ಕಲಬುರಗಿ | ಬೆಳೆ ಸಮಿಕ್ಷೆದಾರರಿಗೆ ಸೇವಾ ಭದ್ರತೆ, ಜೀವ ವಿಮೆ ಒದಗಿಸಲು ಆಗ್ರಹ

Date:

Advertisements

ರಾಜ್ಯದ ಬೆಳೆ ಸಮಿಕ್ಷೆದಾರರಿಗೆ ಸೇವಾ ಭದ್ರತೆ ಹಾಗೂ ಜೀವ ಮೀಮೆ ಒದಗಿಸಿ ಖಾಯಂಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ಬೆಳೆ ಸಮಿಕ್ಷೆದಾರರ ಸೇಡಂ ತಾಲ್ಲೂಕು ಘಟಕದ ಪದಾಧಿಕಾರಿಗಳು ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಸಂಘದ ಸಂಸ್ಥಾಪಕ ಪಿ.ರಾಜು ಡಿಪರೇಂಟ್ ಮಾತನಾಡಿ, ʼಸುಮಾರು 9-10 ವರ್ಷಗಳಿಂದ ಪ್ರತಿ ಗ್ರಾಮ ಪಂಚಾಯತ್‌ ಮಟ್ಟದಲ್ಲಿ ಬೆಳೆ ಸಮಿಕ್ಷೆ ನಡೆಸುತ್ತಿದ್ದಾರೆ. ಆದರೆ ಗಣತಿದಾರರಿಗೆ ಸೇವೆ ಸಲ್ಲಿಸುವ ವೇಳೆ ಹಾವು, ಚೇಳು ಸೇರಿ ಕಾಡು ಪ್ರಾಣಿಗಳ ಭಯ ಕಾಡುತ್ತದೆ. ಹೀಗಾಗಿ ಬೆಳೆ ಸಮೀಕ್ಷೆದಾರರಿಗೆ ಜೀವ ಭದ್ರತೆ ಒದಗಿಸಬೇಕುʼ ಎಂದು ಆಗ್ರಹಿಸಿದರು.

ʼರಾಜ್ಯದಲ್ಲಿ ಸುಮಾರು 25 ರಿಂದ 30 ಸಾವಿರ ಬೆಳೆ ಸಮೀಕ್ಷೆದಾರರು ಇದ್ದಾರೆ. ಈಗಾಗಲೇ ಹೈಕೋರ್ಟ್ ಆದೇಶದಂತೆ 10 ವರ್ಷ ಪೂರೈಸಿದ ದಿನಗೂಲಿ ಕೆಲಸಗಾರರಿಗೆ ಕಾಯಂ ಮಾಡಬೇಕು ಎಂದು ಅನುಮತಿ ನೀಡಿದೆ. ನಮ್ಮ ಸಂಘದ ಪರವಾಗಿ ಸದನದಲ್ಲಿ ಧ್ವನಿ ಎತ್ತಿ ನಮಗೆ ನ್ಯಾಯ ಒದಸಿಬೇಕುʼ ಎಂದು ಮನವಿ ಮಾಡಿದರು.

Advertisements

ʼಬೆಳೆ ಸಮೀಕ್ಷೆದಾರರಿಗೆ ಪ್ರತಿದಿನ ಕೆಲಸ ನೀಡಬೇಕು, ಜೀವ ವಿಮೆ, ಸೇವಾ ಭದ್ರತೆ ಒದಗಿಸಬೇಕು, ಮಳೆಗಾಲದಲ್ಲಿ ರಕ್ಷಣೆಗೆ ರೇನ್ ಕೋಟ್ ನೀಡಬೇಕು ಹಾಗೂ ಗುರುತಿನ ಚೀಟಿ, ಶೂ ಸೇರಿದಂತೆ ಇತರೆ ಸೌಲಭ್ಯ ಒದಗಿಸಬೇಕುʼ ಎಂದು ಒತ್ತಾಯಿಸಿದರು.

ಈ ಹಿಂದೆ ರಾಜ್ಯದ ಎಲ್ಲಾ ಕೃಷಿ ಮತ್ತು ಕಂದಾಯ ಅಧಿಕಾರಿಗಳಿಗೆ ಬೇಡಿಕೆಗಳಿಗೆ ಆಗ್ರಹಿಸಿಲಾಗಿತ್ತು. ಆದರೆ ಯಾವುದೇ ರೀತಿಯ ಸೌಲಭ್ಯ ದೊರಕಿಲ್ಲ. ಈಗಲಾದರೂ ಬೇಡಿಕೆ ಈಡೇರಿಸಬೇಕು.ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಮಟ್ಟದಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಪ್ರತಿಭಟನೆ

ಈ ಸಂದರ್ಭದಲ್ಲಿ ಬೆಳೆ ಸಮೀಕ್ಷೆದಾರ ಸಂಘದ ಪದಾಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X