ಕಲಬುರಗಿ | ಪತ್ನಿ ಕೊಂದ ಪತಿಗೆ ಜೀವಾವಧಿ ಶಿಕ್ಷೆ; ₹50 ಸಾವಿರ ದಂಡ

Date:

Advertisements

ಕುಡಿಯಲು ಹಣ ಕೊಡದ ಪತ್ನಿಯ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ್ದ ಆರೋಪ ಸಾಬೀತಾಗಿದ್ದರಿಂದ ಅಪರಾಧಿಗೆ ಕಲಬುರಗಿ ನಗರದ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ₹50 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದೆ.

ಜೇವರ್ಗಿ ತಾಲ್ಲೂಕಿನ ಕುರನಳ್ಳಿ ಗ್ರಾಮದ ಮಹಾಂತಪ್ಪ ನಿಂಗಪ್ಪ ದೊಡ್ಡಮನಿ ಶಿಕ್ಷೆಗೆ ಒಳಗಾದವರು. ಕುರನಳ್ಳಿ ಗ್ರಾಮದ ಮಲ್ಕಪ್ಪ ಕಟ್ಟಿಮನಿ ಎಂಬುವವರ ಮಗಳು ಸಂಗೀತಾ ಎಂಬುವವರನ್ನು 10 ವರ್ಷಗಳ ಹಿಂದೆ ಮಹಾಂತಪ್ಪ ಮದುವೆಯಾಗಿದ್ದ, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಅಪರಾಧಿ ಮಹಾಂತಪ್ಪ ಮದ್ಯ ವ್ಯಸನಿಯಾಗಿದ್ದ ಕೆಲಸ ಮಾಡದೇ ಸದಾ ಮದ್ಯಕ್ಕೆ ಹಣ ಕೊಡುವಂತೆ ಹೆಂಡತಿಗೆ ಪೀಡಿಸುತ್ತಿದ್ದನು.

2023ರ ಡಿಸೆಂಬರ್ 26ರಂದು ಸಂಜೆ ಮದ್ಯ ಕುಡಿಯಲು ಹಣ ನೀಡುವಂತೆ ಕೇಳಿದ್ದಾನೆ. ಆಕೆ ಹಣ ಕೊಡದಿದ್ದಾಗ ಸಿಟ್ಟಿಗೆದ್ದು ಕೊಡಲಿಯಿಂದ ತಲೆಯ ಹಿಂಭಾಗಕ್ಕೆ ಹೊಡೆದಿದ್ದಾನೆ. ತೀವ್ರ ಗಾಯಗೊಂಡಿದ್ದ ಸಂಗೀತಾ ಕೊನೆಯುಸಿರೆಳೆದರು. ಜಗಳ ಬಿಡಿಸಲು ಬಂದ ಮಗನಿಗೂ ಮಹಾಂತಪ್ಪ ಕಾಲಿನಿಂದ ಒದ್ದು ಓಡಿಸಿದ್ದ. ಸಂಗೀತಾ ತಂದೆ ಮಲ್ಕಪ್ಪ ಅವರು ನೀಡಿದ ದೂರಿನ ಮೇರೆಗೆ ನೆಲೋಗಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

Advertisements

ತನಿಖಾಧಿಕಾರಿಗಳಾದ ಪಿಎಸ್‌ಐ ಜ್ಯೋತಿ ಹಾಗೂ ಸಿಪಿಐ ರಾಜೇಸಾಬ್ ನದಾಫ್ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಾದ, ಪ್ರತಿವಾದ ಆಲಿಸಿದ ನ್ಯಾಯಾಧೀಶ ಮಹ್ಮದ್ ಮುಜೀರ್ ಉಲ್ಲಾ ಅವರು ಅಪರಾಧಿಗೆ ಜೀವಾವಧಿ ಶಿಕ್ಷೆ ಹಾಗೂ ₹50 ಸಾವಿರ ದಂಡ ವಿಧಿಸಿದರು.

ಸರ್ಕಾರಿ ಅಭಿಯೋಜಕ ಹಯ್ಯಾಳಪ್ಪ ಎನ್. ಬಳಬಟ್ಟಿ ವಾದ ಮಂಡಿಸಿದ್ದರು.

ಇದನ್ನೂ ಓದಿ : ಅನುಭವ ಮಂಟಪ ಶೇ 63ರಷ್ಟು ಪೂರ್ಣ : 2026ರ ಮೇ ತಿಂಗಳಲ್ಲಿ ಉದ್ಘಾಟನೆ : ಸಚಿವ ಈಶ್ವರ ಖಂಡ್ರೆ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X