ಕಲಬುರಗಿ | ಅತಿವೃಷ್ಟಿ : ಸಮರೋಪಾದಿ ಪರಿಹಾರ ಕ್ರಮ ಕೈಗೊಳ್ಳಲು ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

Date:

ಕಲಬುರಗಿ ಜಿಲ್ಲೆಯಲ್ಲಿನ ಅತಿವೃಷ್ಟಿ ಹಾನಿಯ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಮಂಗಳವಾರ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ, ಮಳೆ ಹಾನಿಯ ಮಾಹಿತಿ ಪಡೆದು ಸಮರೋಪಾದಿಯಲ್ಲಿ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದರು.

- Advertisement -

ʼಜಿಲ್ಲೆಯ 7 ತಾಲ್ಲೂಕುಗಳ ಜಂಟಿ ಸಮೀಕ್ಷೆ ವರದಿ ಸಿದ್ದವಾಗಿದ್ದು, ಇನ್ನೂ 4 ತಾಲ್ಲೂಕುಗಳ ವರದಿ ಸಿದ್ಧಗೊಳ್ಳುತ್ತಿದೆ. ಕಲಬುರಗಿ ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಗಿಂತ ಶೇ50 ರಷ್ಟು ಹೆಚ್ಚು ಮಳೆಯಾಗಿದೆ. ಅಲ್ಲದೆ ಕಳೆದ ನಾಲ್ಕೈದು ದಿನಗಳಲ್ಲಿ ವ್ಯಾಪಕ ಮಳೆ ಸುರಿದಿದೆʼ ಎಂದು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ʼಕಾಳಜಿ ಕೇಂದ್ರಗಳನ್ನು ತೆರೆದು, ಅಗತ್ಯ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳಬೇಕು. ಅಪಾಯದ ಸ್ಥಿತಿಯಲ್ಲಿರುವ ಮನೆಗಳಲ್ಲಿನ ನಿವಾಸಿಗಳನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಬೇಕು. ಜಾನುವಾರುಗಳಲ್ಲಿ ಉಂಟಾಗುವ ರೋಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ನದಿ ದಂಡೆಗಳಲ್ಲಿನ ಧಾರ್ಮಿಕ ಶ್ರದ್ಧಾ ಕೇಂದ್ರಗಳಲ್ಲಿ ಎಚ್ಚರಿಕೆಯ ಕ್ರಮ ಮತ್ತು ಜಾಗೃತಿ ಕೈಗೊಳ್ಳಬೇಕು. ಟಾರ್ಪಲ್, ಆಹಾರ ಪೊಟ್ಟಣ, ಇತ್ಯಾದಿ ಅಗತ್ಯ ವಸ್ತುಗಳ ಬಗ್ಗೆ ಮಾಹಿತಿ ನೀಡಬೇಕು, ಅವುಗಳನ್ನು ಪೂರೈಸಲು ಕ್ರಮ ವಹಿಸಲಾಗುವುದುʼ ಎಂದು ತಿಳಿಸಿದರು.

ʼಬೆಳೆ ಹಾನಿಯ ಕುರಿತು ಪರಿಹಾರ ಪೋರ್ಟಲ್‌ನಲ್ಲಿ ನಿಖರವಾಗಿ ದಾಖಲಾಗುವಂತೆ ನೋಡಿಕೊಳ್ಳಬೇಕು. ಅಧಿಕಾರಿಗಳು ನಿರಂತರವಾಗಿ ಜನರ ಸಂಪರ್ಕದಲ್ಲಿ ಇರಬೇಕು ಹಾಗೂ ಹಾನಿ ಪ್ರದೇಶಕ್ಕೆ ಸತತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಜನರ ಜೀವ ಹಾನಿಗೆ, ಮನೆಗಳ ಹಾನಿಗೆ ತಕ್ಷಣ ಪರಿಹಾರ ಒದಗಿಸಬೇಕು. ಸಂಕಷ್ಟದಲ್ಲಿರುವ ಜನತೆಗೆ ಉದಾರ ಮನೋಭಾವದೊಂದಿಗೆ ಸ್ಪಂದಿಸಬೇಕುʼ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಹಾನಿಗೊಳಗಾದ ರಸ್ತೆ, ಸೇತುವೆ ಮುಂತಾದ ಮೂಲಭೂತ ಸೌಕರ್ಯಗಳ ದುರಸ್ತಿ ಮತ್ತು ಮರುನಿರ್ಮಾಣಕ್ಕೆ NDRF, SDRF ನಿಧಿಗಳನ್ನು ಹೊಂದಿಸಿ ಬಳಕೆ ಮಾಡಿಕೊಳ್ಳಬೇಕು. ಶಿಥಿಲಗೊಂಡಿರುವ ಶಾಲೆ, ಅಂಗನವಾಡಿ ಕಟ್ಟಡಗಳ ಬಗ್ಗೆ ಗಮನಹರಿಸಿ, ಅವುಗಳ ದುರಸ್ತಿಗೆ ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಮುಂದಿನ ನಾಲ್ಕು ದಿನ ಆರೆಂಜ್ ಅಲರ್ಟ್ ಘೋಷಣೆಯಾಗಿದ್ದು, ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕುʼ ಎಂದು ಹೇಳಿದರು.

ಇದನ್ನೂ ಓದಿ : ಬೀದರ್‌ | ಗ್ರಾಮದ ಸಮಸ್ಯೆ ಹೇಳಿದ್ರೆ ಬೆದರಿಕೆ ಹಾಕಿದ ಸಿಂಧನಕೇರಾ ಪಿಡಿಒ; ಕ್ರಮಕ್ಕೆ ಆಗ್ರಹ

ವಿಡಿಯೊ ಕಾನ್ಫರೆನ್ಸ್ ಸಭೆಯಲ್ಲಿ ಜಿಲ್ಲಾಧಿಕಾರಿ ಫೌಝಿಯಾ ತರನುಮ್‌, ಜಿಲ್ಲಾ ಪಂಚಾಯತ್ ಸಿಇಒ ಭಂವರ್ ಸಿಂಗ್ ಮೀನಾ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸುಲು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಸಿಎಂ ಭೇಟಿ ಹಿನ್ನೆಲೆ: ಸಂಚಾರ ಮಾರ್ಗ ಬದಲಾವಣೆ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು ಹೋಬಳಿಗೆ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾ‌ರ್...

ಕೋಲಾರ | ಕ್ರಷರ್ ಘಟಕದಿಂದ ಸೀತಿ ಬೆಟ್ಟದ ದೇವಾಲಯಕ್ಕೆ ಹಾನಿ: ಸ್ಥಗಿತಕ್ಕೆ ಗ್ರಾಮಸ್ಥರ ಪ್ರತಿಭಟನೆ

ತಾಲ್ಲೂಕಿನ ವೇಮಗಲ್ ಹೋಬಳಿ ಸೀತಿ ಗ್ರಾಮದ ಬಳಿ ಗೋಮಾಳ ಜಮೀನಿನಲ್ಲಿ ನಿಯಮ...

ಕೋಲಾರ | ಕೆ.ಎಸ್. ಗಣೇಶ್ ನೇತೃತ್ವದಲ್ಲಿ ಬೆಳೆದ ಸಂಘದಿಂದ ಎರಡು ಜಿಲ್ಲೆಗಳ ಪತ್ರಕರ್ತರಿಗೆ ಆರ್ಥಿಕ, ಆರೋಗ್ಯ ಹಾಗೂ ಸಾಮಾಜಿಕ ನೆರವು

ಪತ್ರಕರ್ತರ ಆರ್ಥಿಕ ಹಾಗೂ ಸಾಮಾಜಿಕ ಅಗತ್ಯಗಳಿಗೆ ಸ್ಪಂದಿಸುವ ಉದ್ದೇಶದಿಂದ ಆರಂಭಗೊಂಡಿರುವ ಕೋಲಾರ...

ಚಿಕ್ಕಮಗಳೂರು | ಸಿಎಂ ಭೇಟಿ: ಕಾಂಗ್ರೆಸ್ ಸರ್ಕಾರ ಜನಪರ ಕಾಳಜಿಗೆ ಸಾಕ್ಷಿಯಾಗಿದೆ; ಹೆಚ್.ಪಿ ಮಂಜೇಗೌಡ

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ ಮಾತನಾಡಿ,"ಕಸ್ತೂರಿ ರಂಗನ್...