ಕಲಬುರಗಿ | ಸರ್ಕಾರಗಳು ನಮ್ಮ ಜೀವನವನ್ನು ಅಧೋಗತಿಗೆ ಇಳಿಸಿವೆ: ವಿ.ಜಿ. ದೇಸಾಯಿ

Date:

Advertisements

ದೇಶವು ಸ್ವಾತಂತ್ರ್ಯಗೊಂಡು 76ವರ್ಷಗಳು ಗತಿಸಿದರೂ ಸಹ ನಮ್ಮನ್ನು ಆಳಿರುವ ಕಾಂಗ್ರೆಸ್, ಬಿಜೆಪಿ ಹಾಗೂ ಸಮ್ಮಿಶ್ರ ಸರ್ಕಾರಗಳು ಜನಸಾಮಾನ್ಯರ ಜೀವನವನ್ನು ಮತ್ತಷ್ಟು ಅಧೋಗತಿಗೆ ಇಳಿಸಿವೆ ಎಂದು ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಸಮಿತಿಯ ಸದಸ್ಯ ಕಾಮ್ರೇಡ್ ವಿ.ಜಿ ದೇಸಾಯಿ ಹೇಳಿದರು.

ಕಲಬುರಗಿ ನಗರದ  ಓಂ ನಗರ, ಖರ್ಗೆ ವೃತ್ತ, ಗಂಜ್ ಹಾಗೂ ಎ.ಪಿ.ಎಂ.ಸಿ ಮಾರುಕ್ಕಟ್ಟೆಯಲ್ಲಿ ನಡೆದ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಪಕ್ಷದ ಸಭೆ ಉದ್ದೇಶಿಸಿ ಅವರು ಮಾತನಾಡಿದರು.

ಕೋಮುವಾದಿ, ಫ್ಯಾಸೀವಾದಿ, ಬಂಡವಾಳಶಾಹಿ ವಿರುದ್ಧ ಈ ಚುನಾವಣೆಯಲ್ಲಿ ಜನಪರ ಧ್ವನಿ ಮೊಳಗಬೇಕು. ಬಂಡವಾಳಶಾಹಿಗಳ ಏಜೆಂಟಗಳಾದ ಈ ಪಕ್ಷಗಳನ್ನು ತಿರಸ್ಕರಿಸಿ ಜನಹೋರಾಟದ ಮೂಲಕ ಹೊರಹೊಮ್ಮಿದ ನಮ್ಮ ಪಕ್ಷದ ಅಭ್ಯರ್ಥಿಯಾದ ಎಸ್.ಎಮ್.ಶರ್ಮಾ ರವರನ್ನು ಚುನಾಯಿಸಬೇಕೆಂದು ಮನವಿ ಮಾಡಿದರು.

Advertisements

ಜಿಲ್ಲಾ ಸಮಿತಿ ಸದಸ್ಯ ಕಾ.ಮಹೇಶ್ ಎಸ್.ಬಿ ಮಾತನಾಡುತ್ತಾ, ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ರೈತರ ಸಂಕಷ್ಟಕ್ಕೆ ಪರಿಹಾರ ಸಿಗುತ್ತಿಲ್ಲ. ರೈತರ ಹೆಸರಿನಲ್ಲಿ ಪ್ರಮಾಣ ವಚನ ತೆಗೆದುಕೊಂಡು ಅವರನ್ನು ಕಡೆಗಣಿಸುತ್ತಾರೆ ಹಾಗೂ ಗೋಲಿಬಾರ್ ಕೂಡಾ ನಡೆಸುತ್ತಾರೆ. ಹಾಗಾಗಿ ಕಾರ್ಮಿಕ ವಿರೋಧಿ, ರೈತರ ವಿರೋಧಿ ಪಕ್ಷಗಳನ್ನು ‌ಸೋಲಿಸಬೇಕು ಹಾಗೂ ಈ ಸಮಸ್ಯೆಗಳಿಗೆ ಸಂಸತ್ತಿನಲ್ಲಿ ಧ್ವನಿ ಎತ್ತಲು ಕಾ.ಎಸ್.ಎಂ.ಶರ್ಮಾರವರನ್ನು ಗೆಲ್ಲಿಸಬೇಕೆಂದು ಮನವಿ ಮಾಡಿಕೊಂಡರು.

ಈ ಸಭೆಗಳನ್ನು ಉದ್ದೇಶಿಸಿ ಕಾ.ಮಹೇಶ್ ನಾಡಗೌಡ, ಕಾ.ಸ್ನೇಹಾ ಕಟ್ಟಿಮನಿ, ಮುಂತಾದವರು ಮಾತನಾಡಿದ್ದರು.

ಅಭ್ಯರ್ಥಿಯಾದ ಎಸ್.ಎಮ್.ಶರ್ಮ ಅವರು ಮಾತನಾಡಿ, ಕಲಬುರಗಿ ಜನರ ಸಮಸ್ಯೆಗಳನ್ನು ಹಾಗೂ ಜನಹೋರಾಟದ ಧ್ವನಿಯನ್ನು ಸಂಸತ್ತಿನಲ್ಲಿ ಪ್ರತಿಧ್ವನಿಸಲು ನಮ್ಮನ್ನು ಆಯ್ಕೆ ಮಾಡಬೇಕೆಂದು ಮನವಿ ಮಾಡಿದರು.

ಈ ಸಭೆಯಲ್ಲಿ ಪಕ್ಷದ ಕಾರ್ಯಕರ್ತರಾದ ಹಣಮಂತ ಎಸ್.ಎಚ್, ಸಂತೋಷ ಹಿರವೆ, ತುಳಜಾರಾಮ, ಪ್ರೀತಿ ದೊಡ್ಡಮನಿ, ಭೀಮಾಶಂಕರ ಆಂದೋಲ, ನಾಗರಾಜ್ ಮುಂತಾದವರು ಉಪಸ್ಥಿತರಿದ್ದರು.

ನಗರದ ಜನತೆಯಿಂದ ಅಭ್ಯರ್ಥಿಗೆ ಬೆಂಬಲ ನೀಡುತ್ತಾ ವೋಟು ಕೊಡುತ್ತೇವೆ ಎನ್ನುವ ಜೊತೆಗೆ ಈಗ ನೋಟು ಕೂಡಾ ಕೊಡುತ್ತೇವೆಂದು ಧನಸಹಾಯ ಮಾಡಿದ್ದು ವಿಶೇಷವಾಗಿತ್ತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X