ಕಲಬುರಗಿ | ಛಲವಾದಿ ನಾರಾಯಣಸ್ವಾಮಿ, ಎನ್.ರವಿಕುಮಾರ್ ಸದಸ್ಯತ್ವ ರದ್ದುಪಡಿಸಲು ಒತ್ತಾಯ

Date:

Advertisements

ಶೋಷಿತ ಸಮುದಾಯದ ನಾಯಕರ, ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಅಧಿಕಾರಿಗಳ ವಿರುದ್ಧ ನಿಂದನಾತ್ಮಕವಾಗಿ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ ಮತ್ತು ಎನ್. ರವಿಕುಮಾರ ಅವರ ವಿಧಾನ ಪರಿಷತ್ ಸದಸ್ಯತ್ವ ರದ್ದುಪಡಿಸುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ವತಿಯಿಂದ ನಗರದ ಜಗತ್ತ್ ವೃತ್ತದಲ್ಲಿ ಒಂದು ದಿನದ ಸಾಂಕೇತಿಕ ಧರಣಿ ಸತ್ಯಾಗ್ರಹ ನಡೆಸುವುದರ ಮೂಲಕ ಕಲಬುರಗಿ ಜಿಲ್ಲಾಧಿಕಾರಿ ಮುಖಾಂತರ ಸಿಎಂ’ಗೆ ಮನವಿ ಸಲ್ಲಿಸಿದರು.

ಬಿಜೆಪಿ ಪಕ್ಷದ ವತಿಯಿಂದ ಚಿತ್ತಾಪೂರದಲ್ಲಿ ‘ತಿರಂಗಾ ಯಾತ್ರಾ’ ಕಾರ್ಯಕ್ರಮ ಹಮ್ಮಿಕೊಂಡಿದ್ದ ಸಂದರ್ಭದಲ್ಲಿ ವಿಧಾನ ಪರಿಷತ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆಯವರಿಗೆ ಅವಮಾನಕರ ಶಬ್ದಬಳಸಿ ಟೀಕೆ ಮಾಡಿದಾಗ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಅವರಿಗೆ ದಿಗ್ಬಂದನ ಹಾಕಿದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷವು ಮೇ. 5 ರಂದು ಕಲಬುರಗಿ ಚಲೋ ಕಾರ್ಯಕ್ರಮ ಹಮ್ಮಿಕೊಂಡಿತ್ತು.

ಈ ವೇಳೆ ಪ್ರತಿಭಟನಾಕಾರರು ಮಾತನಾಡಿ, ಅಂದು ಜಿಲ್ಲಾಧಿಕಾರಿಗಳ ಕಾರ್ಯಾಲಯದ ಎದುರಿನ ಬಹಿರಂಗ ಸಭೆಯಲ್ಲಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಸಚೇತಕ ಎನ್. ರವಿಕುಮಾರ ಮಾತನಾಡುತ್ತ, ಕಲಬುರಗಿಯ ಜಿಲ್ಲಾಧಿಕಾರಿಗಳು (ಪೌಜಿಯಾ ತರನ್ನುಮ್) ಪಾಕಿಸ್ತಾನದಿಂದ ಬಂದಿದ್ದಾರೋ ಅಥವಾ ಇಲ್ಲಿ ಐ.ಎ.ಎಸ್ ಆಫೀಸರ್ ಆಗಿದ್ದಾರೋ ಗೊತ್ತಿಲ್ಲ. ಅವರು ಬಹುಶಃ ಪಾಕಿಸ್ತಾನದಿಂದ ಬಂದಿದ್ದಾರೆ ಎಂದು ಕಾಣಿಸುತ್ತದೆ ಎಂದು ನಾಲಿಗೆ ಹರಿಬಿಟ್ಟಿದ್ದರು. ಜಿಲ್ಲೆಯಲ್ಲಿರುವ ವಿಶೇಷವಾಗಿ ದಲಿತ ಸಮುದಾಯದ ದಕ್ಷ ಮತ್ತು ನಿಷ್ಠಾವಂತ ಪೊಲೀಸ್ ಅಧಿಕಾರಿಗಳಾದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಹೇಶ ಮೇಘನವರ್‌, ಪೊಲೀಸ್ ಇನ್ಸಪೇಕ್ಟರ್ ಚಂದ್ರಶೇಖರ ತಿಗಡಿ, ಡಿ.ಎಸ್.ಪಿ ಶಂಕರರಾವ ಪಾಟೀಲ್ ಇವರ ವಿರುದ್ಧ ನಿಂದನಾತ್ಮಕವಾಗಿ ಮಾತನಾಡಿದ್ದಾರೆ ಎಂದರು.

Advertisements

ಸಮಾಜದಲ್ಲಿ ಸಂಘರ್ಷವನ್ನುಂಟುಮಾಡುವ ಮತ್ತು ಜಿಲ್ಲಾಧಿಕಾರಿ ಹಾಗೂ ದಲಿತ ಪೊಲೀಸ್ ಅಧಿಕಾರಿಗಳನ್ನು ಅವಮಾನಿಸುವ ಉದ್ದೇಶದಿಂದಲೇ ಈ ಪ್ರಚೋದನೆ ಭಾಷಣ ಮಾಡಿದ್ದಾರೆ. ಅವರ ಮಾತಿನಿಂದ ಅಧಿಕಾರಿಗಳ ನೈತಿಕ ಸ್ಥೆರ್ಯ ಮತ್ತು ಕರ್ತವ್ಯಕ್ಕೆ ಕಳಂಕ ತಂದಿದೆ. ಅವರಿಗೆ ಮಾನಸಿಕ ಆಘಾತವನ್ನುಂಟು ಮಾಡಿದೆ. ಮತ್ತು ವಿರೋಧ ಪಕ್ಷದ ನಾಯಕ ಛಲುವಾದಿ ನಾರಾಯಣಸ್ವಾಮಿ, ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆಯವರ ಬಗ್ಗೆ ಮಾತನಾಡಿ ಅವಮಾನ ಮಾಡಿದ್ದಾರೆ. ಈ ಮೂಲಕ ದಲಿತರ ವಿರುದ್ಧ ದಲಿತರನ್ನು ಎತ್ತಿಕಟ್ಟಿ ಖರ್ಗೆ ಕುಟುಂಬದ ಮೇಲೆ ಗುಲಾಮಿ ಛಲುವಾದಿ ನಾರಾಯಣಸ್ವಾಮಿಯನ್ನು ಚೂ ಬಿಟ್ಟು ಕಲಬುರಗಿಯಲ್ಲಿ ಬೆಂಕಿ ಹಚ್ಚುವ ಕೆಲಸವನ್ನು ಕೇಸರಿಪಡೆ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈಗಾಗಲೇ ಎನ್. ರವಿಕುಮಾರ್ ಮೇಲೆ ನಗರದ ಸ್ಟೇಷನ ಬಜಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಜೊತೆಗೆ ಕಲಬುರಗಿಯಲ್ಲಿ ಅಶಾಂತಿ ಉಂಟುಮಾಡಿ ಪ್ರಚೋದನಕಾರಿ ಮಾತುಗಳಾಡಿದ ವಿಜಯೇಂದ್ರ, ಆರ್ ಅಶೋಕ, ಸಿ.ಟಿ. ರವಿ, ಗೋವಿಂದ ಕಾರಜೋಳ, ನಾರಾಯಣಸ್ವಾಮಿ ಇವರೆಲ್ಲ ಜಾತಿ ಧರ್ಮದ ಹೆಸರಿನಲ್ಲಿ ದ್ವೇಷ ಭಾಷಣಗಳ ಮಾಡಿದ್ದಾರೆ. ಇವರುಗಳ ವಿರುದ್ಧ ದೂರು ದಾಖಲಿಸಿ ಸುಪ್ರೀಂ ಕೋರ್ಟಿನ ಸ್ಪಷ್ಟ ನಿರ್ದೇಶನದಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು. ಕೋಮುವಾದ ಹಾಗೂ ಸಂವಿಧಾನ ವಿರುದ್ಧ ಮಾತನಾಡಿದ ಎನ್. ರವಿಕುಮಾರ ಹಾಗೂ ಛಲವಾದಿ ನಾರಾಯಣಸ್ವಾಮಿ ಇವರ ವಿಧಾನ ಪರಿಷತ್ತಿನ ಸದಸ್ಯತ್ವವನ್ನು ರದ್ದುಪಡಿಸಲು ಒತ್ತಾಯಿಸಿದರು.

ಧರಣಿಯಲ್ಲಿ ರಾಜ್ಯ ಸಂ.ಸಂಚಾಲಕ ಮರಿಯಪ್ಪ ಹಳ್ಳಿ,ರಾಜ್ಯ ಸಂ. ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ, ರಾಜ್ಯ ಸಂಚಾಲಕ ಅರ್ಜುನ ಭದ್ರೆ, ಜಿಲ್ಲಾ ಸಂಚಾಲಕ ಎಂ.ಎಂ. ಮೇತ್ರೆ, ಮಹಾಂತೇಶ ಬಡದಾಳ, ಜಯಕುಮಾರ ನೂಲಕರ್, ಮಲ್ಲಿಕಾರ್ಜುನ ಖನ್ನಾ, ಸಂತೋಷ ತೆಗನೂರ, ಸೂರ್ಯಕಾಂತ ಅಜಾದಪೂರ,ಯಾದಗಿರಿ ಜಿಲ್ಲಾ ಮುಖಂಡ ಮಲ್ಲಿಕಾರ್ಜುನ ತಳಳ್ಳಿ, ಯಾದಗಿರಿ ಜಿಲ್ಲಾ ಸಂ ಸಂಚಾಲಕ ಅಜೀಜಸಾಬ್ ಐಕೂರ, ದತ್ತಾತ್ರಯ ಇಕ್ಕಳಕಿ, ಪೂಜಪ್ಪ ಮೇತ್ರೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಪೋಕ್ಸೋ ಪ್ರಕರಣ: ಆರೋಪಿಗಳಿಗೆ ದಂಡ, ತಲಾ ಹತ್ತು ವರ್ಷ ಜೈಲು ಶಿಕ್ಷೆ

ಪೋಕ್ಸೋ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ತಲಾ ಹತ್ತು ವರ್ಷ ಜೈಲು ಶಿಕ್ಷೆ...

ಮಂಗಳೂರು | ಅಲ್‌ ವಫಾ ಟ್ರಸ್ಟ್‌ನಿಂದ 15 ಜೋಡಿಗಳಿಗೆ ಸರಳ ಸಾಮೂಹಿಕ ವಿವಾಹ

ಮಂಗಳೂರಿನ ಅಲ್ ವಫಾ ಚಾರಿಟೆಬಲ್ ಟ್ರಸ್ಟ್ ಹಮ್ಮಿಕೊಂಡಿದ್ದ 15 ಜೋಡಿಗಳ ಸರಳ...

ಚಿಕ್ಕಮಗಳೂರು l ಶೋ ರೂಮ್ ಸಿಬ್ಬಂದಿಯಿಂದಲೇ ಡೀಸೆಲ್ ಕಳ್ಳತನ

ಶೋ ರೂಂ ಸಿಬ್ಬಂದಿಯೇ ಹೊಸ ವಾಹನದ ಡೀಸೆಲ್‌ ಕಳ್ಳತನ ಮಾಡಿದ ಘಟನೆ...

ಗದಗ | ಒಳಮೀಸಲಾತಿ ಜಾರಿ, ಬಹುದಿನಗಳ ಕನಸು ನನಸು ಮಾಡಿದ ಎಲ್ಲರಿಗೂ ಅಭಿನಂದನೆ: ಎಸ್. ಎನ್. ಬಳ್ಳಾರಿ

ಪರಿಶಿಷ್ಟ ಜಾತಿಗಳ ಮೂರು ದಶಕಗಳ ಒಳಮೀಸಲಾತಿ ಹೋರಾಟವನ್ನು ಮಾನ್ಯ ಸುಪ್ರೀಂ ಕೋರ್ಟ್...

Download Eedina App Android / iOS

X