ಕಲಬುರಗಿ | ಅಪಹರಣವಾಗಿದ್ದ ಮಗುವನ್ನು ಪತ್ತೆ ಹಚ್ಚಿದ ಪೊಲೀಸರು: ಕೊನೆಗೂ ತಾಯಿಯ ಮಡಿಲಿಗೆ

Date:

Advertisements

ಕಲಬುರಗಿಯ ಜಿಮ್ಸ್ ಆವರಣದ ತಾಯಿ ಮತ್ತು ಮಕ್ಕಳ ಚಿಕಿತ್ಸಾ ವಿಭಾಗದಿಂದ ನವಜಾತ ಶಿಶುವನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬುಧವಾರ ಮೂವರು ಮಹಿಳೆಯರನ್ನು ಬಂಧಿಸಿದ್ದು, ಮಗುವನ್ನು ಸುರಕ್ಷಿತವಾಗಿ ತಾಯಿ ಮಡಿಲಿಗೆ ಒಪ್ಪಿಸಲಾಗಿದೆ ಎಂದು ಕಲಬುರಗಿ ನಗರ ಪೊಲೀಸ್ ಕಮಿಷನರ್ ಶರಣಪ್ಪ ಎಸ್.ಡಿ ತಿಳಿಸಿದರು.

ಚಿತ್ತಾಪುರ ತಾಲೂಕಿನ ರಾವೂರು ಗ್ರಾಮದ ಕಸ್ತೂರಿ ರಾಮಕೃಷ್ಣ ದಂಪತಿಗೆ ಸೇರಿದ ಮಗುವನ್ನು ನ.25ರಂದು ಜಿಮ್ಸ್ ಆಸ್ಪತ್ರೆಯಿಂದ ಅಪಹರಿಸಿದ್ದರು. ಕಲಬುರಗಿಯ ಎಂಎಸ್‌ಕೆ ಮಿಲ್ ಸಮೀಪದ ಬಡಾವಣೆಯ ನಿವಾಸಿಗಳಾದ ಉಮೇರಾ ಆವೇಜ್ ಶೇಖ್ (30), ನಸ್ರೀನ್ ಬಾನು ಅಬ್ದುಲ್ ರಹೀಂ ಶೇಖ್ (32) ಹಾಗೂ ಫಾತಿಮಾ ಫಯಾಜ್ ಶೇಖ್ (35) ಬಂಧಿತ ಆರೋಪಿಗಳು. ಈ ಮೂವರು ನರ್ಸ್‌ ಸೋಗಿನಲ್ಲಿ ಆಸ್ಪತ್ರೆಗೆ ಬಂದು ಮಗುವನ್ನು ಅಪಹರಿಸಿದ್ದರು.

ಆರೋಪಿಗಳ ಬಂಧನಕ್ಕೆ ಪ್ರತ್ಯೇಕ ತಂಡ ರಚಿಸಲಾಗಿತ್ತು. ಕಳೆದ ಎರಡು ದಿನಗಳ ಸತತ ಶೋಧ ಕಾರ್ಯಾಚರಣೆ ಬಳಿಕ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಯಶಸ್ವಿಯಾಗಿದ್ದಾರೆ ಎಂದು ಪೊಲೀಸ್‌ ಕಮಿಷನರ್‌ ಶರಣಪ್ಪ ಮಾಹಿತಿ ನೀಡಿದರು.

Advertisements

ಮಗುವನ್ನು ಕದ್ದು ಪರಾರಿಯಾಗುತ್ತಿದ್ದ ವೇಳೆ ಆಸ್ಪತ್ರೆಯ ಸಿಸಿಟಿವಿಯಲ್ಲಿ ದಾಖಲಾಗಿದ್ದ ದೃಶ್ಯಾವಳಿ ಆಧರಿಸಿ ಆರೋಪಿಗಳ ಬೆನ್ನು ಹತ್ತಿದ ಪೊಲೀಸರು, ಕೊನೆಗೂ ಆರೋಪಿಗಳನ್ನು ಬಂಧಿಸಿ ಮಗುವನ್ನು ರಕ್ಷಿಸಿದ್ದಾರೆ. ಈ ಘಟನೆ ಕುರಿತು ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಡಿಸಿಪಿಗಳಾದ ಕನಿಕಾ ಸಿಕ್ರಿವಾಲ್ ಹಾಗೂ ಪ್ರವೀಣ ನಾಯಕ್ ನೇತೃತ್ವದಲ್ಲಿ ತನಿಖಾ ತಂಡ ರಚಿಸಲಾಗಿತ್ತು ಎಂದು ವಿವರಿಸಿದರು.

ಆರೋಪಿಗಳು ಮಗುವನ್ನು 50 ಸಾವಿರಕ್ಕೆ ಮಾರಾಟ ಮಾಡಲು ಒಪ್ಪಂದ ಮಾಡಿಕೊಂಡಿದ್ದರು. ಈ ಕುರಿತು ಅವರು ಮುಂಗಡವಾಗಿ 25 ಸಾವಿರ ಹಣ ಕೂಡ ಪಡೆದುಕೊಂಡಿದ್ದರು ಎಂದು ತಿಳಿದು ಬಂದಿದೆ. ಓರ್ವ ಮಹಿಳೆಗೆ 7 ವರ್ಷದಿಂದ ಮಗು ಆಗಿರುವುದಿಲ್ಲ, ಆಕೆಗೆ ಮಾರಾಟ ಮಾಡಲು ಈ ಮಗುವನ್ನು ಅಪಹರಿಸಲಾಗಿದೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಬಿಹಾರ ಬೋಧ್‌ ಗಯಾದ ಸಂಪೂರ್ಣ ಆಡಳಿತ ಬೌದ್ಧರಿಗೆ ನೀಡಬೇಕು: ಡಾ. ಭಗವಂತ ಅನ್ವಾರ

ಮಗುವಿನ ಅಪಹರಣದ ಮಾಹಿತಿ ಲಭಿಸುತ್ತಿದ್ದಂತೆಯೇ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಜಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಆದಷ್ಟು ಶೀಘ್ರ ಅಪಹೃತ ಮಗುವನ್ನು ಪತ್ತೆ ಮಾಡಿ ಸುರಕ್ಷಿತವಾಗಿ ತಾಯಿಯ ಮಡಿಲಿಗೆ ಸೇರಿಸುವ ವಾಗ್ದಾನ ಮಾಡಿದ್ದರು. ಮೇಲಾಗಿ, ಘಟನೆಗೆ ಸಂಬಂಧಿಸಿದಂತೆ ಶೋಧ ಕಾರ್ಯ ಚುರುಕುಗೊಳಿಸುವಂತೆ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X