ಕಲಬುರಗಿ | ಆಯಾ ಜಿಲ್ಲೆಯ ಸಚಿವರಿಗೆ ಜಿಲ್ಲಾ ಉಸ್ತುವಾರಿ ನೀಡಲು ಒತ್ತಾಯ

Date:

ಸಿದ್ಧರಾಮಯ್ಯ ನೇತೃತ್ವದ ನೂತನ ಸರ್ಕಾರವು ರಾಜ್ಯದಲ್ಲಿ ಆಯಾ ಜಿಲ್ಲೆಯಿಂದ ಶಾಸಕರಾಗಿ, ಮಂತ್ರಿಗಳಾಗಿರುವವರನ್ನೇ ಆ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನಾಗಿ ನೇಮಿಸಬೇಕು ಎಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಲಕ್ಷ್ಮಣ ದಸ್ತಿ ಒತ್ತಾಯಿಸಿದ್ದಾರೆ.

- Advertisement -

“ವಿಶೇಷವಾಗಿ ಹಿಂದುಳಿದ 371(ಜೆ) ಕಲಂ ಸಂವಿಧಾನದ ವಿಶೇಷ ಸ್ಥಾನವಾನ ಪಡೆದಿರುವ ಕಲ್ಯಾಣ ಕರ್ನಾಟಕ ಪ್ರದೇಶದ ಏಳು ಜಿಲ್ಲೆಗಳ ಕಲ್ಯಾಣಕ್ಕಾಗಿ ಆಯಾ ಜಿಲ್ಲೆಗಳ ಸಚಿವರನ್ನೇ ಜಿಲ್ಲಾ ಉಸ್ತುವಾರಿ ಮಂತ್ರಿಗಳನ್ನಾಗಿ ನೇಮಿಸಬೇಕು.
ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ ಬಹುತೇಕ ಜಿಲ್ಲೆಗಳಿಗೆ ಬೇರೆ ಭಾಗದ ಸಚಿವರನ್ನೇ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ‌ದ್ದರು. ಇದರಿಂದ ಅಭಿವೃದ್ಧಿ ಕಾರ್ಯಗಳು ನಡೆಯದೆ, ಪ್ರಗತಿ ಪರಿಶೀಲನೆ ಸಭೆಗಳೂ ನಿರಂತರವಾಗಿ ಕೈಗೊಳ್ಳದೆ ಸಂಪೂರ್ಣ ನಿರ್ಲಕ್ಷ್ಯ ಮಾಡಲಾಗಿತ್ತು” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಬೀದರ್ ಜಿಲ್ಲೆ ಸೇರಿದಂತೆ ಕಲ್ಯಾಣದ ಆನೇಕ ಜಿಲ್ಲೆಗಳಲ್ಲಿ 15ನೇ ಆಗಸ್ಟ್, 17ನೇ ಸೆಪ್ಟೆಂಬರ್‌ನಂತಹ ರಾಷ್ಟ್ರೀಯ ಹಬ್ಬ ಮತ್ತು ನಾಡಹಬ್ಬದಂದು ಉಸ್ತುವಾರಿ ಸಚಿವರು ಭಾಗವಹಿಸದೆ ನಿರ್ಲಕ್ಷ್ಯ ಧೋರಣೆ ಅನುಸರಿಸಿದರು” ಎಂದು ಹೇಳಿದರು.

“ಜಿಲ್ಲಾ ಉಸ್ತುವಾರಿ ಸಚಿವರ ಅನುಪಸ್ಥಿತಿಯಲ್ಲಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳೇ ಧ್ವಜಾರೋಹಣ ಕಾರ್ಯಕ್ರಮ ಸೇರಿದಂತೆ ಇತರೆ ಅಧಿಕೃತ ಕಾರ್ಯಕ್ರಮಗಳನ್ನು ನಡೆಸಿಕೊಂಡು ಹೋಗಿದ್ದರು. ಬೇರೆ ಜಿಲ್ಲೆಯ ಸಚಿವರ ನೇಮಕದಿಂದ ಅಭಿವೃದ್ಧಿ ಕುಂಠಿತವಾಗುವದಲ್ಲದೆ, ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ರಾಜ್ಯಮಟ್ಟದಲ್ಲಿ ನಾಯಕತ್ವವೂ ಬೆಳೆಯುವುದಿಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಸಹಕರಿಸಿ; ಪ್ರಭು ಚವ್ಹಾಣ ಸೂಚನೆ

“ಹಿಂದಿನ ಸರ್ಕಾರದ ಪ್ರಯೋಗದ ವೈಫಲ್ಯವನ್ನು ಗಮನದಲ್ಲಿಟ್ಟುಕೊಂಡು ಕಲ್ಯಾಣ ಕರ್ನಾಟಕ ಪ್ರದೇಶದ ಏಳು ಜಿಲ್ಲೆಗಳಿಗೆ ಆಯಾ ಜಿಲ್ಲಾ ಸಚಿವರನ್ನೇ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಕಲ್ಯಾಣ ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಗೆ, 371ನೇ(ಜೆ) ಕಲಂ ಪರಿಣಾಮಕಾರಿ ಅನುಷ್ಠಾನಕ್ಕೆ, ನಮ್ಮ ಪಾಲಿನ ಖಾಲಿ ಇರುವ ಹುದ್ದೆಗಳ ಭರ್ತಿ ಸೇರಿದಂತೆ ಈ ಭಾಗದ ಎಲ್ಲ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ನೂತನ ಸರ್ಕಾರ ಈ ಬಗ್ಗೆ ಸಕರಾತ್ಮಕವಾಗಿ ಸ್ಪಂದಿಸಿ, ಆಯಾ ಜಿಲ್ಲೆಯ ಸಚಿವರನ್ನೇ ಜಿಲ್ಲೆಯ ಉಸ್ತುವಾರಿ ನೀಡಬೇಕು” ಎಂದು ಸಮಿತಿ ಪರವಾಗಿ ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...

ಉಡುಪಿ | ಕಾರ್ಕಳದಲ್ಲಿ ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು–ಬಸ್ ನಡುವೆ ಅಪಘಾತ

ಕಾರ್ಕಳ–ಮೂಡುಬಿದಿರೆ ರಸ್ತೆಯ ಸಾಣೂರು ಗ್ರಾಮದ ವ್ಯಾಪ್ತಿಯಲ್ಲಿ ಮಾಜಿ ಸಚಿವ ರಮಾನಾಥ ರೈ...

ಕಲಬುರಗಿ | ಲೋಕ ಅದಾಲತ್‌ನಲ್ಲಿ 179 ಪ್ರಕರಣ ಇತ್ಯರ್ಥ; ₹4.93 ಕೋಟಿ ಪರಿಹಾರಕ್ಕೆ ಆದೇಶ

ನಗರದ ಹೈಕೋರ್ಟ್ ಪೀಠದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮೋಟಾರು...