ಕಲಬುರಗಿ | ಸಿಮೆಂಟ್ ಕಂಪೆನಿಯಿಂದ ಅನ್ಯಾಯ‌; ಬೇಸತ್ತ ಕುಟುಂಬ ಸಾಮೂಹಿಕ ಆತ್ಮಹತ್ಯೆಗೆ ಯತ್ನ

Date:

ಸೇಡಂ ತಾಲೂಕು ವ್ಯಾಪ್ತಿಯಲ್ಲಿ ಇರುವ ವಿಕಾಟ ಸಾಗರ ಸಿಮೆಂಟ್ ಕಂಪೆನಿಗೆ ಜಮೀನು ನೀಡಿದ್ದ ಕುಟುಂಬಕ್ಕೆ ಉದ್ಯೋಗ ನೀಡದೆ ವಂಚಿಸುತ್ತಿರುವ ಕಂಪೆನಿಯ ಆಡಳಿತ ಮಂಡಳಿ ಧೋರಣೆ ಖಂಡಿಸಿ ಅನ್ಯಾಯಕ್ಕೊಳಗಾದ ಕುಟುಂಬ ಸಾಮೂಹಿಕ ಆತ್ಮಹತ್ಯೆಗೆ ಯತ್ನಸಿದ ಘಟನೆ ನಡೆದಿದೆ.

- Advertisement -

ʼಚಿಂಚೋಳಿ ತಾಲೂಕಿನ ಚಿತ್ರಸಾಲಿ ಗ್ರಾಮದ ಈರಪ್ಪ ಮಲ್ಲಪ್ಪ ಬೈಕೋರ್ ಎಂಬುವವರು ಕಂಪೆನಿಗೆ 8 ಎಕರೆ ಕೃಷಿ ಭೂಮಿ ನೀಡಿದ್ದರು. ಭೂಮಿ ನೀಡಿದ ಮಾಲೀಕರಿಗೆ ಪರಿಹಾರದ ಜೊತೆಗೆ ಕುಟುಂಬದ ಒಬ್ಬ ಸದಸ್ಯನಿಗೆ ಖಾಯಂ ನೌಕರಿ ಕೊಡಬೇಕೆಂದು ಕಂಪೆನಿಯೊಂದಿಗೆ ಒಪ್ಪಂದವಾಗಿತ್ತು. ಆದರೆ ಜಮೀನು ನೀಡಿದ್ದ ಮಾಲೀಕ ಈರಪ್ಪ ಅವರು ಮೃತಪಟ್ಟ ಹಿನ್ನೆಲೆ ಕಂಪೆನಿಯ ಆಡಳಿತ ಮಂಡಳಿಯವರ ಕುಟುಂಬದ ಯಾವುದೇ ಸದಸ್ಯರಿಗೆ ನೌಕರಿ ನೀಡದೆ ಅನ್ಯಾಯ ಎಸಗಿದ್ದಾರೆ ʼಎಂದು ಮೃತ ಈರಪ್ಪನವರ ಪತ್ನಿ ಲಕ್ಷ್ಮೀ ಬೈಕೋರ್ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ಕಂಪೆನಿಯು ಸೇಡಂ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಗೆ ಬರುವುದರಿಂದ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅವರ ಗಮನಕ್ಕೆ ತರಲಾಗಿತ್ತು. ಸಚಿವರು ಕಂಪೆನಿ ಆಡಳಿತ ಮಂಡಳಿಯೊಂದಿಗೆ ಮಾತನಾಡಿ, ‘ನಿಯಮಗಳ ಪ್ರಕಾರ ಕುಟುಂಬಕ್ಕೆ ಒಂದು ಉದ್ಯೋಗ ಕಡ್ಡಾಯವಾಗಿ ನೀಡಲೇಬೇಕಾಗುತ್ತದೆ’ ಎಂದು ತಿಳಿಸಿದರು. ಆದರೆ ಕಂಪೆನಿ ಆಡಳಿತ ಮಂಡಳಿ ಮುಖ್ಯಸ್ಥ ಕೊದಂಡರಾಮರೆಡ್ಡಿ ಅವರು ಸಚಿವರ ಮಾತಿಗೂ ಬೆಲೆ ಕೊಡದೆ ಕಂಪೆನಿಗೆ ಅಲೆದಾಡಿಸುತ್ತಿರವುದರಿಂದ ಬೇಸತ್ತು 22 ವರ್ಷ ವಯಸ್ಸಿನ ಮಗ, ಮಗಳೊಂದಿಗೆ ಕಂಪೆನಿ ಎದುರುಗಡೆ ಪ್ರತಿಭಟನೆ ನಡೆಸಿ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದರು.

ಸುದ್ದಿ ತಿಳಿದು ಸ್ಥಳಕ್ಕೆ ದಾವಿಸಿದ ಚಿಂಚೋಳಿ ಪಿಎಸ್ಐ ಗಂಗಮ್ಮ ಅವರು ಪ್ರತಿಭಟನಾಕಾರರಿಂದ ಪೆಟ್ರೋಲ್ ಡಬ್ಬಿ ಕಸಿದುಕೊಂಡು ಅನಾಹುತ ತಪ್ಪಿಸಿದರು.

ಸಚಿವರ ತವರು ಕ್ಷೇತ್ರದಲ್ಲಿ ಬಡ ಕುಟುಂಬಕ್ಕೆ ಅನ್ಯಾಯವಾಗುತ್ತಿದ್ದು, ಕೃಷಿ ಭೂಮಿ ಕಳೆದುಕೊಂಡು ಉಪಜೀವನಕ್ಕಾಗಿ ಪರಿತಪ್ಪಿಸುತ್ತಿರುವ ಕುಟುಂಬಕ್ಕೆ ಜನಪ್ರತಿನಿಧಿಗಳು ನೆರವಿಗೆ ಬಾರದಿರುವುದಕ್ಕೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗುತ್ತಿದೆ.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ನಾರಾಯಣಪುರ ಎಡ-ಬಲದಂಡೆ ಕಾಲುವೆಗಳಿಗೆ ನೀರು ಹರಿಸಲು ರೈತರ ಬೃಹತ್ ಪ್ರತಿಭಟನೆ

ಮುಖಂಡರಾದ ಮಾರುತಿ ಗಂಜಗಿರಿ, ಗೋಪಾಲ ಗಾರಂಪಳ್ಳಿ, ದಸ್ತಪ್ಪ ಮರಪಳ್ಳಿ ಅವರು ಸ್ಥಳಕ್ಕೆ ತೆರಳಿ ಕುಟುಂಬಕ್ಕೆ ಬೆಂಬಲವಾಗಿ ನಿಂತು ನ್ಯಾಯಕ್ಕಾಗಿ ದನಿ ಎತ್ತಿದರು.

ವರದಿ: ವಾಲಿಂಟರ್ ವೆಂಕಟೇಶ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು: ಇಬ್ಬರು ಸಾವು

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಮೃತಪಟ್ಟಿದ್ದು,...

ಹಾವೇರಿ | ರದ್ದು ಪಡಿಸಿದ ಎಂಟು ಕೊರ್ಸಗಳನ್ನು  ಮುಂದುವರೆಸುವಂತೆ ಅತಿಥಿ ಉಪನ್ಯಾಸಕರ ಧರಣಿಗೆ ಡಿವೈಎಫ್ಐ-ಎಸ್ಎಫ್ಐ ಬೆಂಬಲಿಸಿ ಪ್ರತಿಭಟನೆ

ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ರದ್ದುಪಡಿಸಿದ ಎಂಟು ಕೋರ್ಸ್ ಗಳು ಮುಚ್ಚದೇ ಮುಂದುವರೆಸುವಂತೆ...

ಯಾದಗಿರಿ | ಎರಡು ವರ್ಷವಾದರೂ ಪೂರ್ಣಗೊಳ್ಳದ ರಸ್ತೆ ಕಾಮಗಾರಿ: ರೈತ ಸಂಘ ಆಕ್ರೋಶ

ಸುರಪುರ ತಾಲೂಕಿನ ರುಕ್ಕಾಪೂರದಿಂದ ಬೇವಿನಾಳ ಎಸ್.ಎಚ್. ಗ್ರಾಮದವರೆಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯ...

ಕಲಬುರಗಿ | ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಗೈರು ಆರೋಪ: ಕರ್ತವ್ಯಲೋಪದ ವಿರುದ್ಧ ಕ್ರಮಕ್ಕೆ ಆಗ್ರಹ

ಅಫಜಲಪುರ ತಾಲೂಕಿನ ಸ್ಟೇಷನ್ ಗಾಣಗಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತುರ್ತು ಸಂದರ್ಭದಲ್ಲಿ...