ಕಲಬುರಗಿ | ನರನಾಳ ಗ್ರಾಮದ ರೈತ ಆತ್ಮಹತ್ಯೆ

Date:

Advertisements

ಒಂದು ಎಕರೆ ಮೂವತ್ತು ಗುಂಟೆ ಹೊಲದಲ್ಲಿ ತೊಗರಿ ಬೆಳೆದಿದ್ದು, ಸಾಲ ಭಾದೆಯಿಂದಾಗಿ ಹೊಲದಲ್ಲಿ ವಿಷ ಕುಡಿದು ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ನರನಾಳ ಗ್ರಾಮದಲ್ಲಿ ನಡೆದಿದೆ.

ಚಿಂಚೊಳಿ ತಾಲೂಕಿನ ನರನಾಳ ಗ್ರಾಮದ ನಿವಾಸಿ ರೈತ ನಾಗಪ್ಪ(40) ರೈತ ನವೆಂಬರ್ 6ರ ಮಧ್ಯಾಹ್ನ 1 ಗಂಟೆ ಸಮಯದಲ್ಲಿ ತಮ್ಮ ಸ್ವಂತ ಹೊಲದಲ್ಲಿ ವಿಷ ಕುಡಿದಿದ್ದು, ಅವರನ್ನು ಜಯದೇವ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ನವೆಂಬರ್ 8ರಂದು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ರೈತ ನಾಗಪ್ಪನವರ ತಂದೆ ಹೆಸರಿನಲ್ಲಿರುವ ಜಮೀನಿನಲ್ಲಿ ತೊಗರಿ ಬೆಳೆ ಬೆಳೆಯಲಾಗಿತ್ತು. ಅತಿವೃಷ್ಠಿಯಿಂದಾಗಿ ಉದ್ದು, ಹೆಸರು ಬೆಳೆ ಹಾನಿಯಾಗಿದೆ. ಧರ್ಮಸ್ಥಳ ಸಂಘ ಮತ್ತು ಎಲ್‌ಎಂಟಿ ಸಂಘದಲ್ಲಿ ₹2 ಲಕ್ಷ ರೂಪಾಯಿ ಸಾಲ ಪಡೆದಿದ್ದರು.

Advertisements

ಸಾಲ ವಸೂಲಿಗಾಗಿ ದಿನ ಬೆಳಿಗ್ಗೆ ರೈತ ನಾಗಪ್ಪನ ಮನೆ ಮುಂದೆ ಧರಣಿ ಕುಳಿತು ರೈತನಿಗೆ ಮಾನಸಿಕ ಹಿಂಸೆ ಕೊಟ್ಟು ಅವಮಾನ ಮಾಡುತ್ತಿರುದ್ದ ಧರ್ಮಸ್ಥಳ ಮತ್ತು ಎಲ್‌ಎಂಟಿ ಸಂಘಗಳ ಕಿರುಕುಳದಿಂದ ಜಿಗುಪ್ಸೆಗೊಂಡು ಸಾಲದ ಭಾದೆ ತಾಳಲಾರದೆ ರೈತ ನಾಗಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹಾಸನ l ಅಕ್ರಮವಾಗಿ ಮದ್ಯ ಮಾರಾಟ; ನಾಶ ಪಡಿಸಿದ ಅಬಕಾರಿ ಇಲಾಖೆ ಅಧಿಕಾರಿಗಳು

ಮೃತ ನಾಗಪ್ಪನಿಗೆ ಒಬ್ಬ ಪುತ್ರಿ(8), ಒಬ್ಬ ಪುತ್ರ(3)ನಿದ್ದು, ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ. ಕುಟುಂಬಕ್ಕೆ ರಾಜ್ಯ ಸರ್ಕಾರ ಸೂಕ್ತ ಪರಿಹಾರ ಕೊಡುವಂತೆ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಶರಣಬಸಪ್ಪಾ ಮಮಶೆಟ್ಟಿ ಮಾಧ್ಯಮಗಳ ಮೂಲಕ ಒತ್ತಾಯಿಸಿದ್ದಾರೆ.

ಆತ್ಮಹತ್ಯೆ ಪರಿಹಾರವಲ್ಲ
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X