ಕಲಬುರಗಿ | ಬಾಲಕಿ ಮೇಲೆ ಅತ್ಯಾಚಾರ; ಅಪ್ಪ, ಮಗನಿಗೆ ಜೈಲು ಶಿಕ್ಷೆ

Date:

Advertisements

ಬಾಲಕಿ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪ ಸಾಬೀತಾಗಿದ್ದರಿಂದ ಕಲಬುರಗಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್(ವಿಶೇಷ ಪೋಕ್ಸೊ) ನ್ಯಾಯಾಲಯವು “ಅಪರಾಧಿಯಾದ ಮಗನಿಗೆ 30 ವರ್ಷ ಹಾಗೂ ಆತನ ತಂದೆಗೆ 5 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿ ಆದೇಶಿಸಿದೆ.

ಜಿಲ್ಲೆಯ ಚಿತ್ತಾಪುರ ತಾಲೂಕಿನ ಆರೋಪಿಗಳಾದ ಸತೀಶ್ ಕಾಶಿ ಸೂರ್ಯಕಾಂತ(21) ಹಾಗೂ ಸೂರ್ಯಕಾಂತ ಕಾಶಿ(45) ಶಿಕ್ಷೆಗೆ ಒಳಗಾದವರು. ಬಾಲಕಿಯನ್ನು ಪ್ರೀತಿಸುವುದಾಗಿ ಹಿಂದೆ ಬಿದ್ದಿದ್ದ ಸತೀಶ್, 2022ರ ಮೇ 5ರಂದು ಆಕೆಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದ. ಆಗ, ಬಾಲಕಿಯ ಕುಟುಂಬಸ್ಥರು ದೂರು ಕೊಡಲು ಮುಂದಾದರು. 18 ವರ್ಷ ತುಂಬಿದ ಬಳಿಕ ಮದುವೆಯಾಗುವುದಾಗಿ ಹೇಳಿದ ಅಪರಾಧಿ, ಬಾಲಕಿಯನ್ನು ತನ್ನ ಮನೆಯಲ್ಲಿ ಅಕ್ರಮವಾಗಿ ಬಂಧನದಲ್ಲಿ ಇರಿಸಿಕೊಂಡಿದ್ದು, ಆಗಾಗ ಅತ್ಯಾಚಾರವನ್ನೂ ಎಸಗಿದ್ದ.

ಸತೀಶ್ ಕುಟುಂಬಸ್ಥರು ಬಾಲಕಿಗೆ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿದ್ದರು. ಜತೆಗೆ ಸತೀಶ್ ತಂದೆ ಸೂರ್ಯಕಾಂತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ, ಜೀವ ಬೆದರಿಕೆಯನ್ನೂ ಹಾಕಿದ್ದ. ಈ ಸಂಬಂಧ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಿಪಿಐಗಳಾದ ಶಿವಾನಂದ ಎನ್ ಅಂಬಿಗೇರ ಹಾಗೂ ಪ್ರಕಾಶ್ ಆರ್ ಯಾತನೂರ್ ಅವರು ತನಿಖೆ ನಡೆಸಿದ್ದರು. ವಿವಿಧ ಕಾಯ್ದೆಗಳ ಅಡಿಯಲ್ಲಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನೂ ಸಲ್ಲಿಸಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ರಾಮನಗರ | ಡಿ ದೇವರಾಜ ಅರಸು ಜನ್ಮದಿನಾಚರಣೆ

ವಾದ-ಪ್ರತಿವಾದ ಆಲಿಸಿದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯ(ವಿಶೇಷ ಪೋಕ್ಸೊ) ಎಫ್‌ಟಿಎಸ್‌ಸಿ-1 ನ್ಯಾಯಾಧೀಶ ಯಮನಪ್ಪ ಬಮ್ಮಣಗಿ ಅವರು ಸತೀಶ್‌ಗೆ ಪೋಕ್ಸೊ ಕಾಯಿದೆಯ ವಿವಿಧ ಸೆಕ್ಷನ್‌ಗಳ ಅಡಿ 30 ವರ್ಷ ಜೈಲು ಶಿಕ್ಷೆ ಮತ್ತು ₹20,000 ದಂಡ ಹಾಗೂ ಸೂರ್ಯಕಾಂತಗೆ 5 ವರ್ಷ ಜೈಲು ಶಿಕ್ಷೆ ಮತ್ತು 3,000 ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಶಾಂತವೀರ ಬಿ ತುಪ್ಪದ ಅವರು ವಾದ ಮಂಡಿಸಿದರು. ನೊಂದ ಬಾಲಕಿಗೆ ಕಾನೂನು ಸೇವಾ ಪ್ರಾಧಿಕಾರದಿಂದ ₹7 ಲಕ್ಷ ಪರಿಹಾರವಾಗಿ ನೀಡುವಂತೆ ಆದೇಶದಲ್ಲಿ ತಿಳಿಸಿದ್ದಾರೆ.

ವರದಿ : ವಾಲೆಂಟಿಯರ್‌ ಅನಂತ ದೇಶಪಾಂಡೆ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X