ಕರ್ತವ್ಯ ಲೋಪ ಎಸಗಿರುವ ಆರೋಪದ ಮೇಲೆ ಚಿಂಚೋಳಿ ತಾಲ್ಲೂಕಿನ ಶೇರಿಭಿಕನಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಗುರುರಾಜ ಕುಲಕರ್ಣಿ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಲಕ್ಷ್ಮಯ್ಯ ಅಮಾನತುಗೊಳಿಸಿದ್ದಾರೆ.
ಸಿಗರೇಟು ಸೇವಿಸುತ್ತ ಶಿಕ್ಷಕ ಅಸಭ್ಯವಾಗಿ ವರ್ತಿಸಿ, ಅವಾಚ್ಯ ಪದಗಳನ್ನು ಬಳಸಿದ ಆರೋಪ ಮಾಡಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿತ್ತು.
ಶಿಕ್ಷಕ ಕರ್ನಾಟಕ ನಾಗರಿಕ ಸೇವಾ ನಿಯಮ ಹಾಗೂ ಉಪ ನಿಯಮಗಳು ಉಲ್ಲಂಘಿಸಿರುವ ಹಾಗೂ ಕರ್ತವ್ಯ ಲೋಪ ಎಸಗಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ.
ಶಿಕ್ಷಣ ಇಲಾಖೆಯ ಅಧಿಕಾರಿಗಳ ಬಗ್ಗೆ ಅಸಭ್ಯ ಹೇಳಿಕೆ ನೀಡಿದ್ದರಿಂದ ಶಿಸ್ತುಕ್ರಮ ಜರುಗಿಸಲಾಗಿದೆ. ಅಮಾನತು ಅವಧಿಯಲ್ಲಿ ಕೇಂದ್ರ ಸ್ಥಾನ ಬಿಡಬಾರಾದುʼ ಎಂದು ಅಮಾನತು ಆದೇಶದಲ್ಲಿ ತಿಳಿಸಿದ್ದಾರೆ.
This video cannot be played in your browser. Open the video directly

ಇದನ್ನೂ ಓದಿ : ‘ಆಳಂದ’ ಕ್ಷೇತ್ರದಲ್ಲಿ ಭಾರೀ ಮತ ಕಳ್ಳತನ; ಸಿಐಡಿ ತನಿಖೆಗೆ ಸ್ಪಂದಿಸದ ರಾಜ್ಯ ಚುನಾವಣಾ ಆಯೋಗ!





