ಕಲಬುರಗಿ | ವಾಗ್ಧರಿ ಗ್ರಾಮಕ್ಕೆ ಬಸ್ ಸೌಲಭ್ಯ ಕಲ್ಪಿಸಲು ಆಗ್ರಹಿಸಿ ಜಿಲ್ಲಾಡಳಿತಕ್ಕೆ ದಸಂಸ ಮನವಿ

Date:

Advertisements

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ವಾಗ್ಧರಿ ಗ್ರಾಮಕ್ಕೆ ಬಸ್ಸಿನ ಸಂಚಾರ ಕಲ್ಪಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಸಮಿತಿ ವತಿಯಿಂದ ವತಿಯಿಂದ ಕಲಬುರಗಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಮನವಿ ಪತ್ರ ಸಲ್ಲಿಸಿ ಜಿಲ್ಲಾ ಸಂಚಾಲಕ ಕಾಶಿನಾಥ ಶೆಳಗಿ ಮಾತನಾಡಿ, ಆಳಂದ ತಾಲೂಕಿನ ವಾಗ್ಧರಿ ಗ್ರಾಮದಲ್ಲಿ ಸುಮಾರು 30 ವರ್ಷಗಳಿಂದ ಸರಿಯಾದ ಬಸ್ಸಿನ ವ್ಯವಸ್ಥೆ ಇಲ್ಲ. ಸದರಿ ಊರಿನ ಗ್ರಾಮಸ್ಥರು, ಮಹಿಳರು ಮತ್ತು ವಿದ್ಯಾರ್ಥಿಗಳು ಕಲಬುರಗಿ ನಗರಕ್ಕೆ ಹೋಗಿ ಬರಲು ಬಹಳ ತೊಂದರೆ ಎದುರಿಸುತ್ತಿದ್ದಾರೆ ಎಂದು ತಮ್ಮ ಅಳಲನ್ನು ತೋಡಿಕೊಂಡರು.

ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಪ್ರತಿನಿತ್ಯ ಶಾಲಾ-ಕಾಲೇಜುಗಳಿಗಾಗಿ ಆಳಂದ ಮತ್ತು ಕಲಬುರಗಿ ಪಟ್ಟಣಕ್ಕೆ ಹೋಗುತ್ತಾರೆ. ಬಸ್ಸಿನ ಸೌಕರ್ಯವೇ ಇಲ್ಲ. ಊರಿನ ಜನರು ವಾಗ್ಧರಿಯಿಂದ ಕಮಲಾ ನಗರಕ್ಕೆ 5 ಕೀ.ಮೀ. ಕಾಲ್ನಡಿಗೆ ಮೂಲಕ ಹೋಗಿ, ಬಸ್ಸಿಗಾಗಿ ಕಾಯುವ ಪರಿಸ್ಥಿತಿ ಇದೆ ಎಂದು ತಿಳಿಸಿದರು.

Advertisements
ವಾಗ್ಧರಿ

ಬಸ್ಸಿನ ಸೌಕರ್ಯವಿಲ್ಲದಿರುವುದರಿಂದ ವಿದ್ಯಾರ್ಥಿಗಳಿಗೆ, ಮಹಿಳೆಯರಿಗೆ ಹಾಗೂ ಹಿರಿಯ ನಾಗರಿಕರಿಗೆ ಅನಾನುಕೂಲತೆ ಆಗುತ್ತಿದೆ. ಸಾಯಂಕಾಲವಾದರೆ ವಾಗ್ಧರಿಗೆ ಗ್ರಾಮಕ್ಕೆ ಹೋಗಬೇಕಾದರೆ ಜೀವ ಕೈಯಲ್ಲಿ ಹಿಡಿದುಕೊಂಡು ನಡೆದುಕೊಂಡು ಹೋಗುವ ಪರಿಸ್ಥಿತಿ ಇದೆ. ಹಾಗಾಗಿ, ವಾಗ್ಧರಿ ಗ್ರಾಮಕ್ಕೆ ಬಸ್ಸಿನ ಸೌಕರ್ಯ ಕಲ್ಪಿಸಬೇಕೆಂದು ಒತ್ತಾಯಿಸಿ, ಜಿಲ್ಲಾಡಳಿತಕ್ಕೆ ಮನವಿ ಪತ್ರ ಸಲ್ಲಿಸಲಾಯಿತು.

ಇದನ್ನು ಓದಿದ್ದೀರಾ? ಕೊಡಗು | ಪ್ರೇಯಸಿ ಪತಿಯ ಕೊಲೆಗೆ ಯತ್ನಿಸಿದ ಪೊಲೀಸ್ ಪೇದೆ!

ಒಂದು ವೇಳೆ ಮಾಡದೇ ಹೋದರೆ ಮುಂದೆ ದಿನಗಳಲ್ಲಿ ಕಚೇರಿಯ ಮುಂದೆ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸಂ. ಸಂಚಾಲಕರಾದ ದಿಲಿಪಕುಮಾರ ಕಿರಸವಾಳಗಿ, ಜಿಲ್ಲಾ ಸಂಚಾಲಕಿ ಅಶ್ವಿನಿ ಬಾರಿಗಿಡ, ನಗರ ಸಂಚಾಲಕರು ಗಣೇಶ ಕಾಂಬಳೆ, ಪರಶುರಾಮ , ಪ್ರಜ್ವಲ್, ಕೀರ್ತಿರಾಜ್ ಕೊಹಿನೂರ್, ಭೀಮರಾವ್ ವಿಬಿ, ಭರತ್ ಸೇರಿದಂತೆ ಗ್ರಾಮದ ಜನರು ಹಾಗು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

Download Eedina App Android / iOS

X