ಕಲಬುರಗಿ | ತನ್ನದಲ್ಲದ ತಪ್ಪಿಗೆ ಹಾಸ್ಟೆಲ್ ವಾರ್ಡನ್ ಅಮಾನತು; ಆದೇಶ ಹಿಂಪಡೆಯಲು ವಿದ್ಯಾರ್ಥಿನಿಯರ ಧರಣಿ

Date:

Advertisements

ಹಾಸ್ಟೆಲ್ ವಾರ್ಡನ್ ಅಮಾನತು ಮಾಡಿರುವುದನ್ನು ಖಂಡಿಸಿ ಹಾಗೂ ಹಾಸ್ಟೆಲ್‌ನ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಆಗ್ರಹಿಸಿ ಗುಲ್ಬರ್ಗಾ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಮೆಟ್ರಿಕ್ ನಂತರ ಸ್ನಾತಕೋತ್ತರ ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿನಿಯರು ಧರಣಿ ನಡೆಸಿದರು.

ಕಲಬುರಗಿ ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿನಿಯರು ಎರಡು ದಿನಗಳಿಂದ ಹಾಸ್ಟೆಲ್ ಗೇಟ್ ಮುಚ್ಚಿ ಪ್ರತಿಭಟನೆ ನಡೆಸುತ್ತಿದ್ದು, ತಮ್ಮ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿದ್ದಾರೆ.

ವಸತಿ ನಿಲಯದಲ್ಲಿ ಎರಡು ದಿನಗಳಿಂದ ಬಳಸಲು ನೀರು ಇಲ್ಲದೇ ಇರುವುದರಿಂದ ಹಾಗೂ ವಸತಿ ನಿಲಯದ ಶೌಚಾಲಯಗಳು ಸ್ನಾನ ಕೋಣೆ ಬ್ಲಾಕ್ ಆಗಿದ್ದು ಅದನ್ನು ಕೂಡಲೇ ಶುಚಿಗೊಳಿಸಬೇಕು, ಸಮರ್ಪಕ ನೀರು ಪೂರೈಸಬೇಕು ಎಂದು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು.

Advertisements

ಈದಿನ.ಕಾಮ್ ವಸತಿ ನಿಲಯಕ್ಕೆ ಭೇಟಿ ನೀಡಿ ಸಮಸ್ಯೆ ಕುರಿತು ವಿಚಾರಿಸಿದಾಗ, “ಊಟದ ಕುರಿತು ವಾರ್ಡನ್ ಅಮಾನತ್ತಿಗಾಗಿ ನಾವು ಪ್ರತಿಭಟನೆ ಮಾಡಿಲ್ಲ. ಎರಡು ದಿನಗಳಿಂದ ನೀರಿನ ಸಮಸ್ಯೆ, ಬಾತ್‌ರೂಮ್ ಗಳು ಬ್ಲಾಕ್ ಆಗಿದ್ದು ಅವುಗಳನ್ನು ಸ್ವಚ್ಛಗೊಳ್ಳಿಸಬೇಕು ಎಂದು ಪ್ರತಿಭಟನೆ ಮಾಡಿದ್ದೇವೆ. ವಾರ್ಡನ್ ಗುರುಲಿಂಗಮ್ಮ ಅವರು ಟ್ಯಾಂಕರ್‌ ನೀರು ತರಿಸಿ ಹಾಕಿದ್ದಾರೆ. ಅವರನ್ನು ಅಮಾನತು ಮಾಡಿರುವುದು ತಪ್ಪು” ಎಂದು ತಿಳಿಸಿದ್ದಾರೆ.

“ಹಾಸ್ಟೆಲ್‌ನ ಬೋರ್‌ವೆಲ್ ಕೆಟ್ಟಿದ್ದು, ಅದನ್ನ ದುರಸ್ತಿ ಮಾಡಲು ಹತ್ತು ಸಾವಿರ ಒಳಗೆ ಯಾವುದೇ ಖರ್ಚು ಬಂದರೂ ನಾನೇ ದುರಸ್ತಿ ಮಾಡಿಸುವೆ. ಅದಕ್ಕಿಂತ ಮೇಲ್ಪಟ್ಟು ಖರ್ಚು ಬಂದರೆ ಮೇಲಧಿಕಾರಿಗಳು ಅನುಮತಿ ನೀಡಿ, ಅವರ ಒಪ್ಪಿಗೆ ಮೇರೆಗೆ ಮಾಡಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ. ಹಾಗಾಗಿ ವಾರ್ಡನ್ ಅವರ ತಪ್ಪೇನಿಲ್ಲ. ಅವರು ವಿದ್ಯಾರ್ಥಿನಿಯರನ್ನು ತುಂಬಾ ಚೆನ್ನಾಗಿ ನೋಡಿಕ್ಕೊಳ್ಳುತ್ತಿದ್ದಾರೆ. ಆದರೆ ವಾಸ್ತವ ಸತ್ಯ ಅರಿಯದೆ, ಗುರುಲಿಂಗಮ್ಮ ಅವರ ವಿರುದ್ಧ ಪತ್ರಿಕೆಗಳಲ್ಲಿ ಸುಳ್ಳು ಸುದ್ದಿಗಳನ್ನು ಪ್ರಕಟ ಮಾಡಲಾಗಿದೆ. ವಾಸ್ತವಾಂಶವನ್ನು ಅರಿಯದೇ ಅಧಿಕಾರಿಗಳು ವಾರ್ಡನ್ ಅವರನ್ನು ಅಮಾನತು ಮಾಡಿದ್ದಾರೆ. ಇದು ತಪ್ಪು. ಆದೇಶ ವಾಪಸ್ ಪಡೆಯಬೇಕು” ಎಂದು ಪ್ರತಿಭಟನಾನಿರತ ವಿದ್ಯಾರ್ಥಿನಿಯರು ಒತ್ತಾಯಿಸಿದ್ದಾರೆ.

ಗುರುಲಿಂಗಮ್ಮ ಅವರ ಅಮಾನತು ಮಾಡಬಾರದು. ಅವರು ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳುತ್ತಿರುವ ಬಗ್ಗೆ ಮೇಲಧಿಕಾರಿಗಳಿಗೆ ಮನವಿ ಪತ್ರದ ಮೂಲಕ ವಿಚಾರ ತಿಳಿಸಿದ್ದೇವೆ. ಹಾಸ್ಟೆಲ್‌ನಲ್ಲಿರುವ ಸಮಸ್ಯೆಗಳನ್ನು ಬಗೆಹರಿಸುವಂತೆಯೂ ಅಧಿಕಾರಿಗಳಿಗೆ ಮನವಿಯಲ್ಲಿ ತಿಳಿಸಿದ್ದೇವೆ ಎಂದು ವಸತಿ ನಿಲಯದ ವಿದ್ಯಾರ್ಥಿನಿಯರು ಮಾಹಿತಿ ನೀಡಿದರು.

ವರದಿ: ಗೀತಾ ಹೊಸಮನಿ, ಕಲಬುರಗಿ

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಬಸವಲಿಂಗ ಪಟ್ಟದ್ದೇವರು ಸುದೈವಿ ಮಕ್ಕಳ ಪೋಷಕರು : ನವೀಲಕುಮಾರ್ ಉತ್ಕಾರ್

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ತಮ್ಮ ಜೀವನದುದ್ದಕ್ಕೂ ಸಾಮಾಜಿಕ,...

ನಿರ್ಲಕ್ಷ್ಯಕ್ಕೆ ಗುರಿಯಾಗಿ ದುಸ್ಥಿತಿಗೆ ಬಿದ್ದ ರಾಜ್ಯ ಹೆದ್ದಾರಿ; ಶಾಸಕರ ವಿರುದ್ಧ ಸಾರ್ವಜನಿಕರ ಆಕ್ರೋಶ

ಕಲಬುರಗಿ ಜಿಲ್ಲೆಯ ರಾಜ್ಯ ಹೆದ್ದಾರಿ 125, ಶಹಾಬಾದ್ ತಾಲೂಕಿನಿಂದ ಜೇವರ್ಗಿಯ ರಾಷ್ಟ್ರೀಯ...

ಕಲಬುರಗಿ | ಬೆಳೆ ಹಾನಿ: ಎಕರೆಗೆ 25 ಸಾವಿರ ಪರಿಹಾರ ನೀಡುವಂತೆ ಒತ್ತಾಯಿಸಿ ಎಐಕೆಕೆಎಂಎಸ್‌ ಪ್ರತಿಭಟನೆ

ಕಲಬುರಗಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಆಗಿರುವ ಬೆಳೆ ನಷ್ಟಕ್ಕೆ ಕೂಡಲೇ ಪರಿಹಾರವನ್ನು ಬಿಡುಗಡೆ...

ಚಿಕ್ಕಬಳ್ಳಾಪುರ | ಮಂತ್ರಾಲಯದಲ್ಲಿ ಡಾ.ಕೈವಾರ ಶ್ರೀನಿವಾಸ್‌ರವರಿಗೆ ಕನ್ನಡಸಿರಿ ಪ್ರಶಸ್ತಿ ಪ್ರದಾನ

ಮಂತ್ರಾಲಯದ ಸದ್ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ನಡೆದ ಪ್ರಪ್ರಥಮ ಅಂತಾರಾಜ್ಯ ಕನ್ನಡ...

Download Eedina App Android / iOS

X