ಕಲಬುರಗಿ | ಮುಂದುವರೆದ ಧರಣಿ ಸತ್ಯಾಗ್ರಹ; ಅತಿವೃಷ್ಟಿ ಹಾನಿಗೆ ಶೀಘ್ರ ಪರಿಹಾರಕ್ಕೆ ಪ್ರಗತಿಪರರ ಆಗ್ರಹ

Date:

Advertisements

ಕಲಬುರಗಿ ಜಿಲ್ಲೆಯ ರೈತರ ಬೇಡಿಕೆಗಳಿಗೆ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ, ನಗರದ ಜಗತ್ ಸರ್ಕಲ್‌ನಲ್ಲಿ ನಡೆಯುತ್ತಿರುವ ಅಹೋರಾತ್ರಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ 4ನೇ ದಿನಕ್ಕೆ ಕಾಲಿಟ್ಟಿದೆ.

ಜಿಲ್ಲೆಗೆ ತಕ್ಷಣವೇ ಬರಗಾಲ ಘೋಷಣೆ, ಅತಿವೃಷ್ಟಿಯಿಂದ ಉಂಟಾದ ಹಾನಿಗೆ ತುರ್ತು ಪರಿಹಾರ, ಹಿಂಗಾರು ಬಿತ್ತನೆಗಾಗಿ ಉಚಿತವಾಗಿ ಬೀಜ ಮತ್ತು ರಸಗೊಬ್ಬರ ವಿತರಣೆ, ಅತಿವೃಷ್ಟಿಯಿಂದ ಬೆಳೆ ನಾಶವಾದ ಪರಿಣಾಮ ದಿನೇ ದಿನೇ ಹೆಚ್ಚುತ್ತಿರುವ ರೈತರ ಆತ್ಮಹತ್ಯೆ ಪ್ರಕರಣಗಳನ್ನು ತಡೆಯಲು ಸಾಲ ಮನ್ನಾ ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸಬೇಕೆಂದು ರೈತ ಸಂಘಟನೆಗಳ ಮುಖಂಡರು ಮತ್ತು ಸಮಾಜದ ಪ್ರಗತಿಪರ ಚಿಂತಕರು ಮನವಿ ಮಾಡಿದ್ದಾರೆ.

ಧರಣಿಯಲ್ಲಿ ಮಾತನಾಡಿದ ಶಿವುಪ್ರಭು ಪಾಟೀಲ್, ಮಾಜಿ ಜಿಲ್ಲಾ ಪಂಚಾಯತಿ ಅಧ್ಯಕ್ಷರು, ರೈತರ ಸಂಕಷ್ಟಗಳಿಗೆ ಸರ್ಕಾರ ಕಿವಿಗೊಡದಿರುವುದನ್ನು ಖಂಡಿಸಿದರು ಮತ್ತು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

KPRS ಜಿಲ್ಲಾಧ್ಯಕ್ಷ ಶರಣಬಸಪ್ಪಾ ಮಮಶೆಟ್ಟಿ, KRRS ಅಧ್ಯಕ್ಷ ದಯಾನಂದ ಪಾಟೀಲ, ಉಪಾಧ್ಯಕ್ಷ ಉಮಾಪತಿ ಪಾಟೀಲ್, ಭೀಮಾಶಂಕರ ಮಾಡಿಯಾಳ (AIKS), ಮೌಲಾ ಮುಲ್ಲಾ (AIKS), KRRHS ಅಧ್ಯಕ್ಷ ಮಹಾಂತ ಗೌಡಾ ನಂದಿಹಳ್ಳಿ ಮತ್ತು ನಾಗಲಿಂಗಯ್ಯ ಮಠಪತಿ (ಪ್ರಗತಿಪರ ಚಿಂತಕರು ಮತ್ತು ಬಸವಣ್ಣನ ಅನುಯಾಯಿ) ಧರಣಿಗೆ ಬೆಂಬಲ ವ್ಯಕ್ತಪಡಿಸಿ ಮಾತನಾಡಿದರು.

ಇದನ್ನೂ ಓದಿ: ಕಲಬುರಗಿ | ಅಶೋಕ ವಿಜಯದಶಮಿ ಅಂಗವಾಗಿ ಪಂಚಶೀಲ ಧ್ವಜಾರೋಹಣ

ಇದೆ ವೇಳೆ ರೈತ ಮಹಿಳೆಯರಾದ ಸುಶೀಲಾ ಬಿ ಮತ್ತು ಶಾಂತಾಬಾಯಿ ರಾಠೋಡ, ಜೊತೆಗೆ ಕರೆಪ್ಪಾ ಕರಗೋಂಡ ಮತ್ತು ಶರಣ ಗೌಡ ಪಾಟೀಲ್ ಭಣಮಗಿ ಕೂಡ ಸತ್ಯಾಗ್ರಹ ವೇದಿಕೆಯಲ್ಲಿ ಹಾಜರಾಗಿ ಬೆಂಬಲ ಸೂಚಿಸಿದರು.

ರೈತರ ಹೋರಾಟ ಮುಂದುವರಿದಂತೆ, ಜಿಲ್ಲೆಯಾದ್ಯಂತ ಸರ್ಕಾರದ ವಿರುದ್ಧ ಅಸಮಾಧಾನದ ಧ್ವನಿ ಗಟ್ಟಿಯಾಗುತ್ತಿದೆ. ಬೇಡಿಕೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ರೈತ ಸಂಘಟನೆಗಳು ಎಚ್ಚರಿಸಿವೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಡುಕೋಣ ದಾಳಿ ವ್ಯಕ್ತಿ ಗಂಭೀರ

ಕಾಡುಕೋಣ ದಾಳಿಯಿಂದ ವ್ಯಕ್ತಿ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಾಳೂರು...

ರಾಯಚೂರು | ರಕ್ತಹೀನತೆ, ತಾಯಿ ಶಿಶು ಮರಣ ನಿಯಂತ್ರಣಕ್ಕೆ ಒತ್ತಾಯಿಸಿ ಮಹಿಳಾ ಒಕ್ಕೂಟ ಪ್ರತಿಭಟನೆ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಮಹಿಳೆಯರಲ್ಲಿ ರಕ್ತ ಹೀನತೆ ಹಾಗೂ...

ಚಿಕ್ಕಮಗಳೂರು l ಗುಡ್ಡಹಳ್ಳದಲ್ಲಿ ಪುಂಡಾನೆ ಸೆರೆ; ಕಾರ್ಯಾಚರಣೆ ಯಶಸ್ವಿಗೊಳಿಸಿದ ಅರಣ್ಯ ಇಲಾಖೆ

ಸುಮಾರು ಒಂದುವರೆ ವರ್ಷಗಳಿಂದ ಬೀಡು ಬಿಟ್ಟಿದ್ದ, ಪುಂಡಾನೆ ಕೊನೆಗೂ ಸೆರೆಯಾಗಿರುವ ಘಟನೆ,...

ಚಿಕ್ಕಮಗಳೂರು l 1% ಮೀಸಲಾತಿಯನ್ನು ಕೂಡಲೇ ಜಾರಿ ಮಾಡಬೇಕು; ಎದ್ದೇಳು ಕರ್ನಾಟಕ

ಬದುಕಿನ್ನುದ್ದಕ್ಕೂ ಅಲೆಯುತ್ತಲೇ ಬದುಕಿದ ಅಲೆಮಾರಿ ಬಂಧುಗಳು ಇಂದು ನ್ಯಾಯ ಅರೆಸುತ್ತಾ ದೆಹಲಿಗೆ...

Download Eedina App Android / iOS

X