ಕಲಬುರಗಿ | ಸಿಮೆಂಟ್‌ ಕಾರ್ಖಾನೆ ಜೊತೆ ಗ್ರಾಮ ಪಂಚಾಯತಿ ಅವ್ಯವಹಾರ; ತನಿಖೆಗೆ ಆಗ್ರಹ

Date:

Advertisements

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ‘ಅಲ್ಟ್ರಾಟೆಕ್ ರಾಜಶ್ರೀ ಸಿಮೆಂಟ್ ಕಾರ್ಖಾನೆ’ಯಿಂದ ನಿಯಮಾನುಸಾರ ತೆರಿಗೆ ವಸೂಲಿ ಮಾಡಲಾಗುತ್ತಿಲ್ಲ. ಗ್ರಾಮ ಪಂಚಾಯತಿ ಅಧಿಕಾರಿಗಳು ಅನಧಿಕೃತ ಒಡಂಬಡಿಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿ ಪಂಚಾಯತಿ ಸದಸ್ಯ ಉಮೇಶ್‌ ಪಾಂಡುಸಿಂಗ್ ಚವ್ಹಾಣ್‌ ಅವರು ತಾಲೂಕಿನ ಸಹಾಯಕ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ.

“ನಿಯಮದಂತೆ ಅಲ್ಟ್ರಾಟೆಕ್ ರಾಜಶ್ರೀ ಸಿಮೆಂಟ್ ಕಾರ್ಖಾನೆಯು ವಾರ್ಷಿಕ 43,25,175 ರೂ. ತೆರಿಗೆ ಪಾವತಿಸಬೇಕು. ಆದರೆ, ಇಲ್ಲಿಯವರೆಗೂ ಅವರು ತೆರಿಗೆ ಸಂದಾಯ ಮಾಡಿಲ್ಲ. ಕರ್ನಾಟಕ ಪಂಚಾಯತಿ ಕಾಯ್ದೆ 1993ರ ಭಾಗ 8 ಮತ್ತು ಕಲಂ 202ರ ಪ್ರಕಾರ ಕಾರ್ಕಾನೆ, ಕಟ್ಟಡಗಳಿಗೆ ತೆರಿಗೆಯನ್ನು ನಿಗದಿ ಮಾಡಲಾಗುತ್ತದೆ. ಆದರೆ, ಪಂಚಾಯತಿ ಅಧಿಕಾರಿಗಳು ಈ ನಿಯಮಗಳನ್ನು ಗಾಳಿಗೆ ತೂರಿ ಅಲ್ಟ್ರಾಟೆಕ್‌ ರಾಜ ಸಿಮೆಂಟ್ ಕಾರ್ಖಾನೆಯೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

“ಕಾರ್ಖಾನೆಯೊಂದಿಗೆ ಒಡಂಬಡಿಕೆ ಮಾಡಿಕೊಂಡಿರುವ ಗ್ರಾಮ ಪಂಚಾಯತಿ ಅಧ್ಯಕ್ಷರು ಮತ್ತು ಇತರೇ ಸದಸ್ಯರುಗಳು ಕಂಪನಿಯಿಂದ ಪ್ರತ್ಯೇಕ್ಷವಾಗಿ ಮತ್ತು ಪರೋಕ್ಷವಾಗಿ ಅನುಕೂಲತ ಪಡೆದಿದ್ದಾರೆ. ಅವರ ಬ್ಯಾಂಕ್‌ ಖಾತೆಗಳಿಗೆ ಹಣ ಸಂದಾಯವಾಗಿರುವುದು ಕಂಡು ಬಂದಿರುತ್ತದೆ. ಕಾರ್ಖಾನೆಯೊಂದಿಗೆ ಅವ್ಯವಹಾರ ನಡೆಸಿರುವ ಪಂಚಾಯತಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ಅವ್ಯವಹಾರದ ಬಗ್ಗೆ ತನಿಖೆ ನಡೆಸಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸರಕಾರ ದೇವದಾಸಿ ಮಹಿಳೆಯರ ಕುಟುಂಬ ಸದಸ್ಯರನ್ನು ಗಣತಿ ಪಟ್ಟಿಗೆ ಸೇರಿಸುವ ಕ್ರಮ ಸ್ವಾಗತ

"ಸರಕಾರ ಈಚೆಗೆ ದೌರ್ಜನ್ಯದ ದೇವದಾಸಿ ಪದ್ಧತಿಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಲು ದೇವದಾಸಿ...

ಗದಗ | ತಹಸೀಲ್ದಾರ ಕಚೇರಿಗಳಲ್ಲಿ ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ

"ಜಿಲ್ಲೆಯ ಎಲ್ಲಾ ತಾಲೂಕ ತಹಶೀಲ್ದಾರ್ ಕಚೇರಿ ಹಾಗೂ ಹೋಬಳಿಗಳಲ್ಲಿ ವೃಧ್ಯಾಪ್ಯ ವೇತನ,...

ಜನಮನ ಗೆದ್ದ ತುಮಕೂರು ದಸರಾ ಉತ್ಸವ : ಡಾ. ಜಿ.ಪರಮೇಶ್ವರ

 ತುಮಕೂರು ದಸರಾ ಉತ್ಸವವು ನಾಡಿನಾದ್ಯಂತ ಜನರ ಮನಸ್ಸನ್ನು ಗೆಲ್ಲುವ ಮೂಲಕ ಐತಿಹಾಸಿಕ...

Download Eedina App Android / iOS

X