ಕಲಬುರಗಿ | ವೃದ್ಧಾಶ್ರಮದಲ್ಲಿ ಹಣ್ಣು ಹಂಪಲು ವಿತರಿಸಿ ಡಾ.ಪುನೀತ್ ರಾಜ್‌ಕುಮಾರ್ ಅಭಿಮಾನಿಗಳಿಂದ ಪುಣ್ಯ ಸ್ಮರಣೆ

Date:

Advertisements

ಡಾ.ಪುನೀತ್ ರಾಜ್‌ಕುಮಾರ್ ಅವರ 3ನೇ ಪುಣ್ಯ ಸ್ಮರಣೆ ಅಂಗವಾಗಿ ಕಲಬುರಗಿಯ ಭಾಗ್ಯಜೋತಿ ಚಾರಿಟೇಬಲ್ ಟ್ರಸ್ಟ್‌ ವತಿಯಿಂದ ಕಲಬುರಗಿ ನಗರದ ವೃದ್ಧಾಶ್ರಮದಲ್ಲಿ ಪುನೀತ್ ರಾಜ್‌ಕುಮಾರ್ ಸಂಘ ಮತ್ತು ಭೀಮ ಯುವ ಸೇನೆ ವತಿಯಿಂದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

“ಡಾ.ಪುನೀತ್ ರಾಜ್‌ಕುಮಾರ್ ಅವರು ಸಾಮಾಜಿಕ ಕಳಕಳಿ ಮತ್ತು ಅವರ ವಿಚಾರಗಳು ಸಮಾಜಕ್ಕೆ ಕೊಡುಗೆಯಾಗಿದೆ. ಅವರ ಮಕ್ಕಳಿಗೆ, ಮಹಿಳೆಯರಿಗೆ ,ತಂದೆ ತಾಯಿಯರಿಗೆ ,ಗುರು ಹಿರಿಯರಿಗೆ, ಅನಾಥರಿಗೆ ,ನಿರ್ಗತಿಕರಿಗೆ, ಗೌರವ, ಕರುಣೆ ,ಪ್ರೀತಿಯ ಮನೋಭಾವದಿಂದ ಎಲ್ಲಾ ಜಾತಿ ಜನಾಂಗದವರನ್ನು ಗೌರವದಿಂದ ಕಾಣುವ ಮೂಲಕ, ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ. ಇಂದಿನ ದಿನಗಳಲ್ಲಿ ಯುವಕರು ಇಂಥ ಆದರ್ಶ ವ್ಯಕ್ತಿಯ ವ್ಯಕ್ತಿತ್ವ ಮೈಗೂಡಿಸಿಕೊಳ್ಳಬೇಕು” ಎಂದು ಮೈಲಾರಿ ದೊಡ್ಡಮನಿ ಅವರು ಕಾರ್ಯಕ್ರಮದಲ್ಲಿ ತಿಳಿಸಿದರು.

WhatsApp Image 2024 10 30 at 16.47.23

“ಡಾ.ಪುನೀತ್ ರಾಜಕುಮಾರ್ ಅವರ 3 ನೇ ಪುಣ್ಯಸ್ಮರಣೆ ದಿನ, ಪ್ರತಿ ವರ್ಷದಂತೆ ಈ ವರ್ಷವೂ ವೃದ್ಧಾಶ್ರಮದಲಿರುವ ಅನಾಥ ಮತ್ತು ನಿರ್ಗತಿಕರಿಗೆ ಹಣ್ಣು, ಹಂಪಲು, ಬ್ರೆಡ್, ಬಿಸ್ಕೆಟ್ ನೀಡುವುದರ ಮೂಲಕ, ಅವರ ಜೀವನ ಶೈಲಿ ಹಾಗೂ ಸರಳತೆ, ನಡೆ, ನುಡಿ ಕಲಿಯಬೇಕು. ಅಪ್ಪು ಅವರನ್ನು ನೆನೆಯುತ್ತಾ ಈ ಸೇವೆ ಮಾಡುತ್ತಿದ್ದೆವೆ ಎಂದು ಡಾ.ಪುನೀತ ರಾಜಕುಮಾರ ಅಭಿಮಾನಿ ಸಂಘ ಮತ್ತು ಭೀಮ ಯುವ ಸೇನೆಯ ಅಧ್ಯಕ್ಷರಾದ ಸಂತೋಷ ಹಾವನೂರ ಹೇಳಿದರು.

Advertisements

ಈ ಸಂದರ್ಭದಲ್ಲಿ ಮಹಾಂತೇಶ ಸಿಂಗೆ, ರಜನಿಕಾಂತ ಸಿಂಗೆ, ಟ್ರಸ್ಟಿನ ಅಧ್ಯಕ್ಷರಾದ ಶ್ರೀಮತಿ ಗಂಗಮ್ಮ, ರೇವಣಸಿದ್ದ ಗೋರಗೋಳ, ಶ್ರೀಮತಿ ಕರುಣಾ ಕಲಬುರಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ವರದಿ: ಮೈಲಾರಿ ದೊಡ್ಡಮನಿ, ಸಿಟಿಜನ್ ಜರ್ನಲಿಸ್ಟ್

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X