ಕಲಬುರಗಿ | ಹಮಾಲಿ ಕಾರ್ಮಿಕರ ಮರು ನೇಮಕ್ಕೆ ಕಾರ್ಮಿಕರ ಒಕ್ಕೂಟ ಆಗ್ರಹ

Date:

ಪಡಿತರ ಅನ್ನಭಾಗ್ಯ ಯೋಜನೆ ಜಾರಿ ಮಾಡಿರುವ ಬೆನ್ನಲ್ಲೇ ಹಮಾಲಿ ಕಾರ್ಮಿಕರನ್ನು ಏಕಾಏಕಿ ಕೆಲಸದಿಂದ ತೆಗೆದುಹಾಕಿರುವ ಗುತ್ತಿಗೆದಾರರ ಮೇಲೆ ಕ್ರಮ ಜರುಗಿಸಬೇಕು. ಹಮಾಲಿ ಕಾರ್ಮಿಕರನ್ನು ಮರು ನೇಮಕ ಮಾಡಿಕೊಳ್ಳಬೇಕು. ಈ ಸಂಬಂಧ ತುರ್ತು ಜಂಟಿ ಸಭೆ ಕರೆಯಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಲೋಡಿಂಗ್ ಮತ್ತು ಅನ್‌ಲೋಡಿಂಗ್ ಕಾರ್ಮಿಕರ ಒಕ್ಕೂಟ ಮತ್ತು ಕರ್ನಾಟಕ ಶ್ರಮಿಕ ಶಕ್ತಿಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

- Advertisement -

ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಮತ್ತು ಕಾರ್ಮಿಕರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ಉಪ ನಿರ್ದೇಶಕರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ಜಿಲ್ಲೆಯ ಅಫಜಲ್‌ಪುರ ತಾಲೂಕಿನ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ(ಕೆಎಫ್‌ಸಿಎಸ್‌ಸಿ) ಗೋದಾಮಿನಲ್ಲಿ ಹತ್ತಾರು ವರ್ಷಗಳಿಂದ ಲೋಡಿಂಗ್ ಮತ್ತು ಅನ್‌ಲೋಡಿಂಗ್ ಕೆಲಸ ಮಾಡುತ್ತಿರುವ ಹಮಾಲಿ ಕಾರ್ಮಿಕರನ್ನು ಗ್ರಾಮಾಂತರ ಸಾಗಾಣಿಕೆ ಗುತ್ತಿಗೆದಾರ ಅಶೋಕ ಟ್ರಾನ್ಸ್‌ಪೋರ್ಟ್ ಕಂಪನಿ ಏಕಾಏಕಿ ತೆಗೆದುಹಾಕಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಹಮಾಲಿ ಕಾರ್ಮಿಕರನ್ನು ಏಕಾಏಕಿ ತೆಗೆದಿರುವುದು ಕಾರ್ಮಿಕ ಕಾನೂನುನಿಗೆ ವಿರುದ್ಧ ಮತ್ತು ಸಂವಿಧಾನ ವಿರೋಧಿಯಾಗಿದೆ. ಹಾಗಾಗಿ ತಾವು ಮಧ್ಯಪ್ರವೇಶ ಮಾಡಿ ಕೆಎಫ್‌ಸಿಎಸ್‌ಸಿಯಲ್ಲಿ ಈಗಾಗಲೇ ಕೆಲಸ ಮಾಡುತ್ತಿದ್ದ ಕಾರ್ಮಿಕರೇ ಕೆಲಸ ನಿರ್ವಹಣೆ ಮಾಡುವಂತೆ ನಿರ್ದೇಶನ ನೀಡಬೇಕು” ಎಂದು ಒತ್ತಾಯಿಸಿದರು.

“ಹಮಾಲಿ ಕಾರ್ಮಿಕರ ಕುಂದು ಕೊರತೆ, ಸಮಸ್ಯೆಗಳನ್ನು ಬಗೆಹರಿಸಲು ಜಿಲ್ಲಾಧಿಕಾರಿ ಕಚೇರಿಗೆ ಹಲವು ಬಾರಿ ಮನವಿ ನೀಡಿದ್ದೇವೆ. ಆದರೆ, ಯಾವುದೇ ಪ್ರಯೋಜನವಾಗಿಲ್ಲ. ಇದೀಗ ಆಹಾರ ಇಲಾಖೆಯ ಆಯುಕ್ತರು ಮತ್ತೊಮ್ಮೆ ಸುತ್ತೋಲೆ ಕಳಿಸಿದ್ದು, ತಮ್ಮ ಕಚೇರಿಗೂ ತಲುಪಿರುತ್ತದೆ. ಈ ಹಿನ್ನೆಲೆಯಲ್ಲಿ ತಾವು ಜಿಲ್ಲಾಮಟ್ಟದ ಕಾರ್ಮಿಕ ಅಧಿಕಾರಿಗಳು, ಇಎಸ್‌ಐ, ಪಿಎಫ್ ಜಾರಿ ಅಧಿಕಾರಿಗಳು ಮತ್ತು ಸಾಗಾಣಿಕೆ ಗುತ್ತಿಗೆದಾರರನ್ನು ಒಳಗೊಂಡಂತೆ ಜಿಲ್ಲಾಧಿಕಾರಿಯವರೊಂದಿಗೆ ಜೂನ್‌ 29 ರಂದು ತುರ್ತು ಜಂಟಿ ಸಭೆ ಕರೆಯಬೇಕು” ಎಂದು ಕೆಎಫ್‌ಸಿಎಸ್‌ಸಿ ಜಂಟಿ ಉಪ ನಿರ್ದೇಶಕರಿಗೆ ಮನವಿ ಮಾಡಿದರು.

“ಸಾಗಣಿಕೆ ಗುತ್ತಿಗೆದಾರರು ಸಮಪರ್ಕವಾಗಿ ಗುತ್ತಿಗೆ ಕಾರ್ಮಿಕ ಕಾನೂನುಗಳನ್ನು ಸರಿಯಾಗಿ ಜಾರಿ ಮಾಡಿಲ್ಲ. ಗುತ್ತಿಗೆದಾರರು ಸಾಗಾಣಿಕೆ ಮಾಡುವ ಆಹಾರ ಧಾನ್ಯಗಳ ಪ್ರಮಾಣಕ್ಕೆ ಅನುಗುಣವಾಗಿ ಸರಿಯಾಗಿ ಇಎಸ್‌ಐ, ಪಿಎಫ್‌ಗಳನ್ನೂ ಸಮರ್ಪಕವಾಗಿ ಜಾರಿ ಮಾಡಿಲ್ಲವೆಂದು ಹಲವು ಬಾರಿ ತಮಗೂ, ಜಿಲ್ಲಾಧಿಕಾರಿ ಕಚೇರಿಗೂ ಮನವಿ ಮಾಡಿದ್ದೇವೆ” ಎಂದು ಹೇಳಿದರು.

“ಅಫಜಲ್‌ಪುರ ಸಾಗಾಣಿಕೆ ಗುತ್ತಿಗೆದಾರರು, ʼನಿರ್ದಿಷ್ಟ ಕೂಲಿ ದರಕ್ಕಿಂತ ಕಡಿಮೆ ದರಕ್ಕೆ ಕೆಲಸ ಮಾಡಿ ಇಲ್ಲವಾದರೆ ಬೇಡʼವೆಂದು ಒತ್ತಾಯಪೂರ್ವಕವಾಗಿ ಕೆಲಸದಿಂದ ತೆಗೆದಿದ್ದಾರೆ. ಇದು ಗುತ್ತಿಗೆ ಕಾರ್ಮಿಕ ಕಾಯ್ದೆಗೆ ವಿರುದ್ಧವಾಗಿದೆ. ಹಾಗಾಗಿ ಅವರ ಮೇಲೆ ಶೀಘ್ರವಾಗಿ ಕ್ರಮ ಕೈಗೊಂಡು ಕಾರ್ಮಿಕರು ಕೆಲಸ ನಿರ್ವಹಿಸಿಕೊಂಡು ಹೋಗಲು ಅನುವು ಮಾಡಿಕೊಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ವಿದ್ಯಾರ್ಥಿನಿಯರ ಜೊತೆ ವಾರ್ಡನ್‌ ಅನುಚಿತ ವರ್ತನೆ; ಆರೋಪ

“ಹಮಾಲಿ ಕಾರಮಿಕರು ಕೆಲಸ ಮಾಡಲು ಅನುಕೂಲ ಮಾಡಿಕೊಡದಿದ್ದಲ್ಲಿ ಕೆಸಲವನ್ನು ನಿಲ್ಲಿಸಿ ತಮ್ಮ ಕಚೇರಿಯ ಮುಂದೆ ಅನಿರ್ದಿಷ್ಟಾವಧಿ ಪ್ರತಿಭಟನೆ ಮಾಡಬೇಕಾಗುತ್ತದೆ. ಹಾಗಾಗಿ ಕೂಡಲೇ ಈ ಮೇಲ್ಕಂಡ ದಿನಾಂಕದಲ್ಲಿ ಜಂಟಿ ಸಭೆ ಕರೆದು ಸಮಸ್ಯೆ ಬಗೆಹರಿಸಬೇಕು” ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಉದಯಕುಮಾರ್ ಹಳಿಮನಿ, ರಮೇಶ್ ಅಫಜಲಪುರ, ಅಡ್ಯಾಪ್ಪ ಚಿಂಚೋಳಿ, ಶಿವು ಆಳಂದ, ಸೈಬಣ್ಣ ಸೇಡಂ, ಸುಭಾಷ್ ಚಿತ್ತಾಪುರ, ರಾಜೇಂದ್ರ ರಾಜವಾಳ, ಅಶ್ವಿನಿ ಮದನಕರ್, ಭವಾನಿ ಪ್ರಸಾದ್ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...