ಕಲಬುರಗಿ | ದಲಿತರ ಓಣಿಗಿಲ್ಲ ನೀರಿನ ಭಾಗ್ಯ; ಅಧಿಕಾರಿ, ಜನಪ್ರತಿನಿಧಿಗಳ ನಿರ್ಲಕ್ಷ್ಯ

Date:

Advertisements

ಕಲಬುರಗಿ ಜಿಲ್ಲೆಯ ದಕ್ಷಿಣ ಕ್ಷೇತ್ರದ ಭೀಮಳ್ಳಿ ಗ್ರಾಮದ ದಲಿತ ಓಣಿಯಲ್ಲಿ ನೀರಿನ ಸೌಲಭ್ಯ ಸಿಕ್ಕಿಲ್ಲ. ಹಿಂದಿನ ಕಾಲಘಟ್ಟದಂತೆ ಪ್ರಸ್ತುತ ದಿನಗಳಲ್ಲಿಯೂ ಕೂಡ ಬಾವಿ ನೀರು ಸೇದುವ ಅನಿವಾರ್ಯತೆ ಎದುರಾಗಿದೆ.

ದಲಿತ(ಮಾದಿಗ ಸಮುದಾಯದ) ಕುಟುಂಬಗಳು ವಾಸವಾಗಿರುವ ಓಣಿಯಲ್ಲಿ ಸುಮಾರು ವರ್ಷಗಳಿಂದ ಕುಡಿಯಲು, ಬಳಸಲು ನೀರಿಲ್ಲ. ಸರ್ಕಾರದಿಂದ ನೀರಿನ ಟ್ಯಾಂಕ್, ಜಲಜೀವನ ಮಷೀನ್ ಮನೆಗೊಂದು ನಳ ಮಾಡಿದ್ದಾರೆ. ಅವುಗಳು ತೋರಿಕೆ ರೂಪದಲ್ಲಿವೆಯೇ ವಿನಃ ಒಂದು ದಿನವೂ ಅದರಲ್ಲಿ ನೀರು ಬಂದಿಲ್ಲ. ಟ್ಯಾಂಕ್‌ಗಳಿಂಗೆ ಪೈಪ್‌ಲೈನ್ ವ್ಯವಸ್ಥೆ ಕೂಡ ಆಗಿಲ್ಲ. ಸುಮನೆ ಕಟ್ಟಿ ಬಿಟ್ಟಿದ್ದಾರೆ ಅಷ್ಟೆ!

“ಬಳಸುವುದಕ್ಕೆ, ಕುಡಿಯುವುದಕ್ಕೆ ನಾವು ಪ್ರತಿನಿತ್ಯ ಬಾವಿಯಿಂದ ನೀರು ಸೇದಿ ಹೊತ್ತು ತರುವಂತಹ ಅನಿವಾರ್ಯತೆ ಎದುರಾಗಿದೆ. ತೆರೆದ ಬಾವಿಯಿಲ್ಲಿ ಕಸಕಡ್ಡಿ, ಮಳೆ ನೀರು ಸೇರಿಕೊಳ್ಳುತ್ತಿದೆ. ಇದರಿಂದ ಬಾವಿಯ ನೀರು ಕಲುಸಿತಕೊಂಡು ಅದೇ ಬಾವಿ ನೀರು ಸೇವಿಸಿದರೆ ರೋಗ ರುಜಿನಗಳು ಹರಡಬಹುದೆನ್ನುವ ಆತಂಕ ಮನೆಮಾಡಿದೆ. ಆದರೆ ದಲಿತರ ಓಣಿ ಅಂದ್ರೆ ಜನಪ್ರತಿನಿಧಿಗಳು, ಅಧಿಕಾರಿಗಳು ನಿರ್ಲಕ್ಷಿಸುತ್ತಾರೆ” ಎಂದು ಭೀಮಳ್ಳಿ ಗ್ರಾಮಸ್ಥರು ಆರೋಪಿದರು.

Advertisements

ಸೇದುವ ಬಾವಿ 1

ಶ್ರೀದೇವಿ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಎಸ್‌ಸಿ ಜನರ ಬಗ್ಗೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ನಿರ್ಲಕ್ಷ್ಯವಾಗಿದೆ. ನಾವು ಸತ್ತಿದ್ದೇವಾ ಬದುಕಿದ್ದೇವಾ ಎಂದೂ ಕೂಡ ನೋಡುವುದಿಲ್ಲ. ನೀರಿಗಾಗಿ ಬೀದಿ ಬೀದಿ ಅಲೆದು ನೀರು ತರುವ ಪರಿಸ್ಥಿತಿ ಇದೆ. ಅವರು ನೀರು ಕೊಡಲಿಲ್ಲ ಅಂದರೆ ಬಾವಿಯಿಂದ ನೀರು ಸೇದಿ ತರುವಷ್ಟರಲ್ಲಿ ಕೆಲಸದ ಸಮಯ ಮೀರಿ ಹೋಗಿರುತ್ತೆ. ಕೆಲಸ ಬಿಟ್ಟು ಕೂತರೆ ನಮ್ಮ ಹೊಟ್ಟೆ ಬಟ್ಟೆ ಹೇಗೆ ನಡೆಯಬೇಕು” ಎಂದು ಅಧಿಕಾರಿಗಳ, ಜನಪ್ರತಿನಿಧಿಗಳ ವಿರುದ್ಧ ಕಿಡಿಕಾರಿದರು.

ಸುಗಲಬಾಯಿ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ನಮ್ಮ ಮಕ್ಕಳು, ಸೊಸೆಯಂದಿರು ದುಡಿಯಲು ಬಾಂಬೆ, ಪೂನಾ ಹೋಗಿದ್ದಾರೆ. ನಾವು ವಯಸ್ಸಾದವರು ಬಾವಿಯಿಂದ ಹೇಗೆ ನೀರು ಸೇದಿ ತರಬೇಕು. ಅವರಿವರ ಮಕ್ಕಳಿಗೆ ಕೈ ಕಾಲು ಬಿದ್ದು ಒಂದು ಕೊಡ ನೀರು ತಂದು ಕೊಡಿರೆಂದು ಬೇಡಿಕೊಳ್ಳಬೇಕು. ನಮ್ಮ ಓಣಿಗೆ ನೀರಿನ ಸೌಲಭ್ಯ ಕಲ್ಪಿಸಿಕೊಡಿ” ಎಂದು ಮನವಿ ಮಾಡಿದರು.

ಬಾವಿ ನೀರು

ದೂಳಮ್ಮ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ನೀರಿನ ಟ್ಯಾಂಕ್ ಮತ್ತು ಜಲಜೀವನ ಮಷೀನ್ ಮನೆಗೊಂದು ನಳ ಮಾಡಿದ್ದಾರೆ. ಆದರೆ ಅದರಲ್ಲಿ ನೀರು ಬರುವುದಿಲ್ಲ. ಪೈಪ್‌ಲೈನ್‌ ವ್ಯವಸ್ಥೆ ಕೂಡ ಸರಿಯಾಗಿ ಆಗಿಲ್ಲ. ನಾಮಕಾವಸ್ತೆಗೆ ನೀರಿನ ಟ್ಯಾಂಕ್ ಕಟ್ಟಿ ಬಿಟ್ಟಿದ್ದಾರೆ. ನಾವು ಬಾವಿ ಮುಂದೆ ಒಬ್ಬರ ಮೇಲೊಬ್ಬರು ಬಿದ್ದು, ನೀರು ಹೊತ್ತು ತರುವ ಪರಿಸ್ಥಿತಿ ಇದೆ. ಎರಡ್ಮೂರು ದಿನಗಳಿಂದ ಶೇಖರಣೆ ಮಾಡಿಟ್ಟ ನೀರನ್ನೇ ಬಳಸುತ್ತಿದ್ದೇವೆ. ನಿತ್ಯ ನೀರು ಸೇದಿ ತರಲು ಆಗುವುದಿಲ್ಲ. ನೀರು ಹೊತ್ತು ತರುವಷ್ಟರಲ್ಲಿ ಕೂಲಿ ಕೆಲಸದ ಸಮಯ ಮೀರಿ ಹೋಗಿರುತ್ತೆ. ಇದೇ ರೀತಿಯಾದರೆ ನಮ್ಮ ಸಾಲ ಸವದ ಹೇಗೆ ಕಟ್ಟಿಕೊಳ್ಳಬೇಕು” ಎಂದು ತಮ್ಮ ಅಳಲನ್ನು ತೋಡಿಕೊಂಡರು.

ಈ ಸುದ್ದಿ ಓದಿದ್ದೀರಾ? ದೇವದಾರಿಯಲ್ಲಿ ಗಣಿಗಾರಿಕೆಗಿಲ್ಲ ದಾರಿ; ಅನುಮತಿ ನಿರಾಕರಿಸಲು ಅರಣ್ಯ ಸಚಿವ ಖಂಡ್ರೆ ಸೂಚನೆ

ನಾಗಮ್ಮ ಗ್ರಾಮಸ್ಥರು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ನೀರಿನ ಸಮಸ್ಯೆ ತುಂಬಾ ಕಾಡುತ್ತಿದೆ. ನಾನು ವಯಸ್ಸಾದವಳು ನೀರು ಹೊತ್ತು ತರಲು ಆಗುವುದಿಲ್ಲ. ಯಾರಾದರೂ ನೀರು ತಂದುಕೊಟ್ಟರೆ ಮಾತ್ರ ನನಗೆ ನೀರು ಸಿಗುತ್ತದೆ. ನೀರು ಪ್ರತಿನಿತ್ಯ ಅತೀ ಮುಖ್ಯವಾಗಿ ಬೇಕು. ಅದರಿಂದ ನಮಗೆ ನೀರಿನ ಸವಲತ್ತು ಮಾಡಿಕೊಡಿ” ಎಂದು ಬೇಡಿಕೊಂಡರು.

ಗೀತಾ ಹೊಸಮನಿ
ಗೀತಾ ಹೊಸಮನಿ
+ posts

ಯಾದಗಿರಿ, ಕಲಬುರಗಿ ಜಿಲ್ಲಾ ಸಂಯೋಜಕರು, NCCಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ(NRAI ಫೈರಿಂಗ್ ವಿಭಾಗ) ವಿಜೇತೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಗೀತಾ ಹೊಸಮನಿ
ಗೀತಾ ಹೊಸಮನಿ
ಯಾದಗಿರಿ, ಕಲಬುರಗಿ ಜಿಲ್ಲಾ ಸಂಯೋಜಕರು, NCCಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ(NRAI ಫೈರಿಂಗ್ ವಿಭಾಗ) ವಿಜೇತೆ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X