆ ಮಳಖೇಡ ಮತ್ತು ಕೋಡ್ಲಾದಲ್ಲಿ ಇಬ್ಬರು ಬೆಳೆ ಸಮೀಕ್ಷದಾರರಿಗೆ ಹಾವು ಕಚ್ಚಿದ್ದು, ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆ. ಆದರೂ ಕೂಡ ಈವರೆಗೆ ಯಾವುದೇ ರೀತಿಯ ಪರಿಹಾರ ನೀಡಿಲ್ಲ. ನಾವು ಜೀವದ ಆಸೆ ಬಿಟ್ಟು ಶ್ರದ್ದೆಯಿಂದ ಸೇವೆ ಮಾಡುತ್ತಿದ್ದೇವೆ. ಸಮೀಕ್ಷ ಮಾಡುವಾಗ ಕೆಲವು ರೈತರು ನೀವು ಯಾರೆಂದು ಪ್ರಶ್ನೆ ಮಾಡುತ್ತಾರೆ. ಕೆಲವೊಮ್ಮೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ” ಎಂದು ಆರೋಪಿಸಿದರು.

Advertisements

“ದಿನಗೂಲಿ ಆಧಾರದ ಮೇಲೆ ನಮಗೆ ಪ್ರತಿದಿನವೂ ಕೆಲಸ ಒದಗಿದಬೇಕು. ಎಲ್ಲ ಬೆಳೆ ಸಮೀಕ್ಷದಾರರಿಗೆ ರೇನ್ ಕೋಟ್ ನೀಡಬೇಕು. ಈ ಹಿಂದೆ ನಾವು ಸಂಬಂಧಪಟ್ಟ ಎಲ್ಲ ಅಧಿಕಾರಿಗಳಿಗೂ ಈ ಕುರಿತು ಮಾಹಿತಿ ತಿಳಿಸಿದ್ದೇವೆ. ಆದರೂ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ. ಹಾಗಾಗಿ ತಾವಾದರೂ ನಮ್ಮ ಬಗ್ಗೆ ಗಮನ ಹರಿಸಬೇಕು” ಎಂದು ಮನವಿ ಮಾಡಿದರು.

“ನಮಗೆ ಒಂದು ವರ್ಷದಲ್ಲಿ ಮೂರು ಬಾರಿ ಮಾತ್ರ ಕೆಲಸ ನೀಡಲಾಗುತ್ತದೆ ಕಾರಣ ನಮಗೆ ಖಾಯಂ ಕೆಲಸ ಕೊಡಿಸಬೇಕು ಇಲ್ಲವಾದಲ್ಲಿ ಪ್ರತಿ ತಿಂಗಳು ಐದ ರಿಂದ ಹತ್ತು ಸಾವಿರ ಸಹಾಯ ಧನ ನೀಡಬೇಕು.ಒಬ್ಬ ಪಿ.ಆರ್‌ಗೆ ಹತ್ತುಲಕ್ಷ ಜೀವವಿಮೆ ನೀಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಅಂಬೇಡ್ಕರ್‌ ಭವನ ನಿರ್ಮಾಣದ ನಿವೇಶನ ಅತಿಕ್ರಮಣ; ಆರೋಪ

ನಾಗರಾಜು ಮದಕಲ್, ಮೊಗಲಪ್ಪ ರಾಘಪೂರ, ಬಸಪ್ಪ ಮಲ್ಕಪಲ್ಲಿ, ಯಲೇಶ ದುಗನೂರ, ರವಿಕುಮಾರ ಕಾಚೂರ್, ನರೇಶ ಕುರುಕುಂಟಾ, ನರಸಿಂಗಹ ಗುಂಡೆಪಲ್ಲಿ, ರಾಮಕೃಷ್ಣ ಸೀಲಾರಕೋಟ್, ರವಿಕುಮಾರ ಪಾಕಲ್, ನಿಂಗಪ್ಪ ಹಂದರಕಿ, ನಾಗಪ್ಪ ಹಂದರಕಿ ಇದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X