ಕಲಬುರಗಿ | ದಲಿತರಿಗೆ ಕ್ಷೌರ ಮಾಡಲು ನಕಾರ; ಕ್ಷೌರಿಕನ ವಿರುದ್ಧ ಜಾತಿ ದೌರ್ಜನ್ಯ ಪ್ರಕರಣ ದಾಖಲು

Date:

Advertisements

ದಲಿತಸಮುದಾಯದ ವಿದ್ಯಾರ್ಥಿಗಳಿಗೆ ಕ್ಷೌರ ಮಾಡಲು ನಿರಾಕರಿಸಿ, ಜಾತಿ ತಾರತಮ್ಯ ಮತ್ತು ದೌರ್ಜನ್ಯ ಎಸಗಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಿಣ್ಣಿ ಸುಲ್ತಾನ್ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕ್ಷೌರಿಕನ ವಿರುದ್ಧ ಪ್ರಕರಣ ದಾಖಲಾಗಿದೆ.

ಜೂನ್ 27ರಂದು, ಗ್ರಾಮದ ಶಾಲಾ ಮಕ್ಕಳು ಕ್ಷೌರ ಮಾಡಿಸಿಕೊಳ್ಳಲು ಕ್ಷೌರದ ಅಂಗಡಿಗೆ ಹೋಗಿದ್ದರು. ಈ ವೇಳೆ, ದಲಿತ ಮಕ್ಕಳಿಗೆ ಕ್ಷೌರ ಮಾಡಲು ಕ್ಷೌರಿಕ ನಿರಾಕರಿಸಿದ್ದು, ‘ನೀವು ಏನು ಬೇಕಾದರು ಮಾಡಿಕೊಳ್ಳಿ. ನಾನು ದಲಿತರಿಗೆ ಕ್ಷೌರ ಮಾಡುವುದಿಲ್ಲ’ ಎಂದು ಜಾತಿ ದರ್ಪ ಮೆರೆದಿರುವುದಾಗಿ ಆರೋಪಿಸಲಾಗಿದೆ.

ಕ್ಷೌರಿಕನನ್ನು ಕ್ಷೌರ ಮಾಡುವಂತೆ ಮನವೊಲಿಸರು ದಲಿತ ಮುಖಂಡರು ಪ್ರಯತ್ನಿಸಿದ್ದಾರೆ. “ಮಕ್ಕಳಿಗೆ ಕ್ಷೌರ ಮಾಡಿಸಿಕೊಂಡು ಬರುವಂತೆ ಶಿಕ್ಷಕರು ಸೂಚಿಸಿದ್ದಾರೆ. ಅದಕ್ಕಾಗಿ, ಮಕ್ಕಳು ಇಲ್ಲಿಗೆ ಬಂದಿದ್ದಾರೆ. ಮಕ್ಕಳಿಗೆ ಯಾಕೆ ಕ್ಷೌರ ಮಾಡಲ್ಲ. ಮಕ್ಕಳಿಗೆ ಕ್ಷೌರ ಮಾಡಿ” ಎಂದು ವಿನಂತಿಸಿದ್ದಾರೆ.

Advertisements

ಆದರೆ, ಕ್ಷೌರಿಕ, “ನಮ್ಮ ಹಿರಿಯರು ಹೊಲೆಯ-ಮಾದಿಗರಿಗೆ ಕ್ಷೌರ ಮಾಡಿಲ್ಲ. ನಾವೂ ಮಾಡುವುದಿಲ್ಲ” ಎಂದು ಜಾತಿಯ ಅಹಂನಲ್ಲಿ ಮಾತನಾಡಿದ್ದಾರೆ.

ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಗ್ರಾಮದ ದಲಿತ ಯುವಕ ಮಲ್ಲಿಕಾರ್ಜುನ್ ಶೃಂಗೇರಿ, “ಗ್ರಾಮದಲ್ಲಿ ಹಲವು ವರ್ಷಗಳಲ್ಲಿ ದಲಿತರಿಗೆ ಕ್ಷೌರ ಮಾಡಲು ಕ್ಷೌರಿಕರು ನಿರಾಕರಿಸುತ್ತಲೇ ಬಂದಿದ್ದಾರೆ. ದಲಿತರು ಕ್ಷೌರಕ್ಕಾಗಿಯೂ 10 ಕಿ.ಮೀ ದೂರದ ಆಳಂದ ಪಟ್ಟಣ ಅಥವಾ ತಡಕಲ್ ಗ್ರಾಮಕ್ಕೆ ತೆರಳಬೇಕಾಗಿದೆ. ಗ್ರಾಮದ ಪ್ರಬಲ ಜಾತಿಗರ ಪ್ರಭಾವದಿಂದ ದಲಿತರಿಗೆ ಕ್ಷೌರ ಮಾಡಲು ಕ್ಷೌರಿಕರು ನಿರಾಕರಿಸುತ್ತಿದ್ದಾರೆ. ಗ್ರಾಮದಲ್ಲಿ ಅಸ್ಪೃಶ್ಯತೆ ತಾಂಡವಾಡುತ್ತಿದೆ. ಆದರೂ, ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಘಟನೆ ಬಗ್ಗೆ ಮಾಹಿತಿ ಪಡೆದು ಗ್ರಾಮಕ್ಕೆ ಪೊಲೀಸರು ಮತ್ತು ಅಧಿಕಾರಿಗಳು ಭೇಟಿ ನೀಡಿದ್ದಾರೆ. ದಲಿತರಿಗೆ ಕ್ಷೌರ ಮಾಡುವಂತೆ ಕ್ಷೌರಿಕನಿಗೆ ಸೂಚಿಸಿದ್ದಾರೆ. ಆದರೂ, ಕ್ಷೌರಿಕ ನಿರಾಕರಿಸಿದ್ದು, ಪೊಲೀಸರು ಜಾತಿದೌರ್ಜನ್ಯ ಪ್ರಕರಣ ದಾಖಲಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಬಳಿಕ, ಕ್ಷೌರ ಮಾಡಲು ಕ್ಷೌರಿಕ ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ದಲಿತ ಸಮುದಾಯದ ಮುಖಂಡರೊಬ್ಬರು ಕ್ಷೌರಿಕನ ವಿರುದ್ದ ಜಾತಿ ತಾರತಮ್ಯ ಮತ್ತು ನಿಂದನೆ ದೂರು ದಾಖಲಿಸಿದ್ದಾರೆ. ಅವರ ದೂರಿನ ಆಧಾರದ ಮೇಲೆ ಆಳಂದ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X