ಕಲಬುರಗಿ | ಪರಿಸರ ರಕ್ಷಣೆ ಎಲ್ಲರ ಹೊಣೆ; ಶಾಲಾ ಮಕ್ಕಳಿಂದ ಜಾಗೃತಿ ಜಾಥಾ

Date:

Advertisements

ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ನೆಲೋಗಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಪರಿಸರ ಮಹತ್ವದ ತಿಳಿಸುವುದರ ಜತೆಗೆ ಶಾಲಾ ಮಕ್ಕಳು, ಗ್ರಾಮಸ್ಥರಲ್ಲಿ ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ ಎಂಬ ಅರಿವು ಮೂಡಿಸುವ ಸಲುವಾಗಿ ಕಾಡು ಬೆಳಸಿ ನಾಡು ಉಳಿಸಿ, ಹಸಿರೆ ನಮ್ಮ ಉಸಿರು, ಪರಿಸರವನ್ನು ನಾವು ರಕ್ಷಣೆ ಮಾಡಿದರೆ ಪರಿಸರ ನಮ್ಮನ್ನು ರಕ್ಷಣೆ ಮಾಡುತ್ತದೆ ಎಂಬಿತ್ಯಾದಿ ಘೋಷಣೆ ಕೂಗುತ್ತಾ ಜನರಲ್ಲಿ ಜಾಗೃತಿ ಮೂಡಿಸಿದರು.

ಈ ವೇಳೆ ಶಾಲೆಯ ಮುಖ್ಯೋಪಾಧ್ಯಾಯ ಮಾತನಾಡಿ, “ಪರಿಸರ ದಿನೇ ದಿನೆ ನಾಶವಾಗುತ್ತಿರುವುದಕ್ಕೆ ಮಾನವನೇ ನೇರ ಕಾರಣ. ಆಧುನಿಕತೆ ಹೆಸರಿನಲ್ಲಿ ರಸ್ತೆ ಮಾಡಲು ಸಾವಿರಾರು ಮರಗಳ ಮಾರಣ ಹೋಮ ನಡೆಸಲಾಗುತ್ತಿದೆ. ಇದರಿಂದ ಸರಿಯಾದ ಸಮಯಕ್ಕೆ ಮಳೆ ಇಲ್ಲದೆ, ಬೆಳೆ ಇಲ್ಲದೆ ಜೀವ ಸಂಕುಲ ಪರಿತಪಿಸುವಂತಾಗಿದೆ. ಮನೆಯಲ್ಲಿ ಎರಡು ಕಸದ ಬುಟ್ಟಿ ಇಟ್ಟು ಒಣ ಕಸ-ಹಸಿ ಕಸ ಪ್ರತ್ಯೇಕವಾಗಿ ಹಾಕಬೇಕು ನಮ್ಮ ಸುತ್ತಮುತ್ತಲೂ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಪ್ರತಿ ಮನೆಗಳಲ್ಲಿ ಸಸಿಗಳನ್ನು ನೆಡಬೇಕು. ನಾವು ಬದಲಾದರೆ ಜಗತ್ತು ಬದಲಾಗುತ್ತದೆ. ಬದಲಾವಣೆ ನಮ್ಮಿಂದಲೇ ಶುರುವಾಗಲಿ” ಎಂದು ತಿಳಿಸಿದರು.

Advertisements

ಈ ಸುದ್ದಿ ಓದಿದ್ದೀರಾ?: ಕಲಬುರಗಿ | ಬಾಣಂತಿಯರ ಸರಣಿ ಸಾವು ಖಂಡಿಸಿ ಆರೋಗ್ಯ ಹಕ್ಕಿನ ಜಾಥಾ

ಜಾಥಾದಲ್ಲಿ ಸರಸ್ವತಿ ಸಿಂಗೆ, ರಾಮಪ್ಪ ನಡಗಟ್ಟಿ, ಶಾಂತಬಾಯಿ ಕಡಬಿನ್,‌ ಜಯಶ್ರೀ ಭಂಗಿ, ಶಿಕ್ಷಣ ಪ್ರೇಮಿ ದೇವೇಂದ್ರ ನಡಗಟ್ಟಿ, ಭೂತಾಳಿ ನಡಗಟ್ಟಿ, ಶಾಲಾ ಮಕ್ಕಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X