ಕಲಬುರಗಿ | ಭಾರಿ ಮಳೆ : ಅಲೆಮಾರಿ ಗುಡಿಸಲಿಗೆ ನುಗ್ಗಿದ ನೀರು, ರಾಜ್ಯ ಹೆದ್ದಾರಿ ಸೇತುವೆ ಕುಸಿತ

Date:

Advertisements

ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ‌ ಮಳೆ ನಗರ ಸೇರಿದಂತೆ ಜಿಲ್ಲೆಯ ನಾನಾ ಕಡೆ ಅವಾಂತರ ಸೃಷ್ಟಿ ಮಾಡಿದೆ.

ಜೇವರ್ಗಿ ಪಟ್ಟಣ ಸೇರಿದಂತೆ ತಾಲ್ಲೂಕಿನ ಅನೇಕ ಕಡೆಗಳಲ್ಲಿ ಹೊಲ, ಮನೆಗಳಲ್ಲಿ ನೀರು ನುಗ್ಗಿ ಭಾರಿ ಪ್ರಮಾಣದಲ್ಲಿ ಹಾನಿಯಾಗಿದೆ. ಪಟ್ಟಣದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಮನೆಗಳು ಜಲಾವೃತಗೊಂಡಿವೆ. ದಿನ ಬಳಕೆಯ ವಸ್ತುಗಳು ಸೇರಿದಂತೆ ವಿವಿಧ ಸಾಮಗ್ರಿಗಳು ನೀರು ಪಾಲಾಗಿವೆ.

ಜೇವರ್ಗಿ ಪಟ್ಟಣ ಅಲೆಮಾರಿ ಜನಾಂಗ ವಾಸಿಸುವ ವಾರ್ಡ್‌ -16 ಹಾಗೂ ವಾರ್ಡ್-‌1ರಲ್ಲಿ ಗುಡಿಸಲುಗಳಿ ಅಪಾರ ಪ್ರಮಾಣದಲ್ಲಿ ಮಳೆ ನೀರು ನುಗ್ಗಿ ದವಸ, ಧಾನ್ಯ ಸೇರಿದಂತೆ ಸಾಮಾಗ್ರಿಗಳು ಹಾನಿಯಾಗಿವೆ.

WhatsApp Image 2025 08 28 at 1.12.15 PM

ಈ ವೇಳೆ ಅಲೆಮಾರಿ ಮುಖಂಡರು ಮಾತನಾಡಿ, ʼಭಾರಿ ಮಳೆಯಿಂದ ಗುಡಿಸಲುಗಳಿಗೆ ಮಳೆ ನೀರು ನುಗ್ಗಿ ಅಸ್ತವ್ಯಸ್ತಗೊಂಡಿದ್ದು, ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದೆವು. ಈ ಕುರಿತು ಶಾಸಕ ಅಜಯ ಸಿಂಗ್‌, ಜಿಲ್ಲಾಧಿಕಾರಿ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆʼ ಎಂದು ಜೇವರ್ಗಿಯ ಟಿಪ್ಪು ಸುಲ್ತಾನ್ ಸಮಿತಿಯ ಅಧ್ಯಕ್ಷ ಮೊಹಿಯುದ್ದೀನ್ ಇನಾಮದಾರ ಹೇಳಿದರು,

‘ಅಧಿಕಾರಿಗಳು ಗುಡಿಸಲು ವಾಸಿಗಳ ಸಮಸ್ಯೆ ಆಲಿಸಿ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಬೇಕು. ಕುಟುಂಬಗಳಿಗೆ ತಾತ್ಕಾಲಿಕ ವಸತಿ ವ್ಯವಸ್ಥೆ ಕಲ್ಪಿಸಿಕೊಂಡುವಂತೆ’ ಎಂದು ಅವರು ಆಗ್ರಹಿಸಿದರು.

ಸೇತುವೆ ಕುಸಿತ : ಸಂಪರ್ಕ ಸ್ಥಗಿತ

ಭಾರಿ ಮಳೆಯಿಂದಾಗಿ ಕಮಲಾಪುರ-ಜೀವಣಗಿ ಮಾರ್ಗವಾಗಿ ಚಿಂಚೋಳಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ ರಸ್ತೆ-126 ಮಧ್ಯೆ ತಾತ್ಕಾಲಿಕವಾಗಿ ನಿರ್ಮಿಸಲಾದ ಸೇತುವೆ ಕುಸಿದ ಹಿನ್ನೆಲೆ ಸಂಪರ್ಕ ಕಡಿತಗೊಂಡಿದೆ.

WhatsApp Image 2025 08 28 at 8.59.02 PM

ಕಮಲಾಪುರ ಪಟ್ಟಣ ಹಾಗೂ ಜೀವಣಗಿಗೆ ಸಂಪರ್ಕ ಕಲ್ಪಿಸುವ ಮಾರ್ಗಮಧ್ಯದ ಸೇತುವೆ ಕಳೆದ ವರ್ಷ ಮಳೆಗಾಲದಲ್ಲಿ ಬಿದ್ದು ಸಂಪರ್ಕ ಕಡಿತಗೊಂಡು ಎರಡು ತಿಂಗಳಾದರೂ ಕ್ರಮಕ್ಕೆ ಮುಂದಾಗಲಿಲ್ಲ. ಈ ಕುರಿತು ಈದಿನ.ಕಾಮ್ ವರದಿ ಪ್ರಕಟಿಸಿದ ನಂತರ ತಾತ್ಕಾಲಿಕವಾಗಿ ಸಿಡಿ, ಮುರಮು ಹಾಕಿ ಸೇತುವೆ ನಿರ್ಮಾಣ ಮಾಡಿದರು.

ಇದನ್ನೂ ಓದಿ : ಬೀದರ್‌ | ಮಳೆ ಅಬ್ಬರ, ನದಿ, ಕೆರೆಗಳಲ್ಲಿ ಉಬ್ಬರ, ಜನಜೀವನ ತತ್ತರ!

ತದನಂತರ ಶಾಶ್ವತ ಸೇತುವೆ ನಿರ್ಮಿಸುವುದಾಗಿ ಅಧಿಕಾರಿಗಳು ಹೇಳಿದರೂ ನಿರ್ಲಕ್ಷ್ಯ ತೋರಿದ ಹಿನ್ನೆಲೆ ಮತ್ತೆ ಸೇತುವೆ ಕುಸಿದಿದ್ದು, ಶಾಶ್ವತ ಸೇತುವೆ ನಿರ್ಮಾಣಕ್ಕೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋಜುಗಾದ ಸೂಜು ಮಲ್ಲಿಗೆ ಹುಡುಗಿ ಹಾಡು : ಇಮ್ಮಡಿಯಾದ ಪ್ರೇಕ್ಷಕರ ಉತ್ಸಾಹ

 ಕಳೆದ 10 ದಿನಗಳಿಂದ ದಸರಾ ಉತ್ಸವ ಸಂಭ್ರಮದಲ್ಲಿ ಮುಳುಗಿದ್ದ ಪ್ರೇಕ್ಷಕರ ಉತ್ಸಾಹ...

ತುಮಕೂರು ದಸರಾ : ಸಚಿವರಿಂದ ವಿಶೇಷ ಪೂಜೆ

ತುಮಕೂರು ದಸರಾ ಉತ್ಸವದ ಕಡೆಯ ದಿನವಾದ ವಿಜಯದಶಮಿಯಂದು ಗೃಹ ಹಾಗೂ ಜಿಲ್ಲಾ...

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

Download Eedina App Android / iOS

X