ಕಲಬುರಗಿ | ಬೆಳೆ ವಿಮೆ ಹಣ ಬಿಡುಗಡೆಗೆ ಆಗ್ರಹ; ಟಾಟಾ ಪವರ್ ಪರವಾನಿಗೆ ವಿರೋಧಿಸಿ ರೈತ ಸಂಘ ಪ್ರತಿಭಟನೆ

Date:

ಜಿಲ್ಲೆಯ ಸುಮಾರು 2.80 ಲಕ್ಷ ರೈತರಿಗೆ ಬಾಕಿ ಇರುವ ಅಂದಾಜು ₹300 ಕೋಟಿ ಬೆಳೆ ಕಟಾವು ವಿಮೆ ಹಣವನ್ನು ತಕ್ಷಣ ಬಿಡುಗಡೆ ಮಾಡಬೇಕು ಹಾಗೂ ವಿದ್ಯುತ್ ವಿತರಣಾ ಕ್ಷೇತ್ರದ ಖಾಸಗೀಕರಣಕ್ಕೆ ಅವಕಾಶ ನೀಡಬಾರದು ಎಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ ಬುಧವಾರ ಚಿಂಚೋಳಿ ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

- Advertisement -

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಕೆಪಿಆರ್‌ಎಸ್ ಜಿಲ್ಲಾ ಅಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ, ಕಳೆದ ವರ್ಷ ಅತಿವೃಷ್ಟಿಯಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಬೆಳೆದ ತೊಗರಿಗೆ ಸಮರ್ಪಕ ಬೆಂಬಲ ಬೆಲೆ ಸಿಗದ ಕಾರಣ ಆರ್ಥಿಕವಾಗಿ ಕಂಗೆಟ್ಟಿದ್ದಾರೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಮುಂಗಾರು ಬಿತ್ತನೆ ಆರಂಭವಾಗಿರುವ ಹಿನ್ನೆಲೆಯಲ್ಲಿ ರೈತರು ಬೀಜ ಮತ್ತು ರಸಗೊಬ್ಬರ ಖರೀದಿಸಲು ಹಣದ ಕೊರತೆಯಿಂದ ಪರದಾಡುತ್ತಿದ್ದಾರೆ. ಜಿಲ್ಲೆಯಾದ್ಯಂತ ರಸಗೊಬ್ಬರ ಕೊರತೆ ಕಂಡುಬರುತ್ತಿದ್ದು, ರೈತರು ಎಪಿಎಂಸಿ, ಟಿಎಪಿಸಿಎಂಎಸ್ ಹಾಗೂ ಸಹಕಾರ ಸಂಘಗಳ ಮುಂದೆ ದಿನಗಟ್ಟಲೆ ಸರತಿ ಸಾಲಿನಲ್ಲಿ ನಿಲ್ಲುವ ದುಸ್ಥಿತಿ ಎದುರಿಸುತ್ತಿದ್ದಾರೆ ಎಂದು ಹೇಳಿದರು.

ರಾಜ್ಯ ಸರ್ಕಾರದಿಂದ ಬಾಕಿ ಇರುವ ಬೆಳೆ ವಿಮೆ ಮೊತ್ತವನ್ನು ಶೀಘ್ರ ಬಿಡುಗಡೆ ಮಾಡಿದರೆ ರೈತರಿಗೆ ಬಿತ್ತನೆ ಕಾರ್ಯ ಕೈಗೊಳ್ಳಲು ನೆರವಾಗಲಿದೆ. ಹೀಗಾಗಿ ಯಾವುದೇ ವಿಳಂಬವಿಲ್ಲದೆ ವಿಮೆ ಹಣವನ್ನು ರೈತರ ಖಾತೆಗಳಿಗೆ ಜಮೆ ಮಾಡಬೇಕು ಎಂದು ಒತ್ತಾಯಿಸಿದರು.

Advertisements
Advertisements

ಇದೇ ವೇಳೆ ವಿದ್ಯುತ್ ವಿತರಣಾ ಕ್ಷೇತ್ರದಲ್ಲಿ ಟಾಟಾ ಪವರ್‌ಗೆ ಪರವಾನಿಗೆ ನೀಡುವ ಪ್ರಸ್ತಾವವನ್ನು ವಿರೋಧಿಸಿದ ರೈತ ಸಂಘದ ಮುಖಂಡರು, ಸರ್ಕಾರಿ ವಿದ್ಯುತ್ ಕಂಪನಿಗಳಿದ್ದರೂ ಖಾಸಗಿ ಕಂಪನಿಗಳಿಗೆ ಅವಕಾಶ ಕಲ್ಪಿಸುವುದು ರೈತರು ಹಾಗೂ ಗ್ರಾಮೀಣ ಗ್ರಾಹಕರ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಅಭಿಪ್ರಾಯಪಟ್ಟರು.

ಖಾಸಗೀಕರಣದಿಂದ ಯುವಕ-ಯುವತಿಯರ ಉದ್ಯೋಗಾವಕಾಶಗಳು ಮತ್ತು ಮೀಸಲಾತಿ ಸೌಲಭ್ಯಗಳಿಗೆ ಧಕ್ಕೆಯಾಗುವ ಸಾಧ್ಯತೆ ಇದೆ. ಅಲ್ಲದೆ ರೈತರಿಗೆ ದೊರೆಯುತ್ತಿರುವ ಉಚಿತ ವಿದ್ಯುತ್ ಸೇರಿದಂತೆ ವಿವಿಧ ಸೌಲಭ್ಯಗಳ ಮೇಲೂ ಪರಿಣಾಮ ಬೀರುವ ಆತಂಕವಿದೆ ಎಂದು ತಿಳಿಸಿದರು.

ಸರ್ಕಾರಿ ವಿದ್ಯುತ್ ಕಂಪನಿಗಳನ್ನು ಬಲಪಡಿಸಿ ಸಾರ್ವಜನಿಕ ಹಿತಾಸಕ್ತಿಯನ್ನು ಕಾಪಾಡಬೇಕು. ಟಾಟಾ ಪವರ್‌ಗೆ ವಿದ್ಯುತ್ ವಿತರಣಾ ಪರವಾನಿಗೆ ನೀಡುವ ಪ್ರಕ್ರಿಯೆಯನ್ನು ಕೈಬಿಟ್ಟು, ರೈತರು ಹಾಗೂ ಗ್ರಾಹಕರ ಹಿತಾಸಕ್ತಿಯನ್ನು ರಕ್ಷಿಸಬೇಕು ಎಂದು ಸರ್ಕಾರ ಮತ್ತು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ ಮನವಿ ಮಾಡಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಲೋಕಾಯುಕ್ತ ಬಲೆಗೆ ನಿವೃತ್ತ ಪಿಡಬ್ಲ್ಯೂಡಿ ಎಂಜಿನಿಯರ್; ಲಾಕರ್‌ನಲ್ಲಿ ₹9 ಲಕ್ಷ ಹಳೆಯ ನೋಟು ಪತ್ತೆ

ಪ್ರತಿಭಟನೆಯಲ್ಲಿ ಜಾಫರ್ ಖಾನ್, ವೈಜಿನಾಥ ಸಾತಪ್ಪನೋರ, ಸಿದ್ದಲಿಂಗಯ್ಯ ಸ್ವಾಮಿ, ಶಂಕ್ರಯ್ಯ ಸ್ವಾಮಿ, ಸಿದ್ದಪ್ಪ ಭೂತಾಳ ಸೇರಿದಂತೆ ರೈತ ಸಂಘದ ಮುಖಂಡರು ಮತ್ತು ರೈತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | 50 ಲಕ್ಷ ಲಂಚ ಪಡೆಯುವಾಗ ಲೋಕಾ ಬಲೆಗೆ ರೆಡ್ ಹ್ಯಾಂಡ್ ಸಿಕ್ಕ ತಹಶೀಲ್ದಾರ

ಭೂಮಿ ಅ ಖರಾಬ್ ತೆಗೆಯಲು ಒಂದು‌ ಕೋಟಿ ರೂಪಾಯಿ ಹಣಕ್ಕೆ ಬೇಡಿಕೆ...

ಬಾಗಲಕೋಟೆ | ಆಲಮಟ್ಟಿ ಒಳಹರಿವು ಶೂನ್ಯ: ಬಾಗಿನ ಅರ್ಪಣೆಗೆ ರೈತರ ಒತ್ತಾಯ

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿ ಆಲಮಟ್ಟಿ ಜಲಾಶಯದ ಒಳಹರಿವು...

ಉಡುಪಿ | ಬೇಳೂರು ಗ್ರಾಪಂ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ಧಾಳಿ

ಕಟ್ಟಡ ಪರವಾನಿಗೆ ನೀಡುವಲ್ಲಿ ವಿಳಂಬ ಹಾಗೂ ಪಂಚಾಯತ್ ಆಡಳಿತಕ್ಕೆ ಸಂಬಂಧಿಸಿದ ವಿವಿಧ...