ಕಲಬುರಗಿ | ಸರ್ಕಾರಿ ಅನುದಾನ ದುರ್ಬಳಕೆ; ಸಹಾಯಕ ಇಂಜಿನಿಯರ್‌ಗಳ ಅಮಾನತಿಗೆ ಜಯ ಕರ್ನಾಟಕ ಜನಪರ ವೇದಿಕೆ ಆಗ್ರಹ

Date:

Advertisements

ಸರ್ಕಾರದ ಅನುದಾನ ದುರ್ಬಳಕೆ ಮಾಡಿಕೊಂಡಿರುವ ಕಲಬುರಗಿ ಜಿಲ್ಲೆಯ ಪಂಚಾಯತ್ ರಾಜ್‌ ಇಂಜಿನಿಯರಿಂಗ್ ಇಲಾಖೆಯ ಸಹಾಯಕ ಇಂಜಿನಿಯರ್ ಬಾಲಕೃಷ್ಣ ಹಾಗೂ ಹಿಂದಿನ ಕಾರ್ಯನಿರ್ವಾಹಕ ಅಭಿಯಂತರರಾದ ಮೋನಪ್ಪಾ ಅವರನ್ನು ಅಮಾನತುಗೊಳಿಸಬೇಕು ಎಂದು ಜಯ ಕರ್ನಾಟಕ ಜನಪರ ವೇದಿಕೆ ಆಗ್ರಹಿಸಿದೆ.

ಕಲಬುರಗಿಯ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಕಛೇರಿ ಎದುರುಗಡೆ ಪ್ರತಿಭಟನೆ ನಡೆಸುವುದರ ಮೂಲಕ ಇಂಜಿನಿಯರಿಂಗ್ ಅಧೀಕ್ಷಕರಿಗೆ ಮನವಿ ಪತ್ರ ಸಲ್ಲಿಸಿದರು.

ಹಿಂದಿನ ಕಾರ್ಯನಿರ್ವಾಹಕ ಅಭಿಯಂತರರಾದ ಮೋನಪ್ಪಾ ಅವರು ಮತ್ತು ಅಫ್ಜಲಪುರ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಬಾಲಕೃಷ್ಣ ಅವರು ಮತ್ತು ಸಂಬಂಧಪಟ್ಟ ಕಿರಿಯ ಅಭಿಯಂತರರು ಸೇರಿಕೊಂಡು ತಮ್ಮ ಕರ್ತವ್ಯ ಮರೆತು ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. 2022-23ನೇ ಸಾಲಿನಲ್ಲಿ 61 ಕಾಮಗಾರಿಗಳು ಮಾಡದೆ ಸರ್ಕಾರದ ರೂ.2,09,70,000-00(ಎರಡು ಕೋಟಿ ಒಂಬತ್ತು ಲಕ್ಷದ ಎಪ್ಪತ್ತು ಸಾವಿರ ) ರೂಪಾಯಿಗಳ ಮೊತ್ತದ ಸರ್ಕಾರದ ಅನುದಾನ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

Advertisements

ದುರ್ಬಳಕೆ ಮಾಡಿಕೊಂಡಿರುವ ಭ್ರಷ್ಟ ಅಧಿಕಾರಿಗಳಾದ ಮೋನಪ್ಪಾ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಬಾಲಕೃಷ್ಣ ಅವರನ್ನು ಅಮಾನತುಗೊಳಿಸಿ ಅವರ ವಿರುದ್ಧ ಕಾನುನಿನ ಸುಕ್ತವಾದ ಕ್ರಮ ಮಾಡಬೆಕೆಂದು ಒತ್ತಾಯಿಸಿ, ಮನವಿ ಪತ್ರ ಸಲ್ಲಿಸಿದರು.

WhatsApp Image 2024 10 17 at 6.48.52 PM

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಬಸವರಾಜ ಕೊರಳ್ಳಿ ಜಿಲ್ಲಾ ಉಪಾಧ್ಯಕ್ಷರಾದ, ವರದ ಸ್ವಾಮಿ ಹಿರೇಮಠ ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ ಅರುಣ್ ಕುಮಾರ್ ನಾಮದರ, ಆಸಿಫ್ ರುದ್ರವಾಡಿ, ಜಿಲ್ಲಾ ಪದಾಧಿಕಾರಿ ಸಂದೀಪ ಭೀಮಳ್ಳಿ, ರಾಹುಲ ಸರ್, ನಾಗರಾಜ ಕೋಗನೂರ, ಅಫ್ಜಲಪುರ ತಾಲೂಕು ಅಧ್ಯಕ್ಷರಾದ ಸದಾನಂದ ಕ್ಷತ್ರಿ, ಜೇವರ್ಗಿ ತಾಲೂಕು ಅಧ್ಯಕ್ಷರಾದ ಸತೀಶ ಜಾಗಿರದಾರ, ವಿಕ್ರಮ ಚಿಂಚೋಳಿ ತಾಲೂಕು ಅಧ್ಯಕ್ಷರಾದ ರಮೇಶ, ಯಡ್ರಾಮೀ ತಾಲೂಕು ಅಧ್ಯಕ್ಷರಾದ ಜಗದೀಶ ಅಫ್ಜಲಪುರ, ತಾಲೂಕು ಉಪಾಧ್ಯಕ್ಷರಾದ ಮುತ್ತು ಕುರಿಮನಿ, ಶರಣು ದೇವನಾಜಿ, ಸಚಿನ, ಆಕಾಶ ಕೊತಲಿ, ಲಿಂಗರಾಜ ಸ್ವಾಮಿ ನೀಲಕಂಠ ಸೇರಿಕಾರ ಹಾಗೂ ಅನೇಕ ಜಯ ಕರ್ನಾಟಕ ಕಾರ್ಯಕರ್ತರು ಭಾಗವಹಿಸಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X